ಸಿದ್ದರಾಮಯ್ಯ ಅಭಿಮಾನಿಗಳು, ಹಿತೈಷಿಗಳಿಂದ ‘ಸಿದ್ದರಾಮೋತ್ಸವ’
Team Udayavani, Jun 29, 2022, 4:55 PM IST
ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಮಾನಿಗಳು, ಹಿತೈಷಿಗಳು ಸೇರಿ ಸಿದ್ದರಾಮೋತ್ಸವ ಆಚರಿಸಲು ಮುಂದಾಗಿದ್ದಾರೆ.
ಈ ಕುರಿತು ಹೆಚ್.ಸಿ ಮಹಾದೇವಪ್ಪ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಒಬ್ಬ ಜನ ನಾಯಕ. ರಾಜ್ಯದಲ್ಲಿ ಅವರದೇ ಆದ ದೊಡ್ಡ ಅಭಿಮಾನಿ ಬಳಗವೇ ಇದೆ. ಅವರು ಎಂದೂ ಹುಟ್ಟುಹಬ್ಬ ಆಚರಿಸಿಕೊಂಡವರಲ್ಲ. ಅದು ಅವರಿಗೆ ಇಷ್ಟವೂ ಇಲ್ಲ.ಎಲ್ಲರನ್ನೂ ಒಳಗೊಂಡಂತೆ ಸಮಾವೇಶ ನಡೆಸಲಾಗುವುದು ಎಂದರು.
ಮೊದಲು ಸಿದ್ದರಾಮಯ್ಯ ಬಳಿ ಇದಕ್ಕೆ ಒಪ್ಪಿಗೆ ಪಡೆಯುತ್ತೇವೆ. ಆ ಬಳಿಕ ಎಲ್ಲವೂ ನಡೆಯಲಿದೆ. ಈಗಾಗಲೇ ಅಭಿಮಾನಿಗಳು ಆಚರಣೆಗೆ ಮುಂದಾಗಿದ್ದಾರೆ ಎಂದರು.
ಅವರು ಸಿಎಂ ಆಗಿದ್ದಾಗ ಜಾರಿಗೆ ತಂದಂತಹ ಯೋಜನೆಗಳನ್ನ ಜನರು ಈಗಲೂ ಮೆಲುಕು ಹಾಕುತ್ತಾರೆ. ಹೇಳಿಕೇಳಿ ಇದು ಚುನಾವಣಾ ವರ್ಷ. ಹಾಗಾಗಿ ಅವರ ಅವಧಿಯ ಜನಪರ ಯೋಜನೆಗಳನ್ನ ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ ಎಂದರು.