ಸಿದ್ದು ಬಣ್ಣ ಬಯಲು ಮಾಡುವೆ: ಬಿಎಸ್ವೈ
Team Udayavani, Feb 22, 2020, 3:04 AM IST
ಮೈಸೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಿಗೆ ಜನ ಬಡಿಗೆ ತೆಗೆದುಕೊಂಡು ಹೊಡೆಯಲಿದ್ದಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕಿಡಿಕಾರಿರುವ ಸಿಎಂ ಯಡಿಯೂರಪ್ಪ, ಇನ್ನು ಆರು ತಿಂಗಳು ಕಾಯಲಿ, ಸಿದ್ದರಾಮಯ್ಯ ಅವರ ಬಣ್ಣವನ್ನು ಬಯಲು ಮಾಡುತ್ತೇನೆಂದು ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ನಮ್ಮ ಸರ್ಕಾರ ರಚನೆಯಾಗಿ ಇನ್ನೂ ಏಳು ತಿಂಗಳಾಗಿಲ್ಲ.
ಆಗಲೇ ಪ್ರಶ್ನೆ ಮಾಡುತ್ತಿದ್ದೀರಾ ಎಂದು ಕಿಡಿ ಕಾರಿದರು. ಸಿದ್ದರಾಮಯ್ಯನವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರು. ಎಚ್.ಡಿ.ಕುಮಾರಸ್ವಾಮಿ ಒಂದೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ನೀವೇನು ಮಾಡಿದ್ರಿ ಎಂಬುದನ್ನು ಒಮ್ಮೆ ಮೆಲುಕು ಹಾಕಿ. ಜನ ಯಾರಿಗೆ ಬಡಿಗೆ ತೆಗೆದುಕೊಂಡು ಹೊಡೆಯುತ್ತಾರೆ ಎಂಬುದು ಗೊತ್ತಾಗುತ್ತದೆ. ಎಲ್ಲವನ್ನೂ ಬಯಲು ಮಾಡಲು ನಾನು ಸಿದ್ಧನಿದ್ದೇನೆ. ಆರು ತಿಂಗಳು ತಾಳ್ಮೆಯಿಂದ ಕಾಯಿರಿ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ