ಸಿದ್ದು ಸಂಪುಟ ಸಂಪೂರ್ಣ


Team Udayavani, Sep 2, 2017, 7:53 AM IST

02-RAJYA-1.jpg

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಆರನೇ ಬಾರಿಯ ಸಂಪುಟ ವಿಸ್ತರಣೆಯಲ್ಲಿ ನಿರೀಕ್ಷೆಯಂತೆ ವಿಧಾನ ಪರಿಷತ್‌ ಸದಸ್ಯರಾದ ಎಚ್‌.ಎಂ.ರೇವಣ್ಣ, ಆರ್‌.ಬಿ.ತಿಮ್ಮಾಪುರ ಹಾಗೂ ಗೀತಾ ಮಹದೇವ ಪ್ರಸಾದ್‌ (ಎಂ.ಸಿ.ಮೋಹನ್‌ ಕುಮಾರಿ) ಸಚಿವರಾಗಿ ಸೇರ್ಪಡೆ ಯಾಗಿದ್ದಾರೆ. ಈ ಮೂಲಕ ರಾಜ್ಯ ಸಚಿವ ಸಂಪುಟ ಸಂಪೂರ್ಣ ಭರ್ತಿಯಾಗಿದೆ. ಶುಕ್ರವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಎಚ್‌.ಎಂ.ರೇವಣ್ಣ ಹಾಗೂ ತಿಮ್ಮಾಪುರ್‌ ಸಂಪುಟ ದರ್ಜೆ ಸಚಿವರಾಗಿ ಹಾಗೂ ಗೀತಾ ಮಹದೇವ ಪ್ರಸಾದ್‌ ರಾಜ್ಯ ಸಚಿವೆಯಾಗಿ ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯ್‌ವಾಲಾ ನೂತನ ಸಚಿವರಿಗೆ ಪ್ರಮಾಣ ಬೋಧಿಸಿದರು. 

ಎಚ್‌.ಎಂ.ರೇವಣ್ಣ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಆರ್‌.ಬಿ. ತಿಮ್ಮಾಪುರ ಶ್ರದ್ದಾಪೂರ್ವಕವಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಮಾತ್ರ ಹೇಳಿದರು. ಎಂ.ಸಿ. ಮೋಹನ್‌ಕುಮಾರಿ ಮಲೆ ಮಹದೇಶ್ವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರಿಗೆ ಖಾತೆ ಹಂಚಲಾ ಗಿದ್ದು, ರೇವಣ್ಣರಿಗೆ ಸಾರಿಗೆ, ತಿಮ್ಮಾಪುರ್‌ಗೆ ಅಬಕಾರಿ, ಗೀತಾ ಮಹದೇವ ಪ್ರಸಾದ್‌ ಅವರಿಗೆ ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಹೊಣೆಗಾರಿಕೆ ನೀಡಲಾಗಿದೆ. ಇದರೊಂದಿಗೆ ಕೆಲವು ಸಚಿವರ ಖಾತೆಗಳೂ ಬದಲಾಗಿದ್ದು, ಸಾರಿಗೆ ಇಲಾಖೆ ರೇವಣ್ಣ ಅವರಿಗೆ ನೀಡಿರುವುದರಿಂದ ರಾಮ ಲಿಂಗಾರೆಡ್ಡಿ ಅವರಿಗೆ ಗೃಹಖಾತೆ ಜವಾಬ್ದಾರಿ ನೀಡಲಾಗಿದೆ. ಸಣ್ಣ ಕೈಗಾರಿಕೆ ಖಾತೆಯನ್ನು ಗೀತಾ ಮಹದೇ ವ ಪ್ರಸಾದ್‌ಗೆ ನೀಡಿರುವುದರಿಂದ ರಮೇಶ್‌ ಜಾರಕಿಹೊಳಿ ಅವರಿಗೆ ಸಹಕಾರ ಖಾತೆ ನೀಡಲಾಗಿದೆ. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಬಳಿಯಿದ್ದ ಕೌಶಲ್ಯಾಭಿವೃದ್ಧಿ ಇಲಾಖೆ ಹೆಚ್ಚುವರಿಯಾಗಿ ನೀಡಲಾಗಿದೆ.

ಸಂಭ್ರಮ: ಪ್ರಮಾಣ ವಚನ ಸಮಾರಂಭದಲ್ಲಿ ನೂತನ ಸಚಿವರ ಬೆಂಬಲಿಗರು ಹಾಗೂ ಕಾಂಗ್ರೆಸ್‌ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ರಾಜಭವನದ ಒಳಗೆ ಮತ್ತು ಹೊರಗೆ ಜಮಾಯಿಸಿದ್ದ ಬೆಂಬಲಿಗರು ತಮ್ಮ ನಾಯಕರು ಪ್ರಮಾಣ ವಚನ ಸ್ವೀಕರಿಸುವಾಗ ಘೋಷಣೆಗಳ ಮೂಲಕ ಸಂಭ್ರಮಿಸಿದರು. ರಾಜಭವನದ ಹೊರಗೆ ಬೃಹತ್‌ ಪರದೆಯ ಟಿವಿ ಅಳವಡಿಸಲಾಗಿತ್ತು.

ಕ್ಯಾಬಿನೆಟ್‌ ಗ್ರೇಡ್‌
ಇದೇ ವೇಳೆ ರಾಜ್ಯ ಖಾತೆ ಸಚಿವರಾಗಿದ್ದ ಪ್ರಿಯಾಂಕ್‌ ಖರ್ಗೆ, ರುದ್ರಪ್ಪ ಲಮಾಣಿ, ಈಶ್ವರ್‌ ಖಂಡ್ರೆ, ಪ್ರಮೋದ್‌ ಮದ್ವರಾಜ್‌ಗೆ ಸಂಪುಟ ದರ್ಜೆಗೆ ಬಡ್ತಿ ನೀಡಲಾಗಿದೆ.

ಒಬ್ಬ ದಲಿತ ಸಚಿವನಾಗುವುದನ್ನು ಸಹಿಸದೆ ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ನಾನು ಕಾನೂನು ರೀತಿ 
ನಡೆದುಕೊಂಡಿದ್ದೇನೆ. ಕಾನೂನು ರೀತಿಯೇ ಅವರಿಗೆ ಉತ್ತರ ಕೊಡುತ್ತೇನೆ.
 ಆರ್‌.ಬಿ. ತಿಮ್ಮಾಪುರ 

ಐದು ವರ್ಷದಲ್ಲಿ ನಡೆದ ಸಂಪುಟ ವಿಸ್ತರಣೆಯಲ್ಲಿ ಇದೂ ಒಂದು. ಈ ಹಿಂದೆಯೇ ಸಂಪುಟದಲ್ಲಿ ಸ್ಥಾನ ಸಿಗಬೇಕೆಂದಿಲ್ಲ. ಸಿಎಂ ಈಗ ಸಚಿವನನ್ನಾಗಿ ಮಾಡಿದ್ದಾರೆ. ಈ ಹಿಂದೆಯೂ ಸಚಿವನಾಗಿದ್ದೆ. ಯಾವ ಖಾತೆ ವಹಿಸಿದರೂ ನಿರ್ವಹಿಸುತ್ತೇನೆ.
 ಎಚ್‌.ಎಂ. ರೇವಣ್ಣ

ನನಗೆ ಸಚಿವ ಸ್ಥಾನ ಸಿಕ್ಕಿರು ವುದರಿಂದ ಮನೆಯನ್ನು ಮಿಸ್‌ ಮಾಡ್ಕೊàಳ್ತೀನಿ ಎಂಬ  ನೋವಿದೆ. ಈ ಸಂದರ್ಭದಲ್ಲಿ ನನ್ನ ಪತಿಯ ನೆನಪು
ಕಾಡುತ್ತಿದೆ. ಅವರು ಮಾಡಬೇಕಿದ್ದ ಕೆಲಸವನ್ನು ನಾನು ಈಡೇರಿ ಸುತ್ತೇನೆ. 
 ಗೀತಾ ಎಂ. ಪ್ರಸಾದ್‌

ಗೃಹ ಖಾತೆ ಬಗ್ಗೆ ನನ್ನ ಹಾಗೂ ರಮಾನಾಥ ರೈ ನಡುವೆ ಯಾವುದೇ ಪೈಪೋಟಿ ಇರಲಿಲ್ಲ. ಗೃಹ ಖಾತೆ ವಹಿಸಿಕೊಳ್ಳುವಂತೆ ಮುಖ್ಯಮಂತ್ರಿ ಅವರು ವಾರದ ಹಿಂದೆಯೇ ಹೇಳಿದ್ದರು. ಖಾತೆ ನಿಭಾಯಿ ಸುವ ವಿಶ್ವಾಸವಿದೆ.
 ರಾಮಲಿಂಗಾರೆಡ್ಡಿ

ರಾಮಲಿಂಗಾರೆಡ್ಡಿಗೃಹ ಖಾತೆ
ಆರ್‌.ಬಿ. ತಿಮ್ಮಾಪುರ– ಅಬಕಾರಿ
ರಮೇಶ್‌ ಜಾರಕಿಹೊಳಿಸಹಕಾರ 
ಎಚ್‌.ಎಂ. ರೇವಣ್ಣ- ಸಾರಿಗೆ
ಗೀತಾ ಮಹದೇವ ಪ್ರಸಾದ್‌ –ಸಕ್ಕರೆ, ಸಣ್ಣ ಕೈಗಾರಿಕೆ
ಸಂತೋಷ ಲಾಡ್‌ ಕಾರ್ಮಿಕ -ಕೌಶಲ್ಯಾಭಿವೃದ್ಧಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.