ಸಿದ್ದು ಮಾತಿಗೆ ತಾಳ ತಂತಿನೇ ಇರಲ್ಲ: ಶೆಟ್ಟರ್
Team Udayavani, Nov 9, 2019, 3:06 AM IST
ಧಾರವಾಡ: ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ಮೋದಿ ಸರ್ಕಾರ ಟೀಕಿಸಲು ಯಾವ ವಿಷಯವೂ ಇಲ್ಲದ್ದರಿಂದ ಕಾಂಗ್ರೆಸ್ ಆಡಿಯೋ-ವಿಡಿಯೋ ರಾಜಕಾರಣ ಮಾಡುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಆರೋಪಿಸಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಆಡಿಯೋ ವಿಷಯ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈಗಾಗಲೇ ನ್ಯಾಯಾಲಯ ತನ್ನ ನಿಲುವು ಸ್ಪಷ್ಟಪಡಿಸಿದೆ.
ಆದರೂ ಈಗ ಇದನ್ನು ರಾಷ್ಟ್ರಪತಿ ಅಂಗಳಕ್ಕೆ ತೆಗೆದುಕೊಂಡು ಹೋಗಿರುವುದು ನಾಚಿಕೆಗೇಡು. ಬಿಜೆಪಿಯವರೇ ಆಡಿಯೋ ಬಿಡುಗಡೆ ಮಾಡಿದ್ದಾರೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅವರು ಹಿಂದೆ-ಮುಂದೆ, ತಾಳ-ತಂತಿ ಏನೂ ಗೊತ್ತಿಲ್ಲ ಎಂಬಂತೆ ಮಾತನಾಡುತ್ತಾರೆ. ಯಾರ ಹೆಸರು ಹೇಳಿದರೂ, ಅದಕ್ಕೆ ದಾಖಲೆ ನೀಡಬೇಕು ಎಂದರು. ಇಂಥವರೇ ಆಡಿಯೋ ಬಿಡುಗಡೆ ಮಾಡಿದ್ದಾರೆಂದು ಆರೋಪಿಸುವ ಕಾಂಗ್ರೆಸ್ನವರ ಬಳಿ ಆಡಿಯೋ ಹೇಗೆ ಬಂತು ಎಂಬುದೇ ಗೊತ್ತಿಲ್ಲ.
ಏನೂ ಇಲ್ಲದೇ ದೇಶವ್ಯಾಪಿ ಸುದ್ದಿ ಮಾಡಲೆತ್ನಿಸುತ್ತಿದ್ದಾರೆ. ಇಂಥ ಕೆಲಸಗಳಿಂದಾಗಿಯೇ ಕಾಂಗ್ರೆಸ್ ಅಧೋಗತಿಗೆ ಇಳಿದಿದೆ. ರಾಜ್ಯದ ಜನರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾಡಿದ ಅನ್ಯಾಯವನ್ನು ಬಿಜೆಪಿ ಮಾಡುತ್ತಿಲ್ಲ. ಮೈತ್ರಿ ಸರ್ಕಾರ ಹಾಸನ, ಹೊಳೆನರಸಿಪುರಕ್ಕೆ ಹಣದ ಹೊಳೆ ಹರಿಸಿದೆ. ನಮ್ಮ ಸರ್ಕಾರ ವರದಿ ಆಧಾರದನ್ವಯ ಅನುದಾನ ನೀಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ