ಸಿಡಿಲಿಗೂ ಮುನ್ನ ಮೊಳಗಲಿದೆ ಸೈರನ್‌!


Team Udayavani, May 15, 2022, 7:10 AM IST

thumb-4

ಬೆಂಗಳೂರು: ಇನ್ನು ಮುಂದೆ ಗುಡುಗು-ಸಿಡಿಲು ಆರ್ಭ ಟಿಸುವ ಮುನ್ನವೇ ನಿಮಗೆ ಅದರ ಮಾಹಿತಿ ದೊರೆಯಲಿದೆ. ನಿಮ್ಮೂರಲ್ಲಿ ಸೈರನ್‌ ಮೊಳಗಿದರೆ, ಒಂದು ಗಂಟೆಯಲ್ಲೇ ಸಿಡಿಲು ಬಡಿಯುತ್ತದೆ ಎಂದರ್ಥ. ಕೂಡಲೇ ನೀವು ಸುರಕ್ಷಿತ ತಾಣವನ್ನು ತಲುಪಿ ಪ್ರಾಣರಕ್ಷಣೆ ಮಾಡಿಕೊಳ್ಳಬಹುದು!

ರಾಜ್ಯ ಪ್ರಾಕೃತಿಕ ವಿಪತ್ತು ನಿರ್ವಹಣ ಕೇಂದ್ರವು ರಾಜ್ಯದಲ್ಲಿ ಸಂಭವಿಸುವ ಸಿಡಿಲಿನ ಮಾಹಿತಿ ಯನ್ನು ಜನರಿಗೆ ನೀಡುವ ಮೂಲಕ ಸಾವು-ನೋವುಗಳನ್ನು ತಡೆಯಲು ಮುಂದಾಗಿದೆ. ಅದರಂತೆ ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳ ಆಯ್ದ 105 ಗ್ರಾಮ ಪಂಚಾ ಯತ್‌ಗಳಲ್ಲಿ ಈ ವರ್ಷದಿಂದ ಸಿಡಿಲು ಮತ್ತು ಗುಡುಗು ಸಂಬಂಧಿಸಿದ ಮುನ್ಸೂಚನೆ ಮತ್ತು ಮುನ್ನೆಚ್ಚರಿಕೆಗಳನ್ನು ನೀಡಲಾಗುತ್ತಿದೆ.

ಇದು ಸಿಡಿಲು-ಗುಡುಗು ಸಂಭವಿ ಸುವ ಒಂದು ಗಂಟೆ ಮೊದಲು ಸಂಬಂಧಪಟ್ಟ ಪಂಚಾಯತ್‌ಗಳಲ್ಲಿ ಅಳವಡಿಸಿರುವ ಮೈಕ್‌ಗಳಲ್ಲಿ ಸೈರನ್‌ ಮೂಲಕ ಮುನ್ನೆಚ್ಚರಿಕೆ ನೀಡಲಾಗುವುದು. ಪ್ರಾಯೋಗಿಕ ವಾಗಿ ಈ ಜಿಲ್ಲೆಗಳಲ್ಲಿ ಜಾರಿಗೊಳಿ ಸಲಾಗಿದ್ದು, ಮುಂದೆ ರಾಜ್ಯಾದ್ಯಂತ ವಿಸ್ತರಿಸುವ ಯೋಚನೆ ಇದೆ.

ದಕ್ಷಿಣ ಕನ್ನಡದಲ್ಲಿ ಮಿಂಚು ಹೆಚ್ಚು
ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಿಂಚು ಸಂಚಾರವಾಗುತ್ತದೆ. ಆದರೆ ಅಲ್ಲಿ ಹೆಚ್ಚಿನ ಮರ ಗಿಡಗಳು ಇರುವುದರಿಂದ ಮನುಷ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುವುದಿಲ್ಲ. ಆದರೆ, ಉತ್ತರ ಕರ್ನಾಟಕ ಜಿಲ್ಲೆ ಗಳಲ್ಲಿ ಬಯಲು ಪ್ರದೇಶವೇ ಹೆಚ್ಚಿನ ಪ್ರಮಾಣದಲ್ಲಿದ್ದು, ಗ್ರಾಮೀಣ ಭಾಗದ ಜನರಿಗೆ ಜಾಗೃತಿ ಇಲ್ಲ ದಿರುವ ಪರಿಣಾಮ, ಸಾವುಗಳು ಸಂಭವಿಸುತ್ತಿವೆ. ಸೈರನ್‌ ವ್ಯವಸ್ಥೆಯಿಂದ ಸಹಾಯವಾಗಲಿದೆ ಎಂದು ವಿಪತ್ತು ನಿರ್ವಹಣ ಪ್ರಾಧಿಕಾರದ ಆಯುಕ್ತ ಮನೋಜ್‌ ರಾಜನ್‌ ತಿಳಿಸಿದ್ದಾರೆ.

ದಶಕದಲ್ಲಿ 812 ಮಂದಿ ಸಾವು
ರಾಜ್ಯದಲ್ಲಿ 2011-2021ರ ಅವಧಿಯಲ್ಲಿ ಸಿಡಿಲಿನಿಂದ 812 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ವಿಜಯಪುರ, ಬಾಗಲಕೋಟೆ, ರಾಯಚೂರು, ಗದಗ ಜಿಲ್ಲೆಗಳಲ್ಲಿಯೇ ಹೆಚ್ಚಿನ ಜನರು ಮೃತಪಟ್ಟಿದ್ದಾರೆ. 2022ರಲ್ಲಿ 49, 2021ರಲ್ಲಿ 108, 2020ರಲ್ಲಿ 79, 2019ರಲ್ಲಿ 101, 2018ರಲ್ಲಿ 117, 2017ರಲ್ಲಿ 108 ಜನರು ಮೃತಪಟ್ಟಿದ್ದಾರೆ.

ಸೈರನ್‌ ಮೊಳಗಿದಾಗ ಏನು ಮಾಡಬೇಕು?
– ಕೂಡಲೇ ಮನೆಗಳಿಗೆ ತೆರಳಿ
-ಕಾಂಕ್ರೀಟ್‌ ನೆಲದಲ್ಲಿ ನಿಂತು ಕೊಳ್ಳದಿರಿ, ಕಾಂಕ್ರೀಟ್‌ ಗೋಡೆಗೆ ಒರಗಬೇಡಿ
– ಮೊಬೈಲ್‌ ಮತ್ತಿತರ ಎಲೆಕ್ಟ್ರಾನಿಕ್‌ ಉಪಕರಣ ಗಳನ್ನು ಬಳಸದಿರಿ
– ತೆರೆದ ಪ್ರದೇಶಗಳಲ್ಲಿ, ಬೆಟ್ಟದ ಮೇಲೆ ಅಥವಾ ಮರಗಳ ಕೆಳಗೆ ನಿಲ್ಲದಿರಿ
– ಕಿಟಕಿ, ಬಾಗಿಲ ಬಳಿ ನಿಲ್ಲದಿರಿ.

ರಾಜ್ಯದಲ್ಲಿ ಸಿಡಿಲಿನಿಂದ ರೈತಾಪಿ ವರ್ಗ ಮೃತಪಡುವುದನ್ನು ತಡೆಗಟ್ಟಲು ಆಯ್ದ ಗ್ರಾ.ಪಂ.ಗಳಲ್ಲಿ ಸಿಡಿಲು ಅಲರ್ಟ್‌ ನೀಡಲಾಗುತ್ತಿದೆ. ಈ ಮೂಲಕ ಸಾಧ್ಯವಾದ ಮಟ್ಟಿಗೆ ಜನರನ್ನು ಜಾಗೃತಿಗೊಳಿಸುವ ಉದ್ದೇಶ ಹೊಂದಲಾಗಿದೆ.
ಮನೋಜ್‌ ರಾಜನ್‌, ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಆಯುಕ್ತ

– ಎನ್‌.ಎಲ್‌.ಶಿವಮಾದು

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.