ಸಿರ್ಸಿ ಮೇಲ್ಸೇತುವೆ ಒಂದು ಮಾರ್ಗ ವಾರದೊಳಗೆ ಮುಕ್ತ
Team Udayavani, Jan 28, 2019, 1:13 AM IST
ಬೆಂಗಳೂರು: ಮೈಸೂರು ರಸ್ತೆ ಸಿರ್ಸಿ ವೃತ್ತದ ಮೇಲ್ಸೇತುವೆಯ ಒಂದು ಬದಿ ಬಿಬಿಎಂಪಿ ಕೈಗೊಂಡಿರುವ ಮರು ಡಾಂಬರೀಕರಣ ವಾರದೊಳಗೆ ಪೂರ್ಣಗೊಳ್ಳಲಿದ್ದು, ಒಂದು ಬದಿ ರಸ್ತೆ ವಾಹನ ಸಂಚಾರಕ್ಕೆ ಲಭ್ಯವಾಗಲಿದೆ.
ಮೊದಲ ಹಂತವಾಗಿ ಪುರಭವನದ ಕಡೆಯಿಂದ ಮೈಸೂರು ರಸ್ತೆವರೆಗಿನ ಮೇಲ್ಸೇತುವೆ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಇದೀಗ ಕಾಮಗಾರಿ ಕೊನೆಯ ಹಂತ ತಲುಪಿದ್ದು, ಮುಂದಿನ ಶನಿವಾರದ ವೇಳೆಗೆ ಸಂಚಾರಕ್ಕೆ ಸಿದ್ಧವಾಗಲಿದೆ.
ಎರಡು ದಿನಗಳಲ್ಲಿ ಪುರಭವನ ಕಡೆಯಿಂದ ರಾಯನ್ ವೃತ್ತದ ಕಡೆಗಿನ ಡೌನ್ರ್ಯಾಂಪ್ ಮಾರ್ಗದ ಮರು ಡಾಂಬರೀಕರಣ ಕಾಮಗಾರಿ ಪೂರ್ಣಗೊಳ್ಳಲಿದ್ದು, ಅದಾದ ಮೂರ್ನಾಲ್ಕು ದಿನಗಳಲ್ಲಿ ರಾಯನ್ ವೃತ್ತದ ಕಡೆಗೆ ಹೋಗುವ ಡೌನ್ ರ್ಯಾಂಪ್ನಿಂದ ಮೈಸೂರು ರಸ್ತೆವರೆಗಿನ ಮಾರ್ಗದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಮೈಸೂರು ರಸ್ತೆಯಿಂದ ಟೌನ್ಹಾಲ್ ಕಡೆಗೆ ಹೋಗುವ ಮಾರ್ಗದ ದುರಸ್ತಿ ಕಾಮಗಾರಿ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದು, ಕನಿಷ್ಠ 30ರಿಂದ 40 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಸಂಚಾರ ಪೊಲೀಸರಿಗೆ ಪರ್ಯಾಯ ರಸ್ತೆಗಳನ್ನು ಕಲ್ಪಿಸುವಂತೆ ಪಾಲಿಕೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮೈಸೂರು ರಸ್ತೆಯಿಂದ ಟೌನ್ಹಾಲ್ ಕಡೆಗಿನ ಕಾಮಗಾರಿಯನ್ನು ಮೊದಲಿಗೆ ಮೆಜೆಸ್ಟಿಕ್ ಕಡೆಗೆ ಸಾಗುವ ಡೌನ್ ರ್ಯಾಂಪ್ ಅಥವಾ ಕೆ.ಆರ್.ಮಾರುಕಟ್ಟೆ ಕಡೆಗೆ ಹೊಗುವ ಡೌನ್ ರ್ಯಾಂಪ್ನಿಂದ ಟೌನ್ಹಾಲ್ವರೆಗೆ ಸಾಗುವ ಮೇಲ್ಸೇತುವೆ ಮಾರ್ಗದಲ್ಲಿ ಮೊದಲು ಕಾಮಗಾರಿ ನಡೆಸಲು ಚಿಂತಿಸಲಾಗಿದೆ. ಬಳಿಕ ಮೈಸೂರು ರಸ್ತೆ ಕಡೆಯಿಂದ ಬರುವ ಮಾರ್ಗದ ಉಳಿದ ಭಾಗದಲ್ಲಿ ಮರು ಡಾಂಬರೀಕರಣ ಮಾಡುವ ಕುರಿತಂತೆ ಚರ್ಚಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ