ಅಮೆರಿಕದ ಅಥೆನ್ಸ್ ವಿವಿ ಜತೆ ಎಸ್ ಜೆಪಿ ಒಡಂಬಡಿಕೆ: ಪೂರ್ವಭಾವಿ ಚರ್ಚೆ


Team Udayavani, Aug 17, 2022, 7:29 PM IST

dr-ashwath

ಬೆಂಗಳೂರು: ಪ್ರತಿಷ್ಠಿತ ಶ್ರೀ ಜಯಚಾಮರಾಜೇಂದ್ರ ಸರ್ಕಾರಿ ಪಾಲಿಟೆಕ್ನಿಕ್ (ಎಸ್ ಜೆಪಿ) ಮತ್ತು ಅಮೆರಿಕದ ಅಥೆನ್ಸ್ ಸ್ಟೇಟ್ ಯೂನಿವರ್ಸಿಟಿ ನಡುವೆ ಒಡಂಬಡಿಕೆ ಮಾಡಿಕೊಂಡು ಅಸೋಸಿಯೇಟ್ ಡಿಗ್ರಿ ಕೋರ್ಸ್ ಆರಂಭಿಸುವ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಪೂರ್ವಭಾವಿ ಚರ್ಚೆ ನಡೆಸಿದರು. ಈ ಚರ್ಚೆಯಲ್ಲಿ ಅಥೆನ್ಸ್‌ ಸ್ಟೇಟ್ ಯೂನಿವರ್ಸಿಟಿ ಮುಖ್ಯಸ್ಥ ಫಿಲಿಫ್ ಕೆ.ವೇ ಭಾಗವಹಿಸಿದ್ದರು.

ಸಚಿವ ಅಶ್ವತ್ಥನಾರಾಯಣ ಮಾತನಾಡಿ, ಈ ಒಡಂಬಡಿಕೆಯ ಅನ್ವಯ ಸೈಬರ್ ಸೆಕ್ಯೂರಿಟಿ, ಇಂಗ್ಲಿಷ್ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ಕೋರ್ಸುಗಳ ಅಡಿಯಲ್ಲಿ ಅಸೋಸಿಯೇಟ್ ಡಿಗ್ರಿ ಕೋರ್ಸುಗಳಲ್ಲಿ ಸಂಯೋಜಿತ ಅಸೋಸಿಯೇಟ್ ಡಿಗ್ರಿ ಆರಂಭಿಸುವ ಚಿಂತನೆ ಇದೆ. ಅಥೆನ್ಸ್ ವಿವಿ ಅಡಿಯಿರುವ ಡಲ್ಲಾಸ್ ಕಮ್ಯುನಿಟಿ ಕಾಲೇಜಿನ ಜತೆ ಒಡಂಬಡಿಕೆ ಮಾಡಿಕೊಳ್ಳುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದರು.

ಇದು ಅಂತಿಮ‌ರೂಪ ಪಡೆದರೆ ಡಲ್ಲಾಸ್ ಕಮ್ಯುನಿಟಿ ಕಾಲೇಜಿನ ವಿದ್ಯಾರ್ಥಿಗಳು ನಮ್ಮಲ್ಲಿಗೆ ಬಂದು ಅಧ್ಯಯನ ಮಾಡಲು ಅವಕಾಶ ನೀಡಲಾಗುವುದು. ಅಥೆನ್ಸ್ ವಿವಿ ಈಗಾಗಲೇ ಕುವೆಂಪು ವಿವಿ ಮತ್ತು ಶ್ರೀ ಕೃಷ್ಣದೇವರಾಯ ವಿವಿ ಜತೆ ಒಡಂಬಡಿಕೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದರು.

ಸೈಬರ್ ಸೆಕ್ಯೂರಿಟಿ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಎಸ್ ಜೆ ಪಿ 24 ವಿದ್ಯಾರ್ಥಿಗಳಿಗೆ ಈಗಾಗಲೇ ತರಬೇತಿ ಕೊಡಲಾಗಿದೆ. ಈ ವರ್ಷ ಆನ್ಲೈನ್ ಮೂಲಕ ಅಮೆರಿಕದ 8 ಕೋರ್ಸ್ ಗಳನ್ನು ಮಾಡುತ್ತಿದ್ದಾರೆ. 2023-24 ರಲ್ಲಿ ಈ ವಿದ್ಯಾರ್ಥಿಗಳು ಅಥೆನ್ಸ್ ವಿಶ್ವವಿದ್ಯಾಲಯಕ್ಕೆ ತೆರಳಿ ವ್ಯಾಸಂಗ ಮಾಡಲಿದ್ದಾರೆ ಎಂದರು.

ಅಥೆನ್ಸ್ ವಿಶ್ವವಿದ್ಯಾಲಯವು ರಾಜ್ಯದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಗುಣಮಟ್ಟದ ಇಂಗ್ಲೀಷ್ ಕಲಿಸಲು ಉತ್ಸುಕವಾಗಿದೆ.ಇದಕ್ಕಾಗಿ ಡಿಸಿಟಿಇ ಯಲ್ಲಿ ತರಬೇತಿ ಕೇಂದ್ರ ಸ್ಥಾಪನೆಗೆ ಅದು ಆಸಕ್ತಿ ತೋರಿದೆ ಎಂದು ಅವರು ಮಾಹಿತಿ ನೀಡಿದರು.

ಕೌಶಲ್ಯ ಅಭಿವೃದ್ಧಿ ವಿಷಯದಲ್ಲಿ ಅಮೆರಿಕದ ಈ ಸಂಸ್ಥೆ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಜೊತೆ ಕೈಗೂಡಿಸಿ ನಾಲ್ಕು ವರ್ಷಗಳ ನರ್ಸಿಂಗ್ ಪದವಿ ವಿದ್ಯಾಭ್ಯಾಸ ಒದಗಿಸಲಿದೆ ಎಂದು ಸಚಿವರು ಹೇಳಿದರು.

ಮಂಗಳವಾರ ರಾಜ್ಯಕ್ಕೆ ಆಗಮಿಸಿರುವ ಅಮೆರಿಕದ ಈ ನಿಯೋಗವು ಹತ್ತು ದಿನ ರಾಜ್ಯದಲ್ಲಿ ಇರಲಿದೆ. ಗುರುವಾರ ಎಸ್.ಜೆ.ಪಿ.ಗೆ ಭೇಟಿ ನೀಡಿ, ಟ್ವಿನ್ನಿಂಗ್ ಡಿಗ್ರಿ ಮುಂತಾದವುಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಿದೆ.

ಆ.22ರಂದು ಕೃಷ್ಣದೇವರಾಯ ವಿವಿ ಕುಲಪತಿ ಜೊತೆ ಚರ್ಚಿಸಲಿದೆ. ಆ.23ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡ ಅವರೊಂದಿಗೆ ಹೆಚ್ಚಿನ ಸಹಭಾಗಿತ್ವ ಕುರಿತು ಮಾತುಕತೆ ನಡೆಸಲಿದೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಅಮೆರಿಕದ ನಿಯೋಗವು ಆ.21ರ ಭಾನುವಾರ ವಿಶ್ವವಿಖ್ಯಾತ ಹಂಪೆಗೆ ತೆರಳಿ ಅಲ್ಲಿನ ತಾಣಗಳನ್ನು ವೀಕ್ಷಿಸಲಿದೆ.

ಪೂರ್ವಭಾವಿ ಚರ್ಚೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ , ನಿರ್ದೇಶಕ ಅಪ್ಪಾಜಿ ಗೌಡ, ಹೆಚ್ಚುವರಿ ನಿರ್ದೇಶಕ ಅಶೋಕ ಬಿ ರೇವಣಕರ್, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ರವಿಚಂದ್ರನ್, ಜಂಟಿ ನಿರ್ದೇಶಕ ಶ್ರೀಕಾಂತ್ ಸಲಹೆಗಾರ ಅರುಣ್ ಸೀತಾರಾಮನ್ ಇದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.