ಮಾನವ ಸಂಪನ್ಮೂಲ ಪೂರೈಕೆಗೆ ಕೌಶಲಾಧಾರಿತ ತರಬೇತಿ


Team Udayavani, Jul 16, 2021, 7:40 AM IST

ಮಾನವ ಸಂಪನ್ಮೂಲ ಪೂರೈಕೆಗೆ  ಕೌಶಲಾಧಾರಿತ ತರಬೇತಿ

ಬೆಂಗಳೂರು: ಕೊರೊನಾ ವಿರುದ್ಧ ಹೋರಾಟದಲ್ಲಿ ಮಾನವ ಸಂಪನ್ಮೂಲ ಕೊರತೆಯಾಗದಂತೆ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಪೂರೈಸಿರುವ ಮತ್ತು ಬಿಎ ಸ್‌ ಸಿ ಪದವೀಧರರಿಗೆ ಅಗತ್ಯ ತರ ಬೇತಿ ನೀಡಲು ಯುವ ಸಶಕ್ತೀಕರಣ ಮತ್ತು ಕ್ರೀಡಾ ಇಲಾಖೆ ಮುಂದಾಗಿದೆ.

ಇಲಾಖೆ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ. ಮತ್ತು ಅಪೊಲೋ ಮೆಡಿಸ್ಕಿಲ್‌ ಇದಕ್ಕೆ ಸಹಯೋಗ ನೀಡಿವೆ. ಕೊರೊನಾ ತಡೆ ಮತ್ತು ಲಸಿಕೆ ಅಭಿಯಾನ ದಲ್ಲಿ ಸೇವೆ ಸಲ್ಲಿಸಲು ಅನುಕೂಲ ಆಗುವಂತೆ ಎಸೆಸೆಲ್ಸಿ ಅಥವಾ ತತ್ಸಮಾನ ಕೋರ್ಸ್‌ ಪೂರೈ ಸಿರುವ, ಪಿಯುಸಿ ವಿಜ್ಞಾನ ವಿಭಾಗ ಅಥವಾ ವಿಜ್ಞಾನ ವಿಭಾಗದ ಪದವಿ ಪೂರೈಸಿರುವ ಅಭ್ಯರ್ಥಿಗಳಿಗೆ ತರಬೇತಿ ನೀಡಿ, ಕೌಶಲಕ್ಕೆ ಅನುಗುಣವಾಗಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದ್ದಾರೆ.

ಉದ್ಯೋಗಾವಕಾಶ ಹೇಗೆ?:

2,600ಕ್ಕೂ ಅಧಿಕ ಉದ್ಯೋ ಗಾವ ಕಾಶಗಳು ಇವೆ. 2,400ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿ ಕೊಂಡಿ ದ್ದಾರೆ. 13 ಸಾವಿರ ರೂ.ಗಳಿಂದ 22 ಸಾವಿರ ರೂ. ವರೆಗೆ ಮಾಸಿಕ ವೇತನ ಇರಲಿದೆ. https://sdgcckar.in/nss  ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಕ್ರೀಡಾ ಇಲಾಖೆಯ ಹಿರಿಯ ಅಧಿಕಾರಿ ಯೊಬ್ಬರು ವಿವರ ನೀಡಿದ್ದಾರೆ.

3 ರೀತಿಯ ಕೋರ್ಸ್‌ :

1.ಕೋವಿಡ್‌ ಆರೋಗ್ಯ ಕಾರ್ಯಕರ್ತ ಕೋರ್ಸ್‌ : 

ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ವಿಜ್ಞಾನ ವಿಭಾಗದ ಅಭ್ಯರ್ಥಿಗಳಿಗೆ 20 ದಿನಗಳ ತರಬೇತಿ. ಆಸ್ಪತ್ರೆ, ಕ್ಲಿನಿಕ್‌, ಐಸೋಲೇಶನ್‌ ಮತ್ತು ಕ್ವಾರಂಟೈನ್‌ ಕೇಂದ್ರಗಳಲ್ಲಿ ಹೇಗೆ ಕಾರ್ಯ ನಿರ್ವಹಿಸಬೇಕು, ಆಮ್ಲಜನಕ ಸಿಲಿಂಡರ್‌ ಹೇಗೆ ಬಳಸಬೇಕು ಎಂಬ ತರಬೇತಿ.

2.ಲಸಿಕೆ ಸಂಯೋಜಕ ಕೋರ್ಸ್‌ : 

ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಪೂರೈಸಿದ ಅಭ್ಯರ್ಥಿಗಳಿಗೆ 10 ದಿನಗಳ ತರಬೇತಿ. ಆಸ್ಪತ್ರೆ, ಕ್ಲಿನಿಕ್‌, ಕಾರ್ಪೋರೆಟ್‌ ವಲಯದಲ್ಲಿ ಕೊರೊನಾ ಲಸಿಕೆ ಅಭಿಯಾನ ಮತ್ತು ಸಮರ್ಪಕ ನಿರ್ವಹಣೆಯ ಬಗ್ಗೆ ತರಬೇತಿ.

3.ಕೋವಿಡ್‌ ಸಹಾಯಕ ಕೇಂದ್ರದ ಕಾ.ನಿ. ಕೋರ್ಸ್‌

ಎಸೆಸೆಲ್ಸಿ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ ಅಭ್ಯರ್ಥಿಗಳಿಗೆ ಆಸ್ಪತ್ರೆ, ಕ್ಲಿನಿಕ್‌ ಮತ್ತು ಸರಕಾರಿ ಕೌನ್ಸೆಲಿಂಗ್‌ ಕೇಂದ್ರಗಳಲ್ಲಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು 10 ದಿನಗಳಲ್ಲಿ ಕಲಿಸಿಕೊಡಲಾಗುತ್ತದೆ. ಮೂರೂ ತರಬೇತಿ ಆನ್‌ಲೈನ್‌, ಆಫ್ಲೈನ್‌ ಎರಡೂ ಮಾದರಿಗಳಲ್ಲಿ ಇರಲಿದೆ.

 ಉದಯವಾಣಿ ಪ್ರತಿಪಾದಿಸಿತ್ತು :

“ತುರ್ತು ಆರೋಗ್ಯ ಸೇವೆಗೆ ಅಪ್ರಂಟಿಸ್‌ಶಿಪ್‌ ಜಾರಿಯಾಗಲಿ’ ಎಂಬ ಶೀರ್ಷಿಕೆಯಡಿ ಮೇ 6ರಂದು “ಉದಯವಾಣಿ’ ಸಮಗ್ರ ವರದಿ ಪ್ರಕಟಿ ಸಿತ್ತು. ಅದರಲ್ಲಿ ಕೊರೊನಾ ಸೃಷ್ಟಿ ಸಿರುವ ಆರೋಗ್ಯ ತುರ್ತು ಪರಿಸ್ಥಿತಿ ನಿಭಾ ಯಿಸುವುದಕ್ಕಾಗಿ ಆಸಕ್ತರಿಗೆ ನರ್ಸಿಂಗ್‌ ತರಬೇತಿ ನೀಡಿ, ಅಪ್ರಂಟಿಸ್‌ಶಿಪ್‌ ಜಾರಿ ಮಾಡಬೇಕು ಎಂದು ಪ್ರತಿಪಾದಿಸಿತ್ತು.

ಮೊದಲ ಹಂತದಲ್ಲಿ  5 ಸಾವಿರ ಅಭ್ಯರ್ಥಿಗಳಿಗೆ ತರಬೇತಿ ನೀಡಲಿದ್ದೇವೆ. ಕೇಂದ್ರದ ಮಾರ್ಗಸೂಚಿ ಯಂತೆ ಅಲ್ಪಾವಧಿ ಕೋರ್ಸ್‌ ನಡೆಯಲಿದೆ. ಕೋರ್ಸ್‌ ಪೂರ್ಣಗೊಂಡ ಅನಂತರ ಸಂದರ್ಶನದ ಮೂಲಕ ಉದ್ಯೋಗಕ್ಕೆ ಆಯ್ಕೆ ನಡೆಯಲಿದೆ.ಡಾ| ಶಾಲಿನಿ ರಜನೀಶ್‌,  ಯುವ ಸಶಕ್ತೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.