Lok Sabha Elections; ಎಸ್.ಎಂ.ಕೃಷ್ಣ ಆಶೀರ್ವಾದ ಪಡೆದ ಕುಮಾರಸ್ವಾಮಿ
Team Udayavani, Apr 8, 2024, 11:05 PM IST
ಬೆಂಗಳೂರು: ಮಂಡ್ಯ ಎನ್ಡಿಎ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಬೆಂಗಳೂರಿನಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬೆಂಗಳೂರಿನ ಎಸ್.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು ಕೃಷ್ಣರಿಗೆ ಶಾಲು ಹೊದೆಸಿ, ಹೂಗುತ್ಛ ನೀಡಿ ಮಾಲಾರ್ಪಣೆ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು, ರಾಜ್ಯ ರಾಜಕಾರಣದ ಕುರಿತು ಸ್ವಲ್ಪ ಹೊತ್ತು ಚರ್ಚಿಸಿದರು.
ಮಂಡ್ಯದ ರಾಜಕೀಯ ಸನ್ನಿವೇಶದ ಕುರಿತೂ ಚರ್ಚಿಸಿದರು.
ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ| ಸಿ.ಎನ್.ಅಶ್ವತ್ಥನಾರಾಯಣ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖೀಲ್ ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಡಾ| ಆಂಜಿನಪ್ಪ ಜತೆಗಿದ್ದರು. ಇತ್ತೀಚೆಗಷ್ಟೇ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಕೂಡ ಸಚಿವ ಚಲುವರಾಸ್ವಾಮಿ ಜತೆಗೆ ಎಸ್.ಎಂ. ಕೃಷ್ಣರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ