ನೂತನ ಕೈಗಾರಿಕಾ ನೀತಿಯಲ್ಲಿ ಸಣ್ಣ ಕೈಗಾರಿಕೆಗೆ ಆದ್ಯತೆ: ಶೆಟ್ಟರ್
Team Udayavani, Sep 10, 2019, 3:03 AM IST
ಹುಬ್ಬಳ್ಳಿ: ನೂತನ ಕೈಗಾರಿಕಾ ನೀತಿಯಲ್ಲಿ ಸಣ್ಣ ಕೈಗಾರಿಕೆಗಳು ಹಾಗೂ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, 2014-19 ಕೈಗಾರಿಕಾ ನೀತಿ ನವೆಂಬರ್ಗೆ ಮುಕ್ತಾಯವಾಗಲಿದ್ದು, ನೂತನ ಕೈಗಾರಿಕಾ ನೀತಿ 2019-24ರವರೆಗೆ ಜಾರಿಗೊಳ್ಳಲಿದೆ.
ನೂತನ ಕೈಗಾರಿಕಾ ನೀತಿ ಮಾದರಿಯಾಗುವ ನಿಟ್ಟಿನಲ್ಲಿ ಸಾರ್ವಜನಿಕರು, ಉದ್ಯಮಿಗಳು, ಸಂಘ-ಸಂಸ್ಥೆಗಳ ಸಲಹೆ ಪಡೆಯಲಾಗುವುದು. ಬೆಂಗಳೂರು ಕೇಂದ್ರೀಕೃತ ಕೈಗಾರಿಕಾ ಸ್ಥಿತಿ ಹೋಗಲಾಡಿಸಲು ಎರಡನೇ ಹಂತದ ನಗರಗಳಲ್ಲಿ ಕೈಗಾರಿಕಾ ಉತ್ತೇಜನಕ್ಕೆ ನೂತನ ನೀತಿಯಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು ಎಂದರು. ಆರ್ಥಿಕ ಹಿಂಜರಿತ ಕೇವಲ ರಾಜ್ಯ-ದೇಶಕ್ಕೆ ಸೀಮಿತವಾಗಿಲ್ಲ.
ಜಾಗತಿಕವಾಗಿ ಇದು ಪರಿಣಾಮ ಬೀರಿದೆ. ಆರ್ಥಿಕ ಹಿಂಜರಿಕೆ ಇಡೀ ಕೈಗಾರಿಕಾ ವಲಯದ ಮೇಲೆ ಪರಿಣಾಮ ಬೀರಿಲ್ಲ. ಆಟೋಮೊಬೈಲ್, ರಿಯಲ್ ಎಸ್ಟೇಟ್ನಂತಹ ಕೆಲವು ವಲಯಗಳ ಮೇಲೆ ಮಾತ್ರ ಪರಿಣಾಮ ಬೀರಿದೆ. ಇದು ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲಿ ಸರಿ ಹೋಗಲಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಕ್ರಮ ಕೈಗೊಂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್