ಕೆಪಿಸಿಸಿ ಕಚೇರಿಯಲ್ಲಿ ಎಸ್ಎಂಕೆ ಫೋಟೋ ತೆರವು, ಪರಂ ಗರಂ
Team Udayavani, Sep 16, 2017, 6:16 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಹಿರಿಯ ಮುಖಂಡ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಭಾವಚಿತ್ರವನ್ನು ತೆಗೆದ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯ ಮೊದಲನೇ ಮಹಡಿಯ ಕೋಣೆಯಲ್ಲಿದ್ದ ಎಸ್ಎಂ ಕೃಷ್ಣ ಫೋಟೋವನ್ನು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತೆಗೆದು, ಕೆಳಗಿಟ್ಟು ಪರಾರಿಯಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಚೇರಿಯಲ್ಲಿ ಹೈಡ್ರಾಮಾ ನಡೆದಿತ್ತು. ಬಳಿಕ ಪರಮೇಶ್ವರ್ ಅವರನ್ನು ಎಸ್ಎಂಕೆ ಫೋಟೋವನ್ನು ಗೋಡೆಗೆ ಅಳವಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಫೋಟೋ ತೆಗೆದು ಕೆಳಗಿಟ್ಟ ವಿಚಾರವಾಗಿ ಕೆಪಿಸಿಸಿ ಕಚೇರಿ ಸಿಬ್ಬಂದಿ ಮತ್ತು ಕಾರ್ಯಕರ್ತನ ನಡುವೆ ವಾಗ್ವಾದ ನಡೆದಿತ್ತು. ತದನಂತರ ಕಚೇರಿಗೆ ಪರಮೇಶ್ವರ್ ಆಗಮಿಸಿದ್ದರು. ವಿಷಯ ತಿಳಿದ ಪರಮೇಶ್ವರ್ ಅವರು, ಎಸ್ಎಂಕೆ ಫೋಟೋ ತೆಗೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಅವರು ನಮ್ಮ ಪಕ್ಷ(ಕಾಂಗ್ರೆಸ್)ವನ್ನು ತೊರೆದಿರಬಹುದು. ಆದರೆ ಅವರ ಮೇಲೆ ಗೌರವವಿದೆ. ಎಸ್ಎಂಕೆ ಕೆಪಿಸಿಸಿ ಮಾಜಿ ಅಧ್ಯಕ್ಷರು, ಮಾಜಿ ಸಿಎಂ ಆಗಿದ್ದವರು, ಹಾಗಾಗಿ ಫೋಟೋ ತೆಗೆದಿದ್ದು ಸರಿಯಲ್ಲ ಎಂದು ಹೇಳಿ, ತಾವೇ ಎಸ್ಎಂಕೆ ಫೋಟೋವನ್ನು ಮತ್ತೆ ಗೋಡೆಗೆ ಅಳವಡಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?