ಕೊಳಕುಮಂಡಲ ಕಚ್ಚಿ ತುಂಬು ಗರ್ಭಿಣಿ ಸಾವು
Team Udayavani, Jan 26, 2020, 3:00 AM IST
ಮಡಿಕೇರಿ: ಕೊಳಕುಮಂಡಲ ಹಾವೊಂದು ಕಚ್ಚಿದ ಪರಿಣಾಮ ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬಳು ಮೃತಪಟ್ಟಿದ್ದಾರೆ. ಕುಶಾಲನಗರ ನಿವಾಸಿ ಶಾಜಿ ಅವರ ಪತ್ನಿ ಸುಚಿತಾ ಅವರಿಗೆ ಶುಕ್ರವಾರ ರಾತ್ರಿ ಹಾವು ಕಚ್ಚಿದ್ದು, ತಕ್ಷಣ ಅವರನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆ ತರಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.