![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
“ಸೊಲ್ಲಾಪುರ, ಕೊಲ್ಲಾಪುರ ತಗೋತೀವಿ’
Team Udayavani, Jan 2, 2020, 3:04 AM IST
![sollpura](https://www.udayavani.com/wp-content/uploads/2020/01/sollpura-586x465.jpg)
ಬೆಳಗಾವಿ: ಮಹಾರಾಷ್ಟ್ರದವರು ಬೆಳಗಾವಿ ಸುದ್ದಿಗೆ ಬಂದರೆ ಸೊಲ್ಲಾಪೂರ ಹಾಗೂ ಕೊಲ್ಲಾಪುರನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಜೆಡಿಎಸ್ ಮುಖಂಡ ಎನ್.ಎಚ್. ಕೋನರಡ್ಡಿ ಹೇಳಿದರು. ಮಹದಾಯಿ ನ್ಯಾಯಾಧಿಕರಣದ ತೀರ್ಪಿನನ್ವಯ ಕೂಡಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಬೆಳಗಾವಿ ಕನ್ನಡಿಗರ ಅವಿಭಾಜ್ಯ ಅಂಗ.
ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಒಂದಿಂಚೂ ಜಾಗ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರ ಹಾಗೂ ಎಂಇಎಸ್ ಮುಖಂಡರು ಚುನಾವಣೆ ದೃಷ್ಟಿಯಿಂದ ಗಡಿ ವಿವಾದಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ರಾಜ್ಯ ಸರ್ಕಾರವೇ ನೇರ ಕಾರಣ. ಸುವರ್ಣ ವಿಧಾನಸೌಧಕ್ಕೆ 9 ಕಚೇರಿಗಳನ್ನು ಸ್ಥಳಾಂತರ ಮಾಡಬೇಕಿತ್ತು. ಆದರೆ ಇದನ್ನು ತಡೆ ಹಿಡಿದಿರುವುದು ಅಸಮತೋಲನಕ್ಕೆ ಎಡೆ ಮಾಡಿಕೊಟ್ಟಿದೆ ಎಂದರು.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.