ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ಕೋರಿಕೆ; ಪೇಜಾವರ ಶ್ರೀಗಳಿಂದ ರಾಜ್ಯಪಾಲರ ಭೇಟಿ
Team Udayavani, Dec 16, 2020, 11:40 PM IST
ರಾಜ್ಯಪಾಲರಿಗೆ ಪೇಜಾವರ ಶ್ರೀಗಳು ಮಂದಿರ ನಿರ್ಮಾಣಕ್ಕೆ ಸಹಕಾರ ಯಾಚಿಸಿದ ಪತ್ರವನ್ನು ಹಸ್ತಾಂತರಿಸಿದರು.
ಉಡುಪಿ/ಬೆಂಗಳೂರು: ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ರುಡಾ ಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ರಾಜಭವನದಲ್ಲಿ ಭೇಟಿಯಾಗಿ ಅಯೋಧ್ಯೆಯ ರಾಮ ಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ವನ್ನು ಹಸ್ತಾಂತರಿಸಿದರು.
ಶ್ರೀಗಳವರಿಗೆ ಗೌರವ ಅರ್ಪಿಸಿದ ರಾಜ್ಯಪಾಲರು ಸಮಾಲೋಚನೆ ನಡೆಸಿದರು. 1953ರಲ್ಲಿ ಆರೆಸ್ಸೆಸ್ ಎರಡನೆಯ ಸರಸಂಘಚಾಲಕ ಗುರೂಜಿ ಗೋಳ್ವಲ್ಕರ್ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ತಾನಿನ್ನೂ ಯುವಕನಾಗಿದ್ದೆ. ಆಗ ಸ್ನೇಹಿತನನ್ನು ಕರೆದುಕೊಂಡು ಸೈಕಲ್ನಲ್ಲಿ ಗುಜರಾತಿನ ಮನೆ ಮನೆಗೆ ತೆರಳಿ ಸಹಿ ಸಂಗ್ರಹ ಮಾಡಿದ್ದನ್ನುಸ್ಮರಿಸಿದರು. ಅಯೋಧ್ಯೆ ಆಂದೋಲನದ ವಿವಿಧ ಹಂತಗಳಲ್ಲಿ ಪಾಲ್ಗೊಂಡದ್ದನ್ನು ಸ್ಮರಿಸಿದ ರಾಜ್ಯಪಾಲರು, ರಾಮ ಮಂದಿರ ನಿರ್ಮಾಣದ ಕಾರ್ಯದಲ್ಲಿ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಪೇಜಾವರ ಶ್ರೀಗಳು ರಾಜ್ಯಪಾಲರಿಗೆ ಶಾಲು ಹೊದೆಸಿ ಸ್ಮರಣಿಕೆ ನೀಡಿ ಆಶೀರ್ವದಿಸಿದರು. ವಿಹಿಂಪ ಕ್ಷೇತ್ರೀಯ ಸಂಘಟನ ಕಾರ್ಯದರ್ಶಿ ಕೇಶವ ಹೆಗಡೆ, ಕಾರ್ಯದರ್ಶಿಗಳಾದ ವಿಷ್ಣು ಆಚಾರ್ಯ, ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ