ಸಮಸ್ಯೆ ಬಗೆಹರಿಸಿ, ಇಲ್ಲವಾದರೆ ನನ್ನ ದಾರಿ ನನಗೆ… 


Team Udayavani, Oct 7, 2017, 10:32 AM IST

07-21.jpg

ಮೈಸೂರು: “ಭಾನುವಾರದ ಒಳಗೆ ಸಮಸ್ಯೆ ಬಗೆಹರಿಸಿ, ಇಲ್ಲವಾದಲ್ಲಿ ನನ್ನ ದಾರಿ ನನಗೆ, ಇನ್ನು ನಿಮ್ಮ ಮಾತು ಕೇಳಿಕೊಂಡು ಪದೇ ಪದೇ ಬಲಿಪಶುವಾಗುತ್ತಾ ನನ್ನ ರಾಜಕೀಯ ಜೀವನಕ್ಕೆ ಧಕ್ಕೆ ತಂದು ಕೊಳ್ಳಲು ಸಿದ್ಧನಿಲ್ಲ’ ಎಂದು ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌ ಅವರು ರಾಜ್ಯ ಬಿಜೆಪಿ ನಾಯಕರಿಗೆ ಖಡಕ್‌ ಸಂದೇಶ ರವಾನಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಪಿರಿಯಾಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ
ಮುಂಬರುವ ವಿಧಾನಸಭೆ ಚುನಾವಣೆಯ ಸ್ಪರ್ಧಾಕಾಂಕ್ಷಿಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರೂ ಕ್ಷೇತ್ರದಲ್ಲಿ ಇತ್ತೀಚೆಗೆ ಪಕ್ಷದಿಂದ ಮತ್ತೂಂದು ಶಕ್ತಿ ಕೇಂದ್ರ ಹುಟ್ಟುಹಾಕಿ ಪಕ್ಷದ ಕೆಲ ನಾಯಕರೇ ಅವರಿಗೆ ನೀರೆರೆಯುತ್ತಿದ್ದಾರೆ ಎಂಬುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. 

ಶಕ್ತಿಕೇಂದ್ರ ಹುಟ್ಟಿಕೊಂಡಿದ್ದು ಹೇಗೆ?: ಒಂದು ವರ್ಷದ ಹಿಂದೆ ಪಿರಿಯಾಪಟ್ಟಣಕ್ಕೆ ಬಂದ ಹಾವೇರಿ ಮೂಲದ ಉದ್ಯಮಿ ಮಂಜುನಾಥ್‌ ಎಂಬುವರು, ಪಕ್ಷೇತರನಾಗಿಯೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಬರುವುದಾಗಿ ಬಿಂಬಿಸಿಕೊಂಡು ಕ್ಷೇತ್ರದ ತುಂಬೆಲ್ಲಾ ಹಣ ಚೆಲ್ಲಿ ಯುವಕರನ್ನು ತಮ್ಮತ್ತ ಸೆಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ತಾವು ಕುರುಬ ಸಮಾಜದವರು ಎಂದು ಊರ ತುಂಬೆಲ್ಲಾ ಕನಕಜಯಂತಿ ಆಚರಿಸಲು ಹಣ ನೀಡುತ್ತಾ, ಹೆಲಿಕಾಪ್ಟರ್‌ನಲ್ಲೇ ಹಾರಾಡುತ್ತಾ ಆಶಾಗೋಪುರ ಕಟ್ಟಿದ್ದರು. ಆದರೆ, ದಿನ ಕಳೆದಂತೆ ಪಕ್ಷೇತರನಾಗಿ ಗೆದ್ದು ಬರುವುದು ಸುಲಭವಲ್ಲ ಎಂಬ ಕಾರಣಕ್ಕೆ ಕೆಲ ತಿಂಗಳ ಹಿಂದೆ ಬಿಜೆಪಿ ಸೇರಿಕೊಂಡರು. ಪಕ್ಷಕ್ಕೆ ಸೇರಿದ ಬೆನ್ನಲ್ಲೇ ಅವರನ್ನು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಲಾಯಿತು. ಅಂದಿನಿಂದ ಮತ್ತೆ ಕ್ಷೇತ್ರದಲ್ಲಿ ಓಡಾಟ ಶುರು ಮಾಡಿದ ಮಂಜುನಾಥ್‌, ಬಿಜೆಪಿಯಿಂದ ತಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಬಗ್ಗೆ ಪಕ್ಷದ ನಾಯಕರ ಗಮನಕ್ಕೆ ತಂದಿದ್ದರೂ ಸರಿಪಡಿಸುವ ಕೆಲಸ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ವಿಜಯಶಂಕರ್‌ರ ಅಸಮಾಧಾನಕ್ಕೆ ಕಾರಣ. 

ಅನಧಿಕೃತ ಕಚೇರಿ: ಪಕ್ಷದ ರಾಜ್ಯ ವರಿಷ್ಠರು ಪಿರಿಯಾಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯನ್ನು ಸಂಘಟಿಸಿ ಕೆಲಸ ಮಾಡುವಂತೆ ಸೂಚಿಸಿದ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದು, ಕೆಲವರು ಪಕ್ಷದಲ್ಲೇ ಇದ್ದುಕೊಂಡು ಅನಧಿಕೃತವಾಗಿ ಕಚೇರಿ ಮತ್ತು ಪಕ್ಷದ ಬಾವುಟಗಳನ್ನು ದುರುಪಯೋಗ ಪಡಿಸಿಕೊಂಡು ಪಕ್ಷದ ಶಿಸ್ತಿಗೆ ಧಕ್ಕೆ ತರುತ್ತಿದ್ದಾರೆ. ಈ ಬಗ್ಗೆ ರಾಜ್ಯದ ವರಿಷ್ಠರಿಗೆ ತಿಳಿಸಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ, ಇದು ತಮಗೆ ಅನುಮಾನ ಹುಟ್ಟಿಸಿದೆ ಎಂದು ದೂರಿದ್ದಾರೆ. 

ಸ್ಥಳೀಯ ನಾಯಕರಿಂದ ಮನವೊಲಿಕೆ
ವಿಜಯಶಂಕರ್‌ ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಸ್‌.ಎ. ರಾಮದಾಸ್‌, ಪಕ್ಷದ ಮುಖಂಡರಾದ ಎಲ್‌.ನಾಗೇಂದ್ರ, ಕೋಟೆ ರಾಮಕೃಷ್ಣಪ್ಪ, ಮಲ್ಲಪ್ಪಗೌಡ, ಫ‌ಣೀಶ್‌ ಮತ್ತಿತರರು ಅವರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದರು. ಇನ್ನೆರಡು ದಿನ ಕಾದು ನೋಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.