ಮಗ ಸರೆಂಡರ್‌ ಅಗ್ತಾನೆ; ರಾಜಕಾರಣ ಮಾಡ್ಬೇಡಿ:ಹ್ಯಾರಿಸ್‌


Team Udayavani, Feb 19, 2018, 9:49 AM IST

35.jpg

ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನ ಹೊಟೇಲೊಂದರಲ್ಲಿ ಟೇಬಲಿಗೆ ಕಾಲು ತಾಗಿತು ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ವತ್‌ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪುತ್ರ ಮಹಮದ್‌ ನಲಪಾಡ್‌ಗೆ ಪೊಲೀಸರಿಗೆ ಶರಣಾಗಲು ಸೂಚಿಸಿದ್ದೇನೆ ಎಂದು ಕಾಂಗ್ರೆಸ್‌ನ ಪ್ರಭಾವಿ ಶಾಸಕ ಹ್ಯಾರಿಸ್‌ ಹೇಳಿಕೆ ನೀಡಿದ್ದಾರೆ. 

ಸೋಮವಾರ ಬೆಳಗ್ಗೆ ಮನೆ ಪರಿಶೀಲನೆಗೆಂದು ಪೊಲೀಸರು ಬಂಧ ತಕ್ಷಣ ಶಾಂತಿನಗರದ ನಿವಾಸದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಹ್ಯಾರಿಸ್‌ ‘ಜವಾಬ್ಧಾರಿಯುತ ನಾಗರಿಕನಾಗಿ, ಶಾಸಕನಾಗಿ ಕಾನೂನನ್ನು ಪಾಲನೆ ಮಾಡಿಕೊಂಡು ಬಂದವನು ನಾನು. ಈ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ, ನನಗೂ ಅದಕ್ಕೂ ಸಂಬಂಧವೇ ಇಲ್ಲ. ಕಾನೂನಿಗಿಂದ ದೊಡ್ಡವರು ಯಾರು ಇಲ್ಲ . ನನ್ನ ಮಗ ನನಗೆ ಘಟನೆ ನಡೆದ ಬಳಿಕ ಫೋನ್‌ ಕಾಲ್‌ ಮಾಡಿಯೇ ಇಲ್ಲ. ಅವನ ತಾಯಿಗೆ ಕರೆ ಮಾಡಿ ಮಾತನಾಡಿದ್ದ. ಈಗ ನಾನೇ ಸರೆಂಡರ್‌ ಆಗುವಂತೆ ಹೇಳಿದ್ದೇನೆ’ ಎಂದರು. 

‘ನಾನಾಗಲಿ, ಮಗನಾಗಲಿ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ನಿನ್ನೆ ಅವನು ನಮ್ಮೊಂದಿಗೆ ಇದ್ದರೆ ಅವನ್ನು ಠಾಣೆಗೆ ಕಳುಹಿಸಿಕೊಡುತ್ತಿದ್ದೆ, ನಾವು ಇಟ್ಟುಕೊಂಡು ಮಾಡುವಂತದ್ದೇನಿಲ್ಲ . ತಪ್ಪು ಸರಿ ಪಡಿಸುವ ಕಾರ್ಯ ಯಾರೂ ಮಾಡಬಾರದು’ಎಂದರು. 

‘ಅವನಿಗೆ ದೇವರು ಆಯಸ್ಸು ಕೊಟ್ರೆ ಅವನಿಗೆ ಒಳ್ಳೆ ಬುದ್ದಿ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ. ಇದನ್ನು ಉಪಯೋಗಿಸಿ ನೀಚ ರಾಜಕಾರಣ ಮಾಡಬೇಡಿ .  ಶವದ ಮೇಲೆ ಚಾಕು ವಿನಿಂದ ಚುಚ್ಚಿ ರಾಜಕಾರಣ ಮಾಡುವುದು ಬೇಡ’ ಎಂದರು. 

‘ಎಲ್ಲಾ ಮಧ್ಯಮ ಸ್ನೇಹಿತರು ನನ್ನನ್ನು ನೋಡಿದ್ದೀರಿ ನನ್ನ ಮಗನನ್ನು ಸರೆಂಡರ್‌ ಮಾಡಿಸುತ್ತಿದ್ದೇನೆ. ಕಾನೂನು ಏನು ಕ್ರಮ ತೆಗೆದುಕೊಳ್ಳುತ್ತನೆ ಅದನ್ನು ತೆಗೆದುಕೊಳ್ಳಲಿ .ಬೆಳೆದಿರುವ ಮಗ,ಮದುವೆಯೂ  ಆಗಿದೆ ಅವನಿಗೆ’ ಎಂದರು. 

ನಮ್ಮ ತಾಯಿಗೆ ಹುಚ್ಚು ಹಿಡಿದರೆ..!ಮಾಧ್ಯಮಗಳ ವಿರುದ್ಧ ಕಿಡಿ 

‘ಬೇರೆಯವರ ತಾಯಿಗೆ ಹುಚ್ಚು ಹಿಡಿದರೆ ನೋಡಿ ನಗಲು ಖುಷಿ ಆಗುತ್ತದೆ. ಆದರೆ ನಮ್ಮ ತಾಯಿಗೆ ಹುಚ್ಚು ಹಿಡಿದರೆ ಏನಾಗುತ್ತದೆ. ನಿಮಗೆ ಯಾರಿಗೂ ಈ ರೀತಿಯ ಸ್ಥಿತಿ ಬರದಿರಲಿ’ ಎಂದು ಮಾಧ್ಯಮಗಳ ವಿರುದ್ಧವೂ ಕಿಡಿ ಕಾರಿದರು. 

‘ನಾನು ಜನರಿಗೋಸ್ಕರ ಇರುವವನು, ಬೇಕಾದರೆ ರಾಜಕೀಯವನ್ನು ಬಿಟ್ಟು ಬಿಡುತ್ತೇನೆ. ನಾನು ಮಾಧ್ಯಮ ದವರಲ್ಲಿ ವಿನಂತಿ ಮಾಡುತ್ತಿದ್ದೇನೆ ಏನು ಮಾಡಬಾರದು ಅಂದುಕೊಂಡಿದ್ದೇನೋ ಅದನ್ನು ಮಾಡುವಂತೆ ಮಾಡಿದ್ದೀರಿ. ನೀವು ತುಂಬಾ ಬಿಲ್ಡ್‌ ಅಪ್‌ ಕೊಡಬೇಡಿ’ ಎಂದು ಮನವಿ ಮಾಡಿದರು. 

ನಲಪಾಡ್‌ ಮತ್ತು ಹತ್ತು ಮಂದಿಯ ಗ್ಯಾಂಗ್‌ ಪುಂಡಾಟಿಕೆ ನಡೆಸಿ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು, ಬಳಿಕ ಮಲ್ಯ ಆಸ್ಪತ್ರೆಗೂ ಬಂದು ವಿದ್ವತ್‌,ಸಹೋದರನ ಮೇಲೂ ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದಿದ್ದರು. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.