ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ – ರಾಹುಲ್
Team Udayavani, Oct 3, 2022, 11:14 AM IST
ಬೆಂಗಳೂರು: ಇಂದು ಮಧ್ಯಾಹ್ನ 12.30ಕ್ಕೆ ಮೈಸೂರಿಗೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳಿ ರಾಹುಲ್ ಗಾಂಧಿ ಜತೆ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ.
ಸೋನಿಯಾ ಆಗಮನ ಹಿನ್ನಲೆಯಲ್ಲಿ ಪಾದಯಾತ್ರೆ ಮುಗಿಸಿ ರಾಹುಲ್ ಗಾಂಧಿ ಕೊಡಗಿಗೆ ತೆರಳಲಿದ್ದಾರೆ.
ಅಕ್ಟೋಬರ್ 4 ಹಾಗೂ 5 ರಂದು ಪಾದಯಾತ್ರೆಗೆ ವಿರಾಮ ನೀಡಲಿದ್ದು, ಎರಡು ದಿನ ತಾಯಿ ಜೊತೆ ಕೊಡಗಿನಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಸಿದ್ದರಾಮಯ್ಯ ಕಾಲದ ಶಿಕ್ಷಕರ ಅಕ್ರಮ ನೇಮಕಕ್ಕೆ ಮರುಜೀವ ಕೊಟ್ಟ ಬಿಜೆಪಿ
ಅಕ್ಟೋಬರ್ 6 ರಂದು ಮಂಡ್ಯ ಜಿಲ್ಲೆಯ ಮಹದೇಶ್ವರಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಅಂದು ಮೇಲುಕೋಟೆಯಲ್ಲಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಕೆಲ ಹೊತ್ತು ಭಾಗಿಯಾಗುತ್ತಾರೆ. ಅಕ್ಟೋಬರ್ 7 ರಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದು, ನಾಗಮಂಗಲದಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ. ಆದಿ ಚುಂಚನಗಿರಿ ಮಠಕ್ಕೂ ಪ್ರಿಯಾಂಕಾ ಗಾಂಧಿ ಭೇಟಿ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…