Sonu Srinivas ಗೌಡಗೆ 14 ದಿನ ನ್ಯಾಯಾಂಗ ಬಂಧನ
Team Udayavani, Mar 25, 2024, 11:45 PM IST
ಬೆಂಗಳೂರು: ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ಬಾಸ್ ಸ್ಪರ್ಧಿ ಹಾಗೂ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ ಗೌಡಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣ ಸಂಬಂಧ ಮಾ.22ರಂದು ಆಕೆಯನ್ನು ಬಂಧಿಸಿ 4 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಸೋಮವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಆಕೆಯನ್ನು ಕೋರ್ಟ್ಗೆ ಹಾಜರುಪಡಿಸಲಾಗಿತ್ತು.
ಪೋಷಕರಿಗೆ ಹಣ ಕೊಟ್ಟಿರುವುದು ಬೆಳಕಿಗೆ
ಸೋನುಗೌಡಳ ವಿಚಾರಣೆಯಲ್ಲಿ ಬಾಲಕಿಯ ಪೋಷಕರಿಗೆ 50 ಸಾವಿರ ರೂ. ಕೊಟ್ಟಿರುವುದು ಪತ್ತೆಯಾಗಿದೆ. ಮತ್ತೂಂದೆಡೆ ಮಗುವಿನ ಪಾಲಕರ ಊರಾದ ರಾಯಚೂರಿಗೆ ತೆರಳಿ ಸ್ಥಳ ಮಹಜರು ನಡೆಸಲಾಗಿತ್ತು. ಆಗ ಮಗುವಿನ ಪಾಲಕರು 50 ಸಾವಿರ ರೂ. ಅನ್ನು ಸೋನು ಗೌಡಳಿಂದ ಪಡೆದುಕೊಂಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೂಮ್ಮೆ ಪಾಲಕರಿಗೆ ನೋಟಿಸ್ ನೀಡಿ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಮಗುವಿನ ಜತೆ ರೀಲ್ಸ್
ರಾಯಚೂರು ಮೂಲದ ದಂಪತಿಯ 8 ವರ್ಷದ ಬಾಲಕಿ ಜತೆ ಸೋನು ರೀಲ್ಸ್ ಮಾಡುತ್ತಿದ್ದಳು. ಬಳಿಕ ಬಾಲಕಿಯನ್ನು ತನಗೇ ಕೊಡಬೇಕೆಂದು ಹಠ ಹಿಡಿದು, 10 ಲಕ್ಷ ರೂ. ಆಮಿಷ ಒಡ್ಡಿದ್ದಳು ಎನ್ನಲಾಗಿದೆ. ಆದರೆ ಬಾಲಕಿ ಹೆತ್ತವರು ಒಪ್ಪಿರಲಿಲ್ಲ. ಆದರೆ ಮಾ. 1ರಂದು ರಾಯಚೂರಿನ ಬಾಲಕಿಯ ಮನೆಗೆ ಹೋಗಿದ್ದ ಸೋನು ಗೌಡ, 15 ದಿನ ಈಕೆ ನನ್ನ ಬಳಿ ಇರಲಿ. ಮಗು, ಅಪ್ಪ ಅಮ್ಮ ಬೇಕು ಎಂದಾಗ ನಿಮ್ಮ ಬಳಿ ಕರೆದುಕೊಂಡು ಬರುತ್ತೇನೆ. ಮಗಳನ್ನು ನೋಡಬೇಕು ಎನಿಸಿದರೆ ನೀವೂ ಬೆಂಗಳೂರಿಗೆ ಬನ್ನಿ ಎಂದಿದ್ದಳಂತೆ. ಅದಕ್ಕೆ ಬಾಲಕಿಯ ಹೆತ್ತವರು ಒಪ್ಪಿದ್ದರು. ಮಗುವನ್ನು ಬೆಂಗಳೂರಿಗೆ ಕರೆತಂದ ಬಳಿಕ, ನಾನು ಮಗುವನ್ನು ದತ್ತು ತೆಗೆದುಕೊಂಡಿದ್ದೇನೆ ಎಂದು ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಳು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಯೊಬ್ಬರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ