ಶ್ರದ್ಧಾಂಜಲಿ ಸೇವೆಗೂ ಬರಲಿದೆ 108 ವಾಹನ


Team Udayavani, Mar 10, 2017, 3:45 AM IST

108.jpg

ಬೆಂಗಳೂರು:ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬಡವರ್ಗಕ್ಕೆ ವೈದ್ಯಕೀಯ ಸೇವೆ ಒದಗಿಸುತ್ತಿರುವ “108 ಆ್ಯಂಬುಲೆನ್ಸ್‌ ಜತೆಗೆ ಇನ್ಮುಂದೆ “ಶ್ರದ್ಧಾಂಜಲಿ’ ವಾಹನ ಸೇವೆಯೂ ಲಭ್ಯವಾಗಲಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಬಡರೋಗಿಗಳ ಮೃತದೇಹ ಮನೆಗೆ ರವಾನಿಸುವುದು ಅಥವಾ ಮನೆಯಲ್ಲೇ ಮೃತಪಟ್ಟ ಸಂದರ್ಭಗಳಲ್ಲಿ ಅಂತ್ಯಕ್ರಿಯೆಗಾಗಿ ಚಿತಾಗಾರ ಅಥವಾ ರುದ್ರಭೂಮಿಗೆ ಸಾಗಿಸಲು ಈ “ಶ್ರದ್ಧಾಂಜಲಿ’ ಸೇವೆ ಬಳಕೆ ಮಾಡಿಕೊಳ್ಳಬಹುದು. ಇದು ಉಚಿತ ಸೇವೆಯಾಗಿದೆ.

108 ಕ್ಕೆ ಕರೆ ಮಾಡಿದರೂ ಈ ಸೇವೆ ಲಭ್ಯವಾಗಲಿದೆ.  ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 30 ಶ್ರದ್ಧಾಂಜಲಿ ವಾಹನ ಸೇವೆ ಒದಗಿಸಲಾಗಿದ್ದು ಕಳೆದ ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ  ಈ ಯೋಜನೆಗೆ ಇದೀಗ ಚಾಲನೆ ದೊರೆತಿದೆ. ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಯುವತಿಯೊಬ್ಬಳ ಶವವನ್ನು ಪೋಷಕರು ಟಿವಿಎಸ್‌ ಮೊಪೆಡ್‌ನ‌ಲ್ಲಿ ಸಾಗಣೆ ಮಾಡಿದ್ದ ಮನ ಕಲಕುವ ಘಟನೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿತ್ತು. ಈ ಘಟನೆ ಬಳಿಕ ಎಚ್ಚೆತ್ತುಕೊಂಡ ಸರಕಾರವು 108 ಆ್ಯಂಬುಲೆನ್ಸ್‌ ಸಹಾಯವಾಣಿ ಮೂಲಕ ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ಶ್ರದ್ಧಾಂಜಲಿ ವಾಹನ ಸೇವೆಗೆ ಚಾಲನೆ ನೀಡಿದೆ.

ಇದರ ಜತೆಗೆ ತುರ್ತು ಸಂದರ್ಭದಲ್ಲಿ 108 ಆ್ಯಂಬುಲೆನ್ಸ್‌ ಸಹ ಮೃತ ದೇಹ ಸಾಗಣೆಗೆ ಬಳಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಆರೋಗ್ಯ ಸಚಿವರಾಗಿದ್ದ ಯು.ಟಿ. ಖಾದರ್‌ ಅವರು,108 ಆರೋಗ್ಯ ಕವಚ ಸೇವೆಯಿಂದ ವಾಪಸ್‌ ಪಡೆದುಕೊಂಡಿರುವ  ಹಳೇ ಆ್ಯಂಬುಲೆನ್ಸ್‌ ವಾಹನಗಳನ್ನು ಶ್ರದ್ಧಾಂಜಲಿ ವಾಹನಗಳಾಗಿ ಪರಿವರ್ತಿಸಿ  ಮೃತದೇಹ ಸಾಗಣೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿತ್ತು. ಆದರೆ, ಶ್ರದ್ಧಾಂಜಲಿ ವಾಹನಗಳ ಸೇವೆ ಹೊರಗುತ್ತಿಗೆ ಪಡೆದು ನಿರ್ವಹಣೆ ಮಾಡುವುದಕ್ಕೆ ಖಾಸಗಿ ಸಂಘ-ಸಂಸ್ಥೆಗಳಿಂದ ಸೂಕ್ತ ಸ್ಪಂದನೆ ದೊರೆತಿರಲಿಲ್ಲ. ಹೀಗಾಗಿ, ಶ್ರದ್ಧಾಂಜಲಿ ವಾಹನಗಳು ಸಿದ್ಧಗೊಂಡಿದ್ದರೂ ಅವುಗಳ ಉಪಯೋಗ ಸಾರ್ವಜನಿಕರಿಗೆ ಲಭ್ಯವಾಗಿರಲಿಲ್ಲ.

ಇದೀಗ, ಶ್ರದ್ಧಾಂಜಲಿ ವಾಹನಕ್ಕೆ ಬೇಕಾಗುವ ಒಬ್ಬ ಚಾಲಕನನ್ನು ಹೊರ ಗುತ್ತಿಗೆ ಆಧಾರದಲ್ಲಿ ಆಯಾ ಜಿಲ್ಲೆಗಳಲ್ಲಿ ನೇಮಕ ಮಾಡಿಕೊಳ್ಳಲು ಹಾಗೂ ಈ ವಾಹನಗಳ ಚಾಲಕರಿಗೆ ಒಂದು ಜತೆ ಸಮವಸ್ತ್ರ ಮತ್ತು ಕಪ್ಪು ಶೂಗಳನ್ನು ಖರೀದಿಸಿ ಕೊಡಲು, ವಾಹನದಲ್ಲಿ ಮೃತರ ಸಂಬಂಧಿಕರಿಗೆ ಕುಳಿತುಕೊಳ್ಳುವುದಕ್ಕೆ ಸೂಕ್ತ ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಶ್ರದ್ಧಾಂಜಲಿ ವಾಹನವು ಆಯಾ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿಲುಗಡೆಗೊಂಡಿರುತ್ತದೆ. ಸಾರ್ವಜನಿಕರು, 108 ಸಹಾಯವಾಣಿ ಮೂಲಕ ಕರೆ ಮಾಡಿದರೆ, ತಕ್ಷಣ ವಾಹನವು ಮೃತ ದೇಹವಿರುವ ಸ್ಥಳಕ್ಕೆ ಆಗಮಿಸಿ, ಮನೆ ಅಥವಾ ಚಿತಾಗಾರಕ್ಕೆ ಉಚಿತವಾಗಿ ಸಾಗಿಸುತ್ತದೆ. ಹೀಗಾಗಿ, ಶ್ರದ್ಧಾಂಜಲಿ ವಾಹನದಲ್ಲಿ ಕನಿಷ್ಟ 200 ಕಿಮೀ. ದೂರ ಕ್ರಮಿಸುವುದಕ್ಕೆ ಬೇಕಾಗುವಷ್ಟು ಇಂಧನ ಶೇಖರಣೆಯಾಗಿರುವಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ.

*ಬಡ ವರ್ಗದವರಿಗೆ ಅನುಕೂಲವಾಗುವಂತೆ, “ಶ್ರದ್ಧಾಂಜಲಿ’ ವಾಹನ ಸೇವೆ ಚಾಲನೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಈಗಾಗಲೇ ಎಲ್ಲ ಜಿಲ್ಲೆಗಳ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು 108 ಆ್ಯಂಬುಲೆನ್ಸ್‌ ಸಹಾಯವಾಣಿ ಮೂಲಕ ಶ್ರದ್ಧಾಂಜಲಿ ವಾಹನ ಸೌಲಭ್ಯ ಪಡೆದುಕೊಳ್ಳುವುದಕ್ಕೂ ಸಂಪರ್ಕ ಮಾಡಬಹುದು.
– ಶಾಲಿನಿ ರಜನೀಶ್‌, ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.