Bhavani ರೇವಣ್ಣಗೂ ಶೀಘ್ರ ಎಸ್ಐಟಿ ನೋಟಿಸ್
ದೂರಿನಲ್ಲಿ ಭವಾನಿ ಹೆಸರು ಉಲ್ಲೇಖ ಹಿನ್ನೆಲೆ
Team Udayavani, May 6, 2024, 11:16 PM IST
ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನದ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದ್ದು, ಅವರಿಗೂ ನೋಟಿಸ್ ಕೊಡಲು ಎಸ್ಐಟಿ ಸಿದ್ಧತೆ ನಡೆಸಿದೆ.
ಅಪಹರಣ ಪ್ರಕರಣ ಸಂಬಂಧ ಮಹಿಳೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಭವಾನಿ ರೇವಣ್ಣ ಅವರ ಹೆಸರು ಪ್ರಸ್ತಾವಿಸಿದ್ದಾ ರೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರನ್ನು ಎಸ್ಐಟಿ ವಿಚಾರಣೆ ಮಾಡಲಿದೆ. ಹೀಗಾಗಿ ಒಂದೆರೆಡು ದಿನಗಳಲ್ಲಿ ಭವಾನಿ ರೇವಣ್ಣಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ.
ಸಂತ್ರಸ್ತೆ ಪುತ್ರ ನೀಡಿದ ದೂರಿನಲ್ಲಿ, ಲೋಕಸಭಾ ಚುನಾವಣೆಗೆ 4 ದಿನಗಳು ಇರುವಾಗ ಪರಿಚಿತರಾದ ಸತೀಶ್ ಬಾಬಣ್ಣ ನಮ್ಮ ಮನೆಗೆ ಬಂದಿದ್ದರು. ಭವಾನಿ ಅಕ್ಕ ನಿಮ್ಮನ್ನು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನಮ್ಮ ತಾಯಿಯನ್ನು ಜತೆಯಲ್ಲಿ ಹೊಳೆನರಸೀಪುರಕ್ಕೆ ಕರೆದುಕೊಂಡು ಹೋಗಿದ್ದರು. ಮತದಾನದ ದಿನದ ಬೆಳಗ್ಗೆ ಸತೀಶ್ ಬಾಬಣ್ಣ ನನ್ನ ತಾಯಿಯನ್ನು ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದರು. ಆಗ ಪೊಲೀಸ್ನವರು ಬಂದರೆ ಅವರಿಗೆ ಏನನ್ನೂ ಹೇಳಬೇಡಿ. ಅವರಿಗೆ ಸಿಗಬೇಡಿ. ನಿಮ್ಮ ಮೇಲೆ ಕೇಸ್ ಆಗುತ್ತದೆ. ಪೊಲೀಸರು ಬಂದರೆ ನನಗೆ ತಿಳಿಸಿ ಎಂದು ಹೇಳಿ ಹೋಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ
ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ
Pen Drive Case; ಏರ್ಪೋರ್ಟ್ನಲ್ಲಿ ಪ್ರಜ್ವಲ್ಗೆ “ಸ್ವಾಗತಿ’ಸಲು ಎಸ್ಐಟಿ ಸಿದ್ದತೆ !
D. K. Shivakumar ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಜಿ.ಸಿ. ಚಂದ್ರಶೇಖರ್ ತಿರುಗೇಟು
ಸರ್ಕಾರದ ಕಮಿಷನ್ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ
MUST WATCH
ಹೊಸ ಸೇರ್ಪಡೆ
Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು
Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು
Arrested: ಲಿವ್ ಇನ್ ಸಂಗಾತಿ ಆತ್ಮಹತ್ಯೆ; ಐಆರ್ಎಸ್ ಅಧಿಕಾರಿ ಬಂಧನ
ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ
Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು