Tweet war; ಶೀಘ್ರದಲ್ಲೇ ಬಿಜೆಪಿಯವರಿಗೆ ಸಿಹಿ ಸುದ್ದಿ! ಕುಮಾರಸ್ವಾಮಿ
Team Udayavani, Feb 2, 2019, 7:57 AM IST
ಬೆಂಗಳೂರು/ಮೈಸೂರು: ಭೂಗತ ಪಾತಕಿ ರವಿ ಪೂಜಾರಿ ಬಂಧನ ಸಮ್ಮಿಶ್ರ ಸರ್ಕಾರದ ಯಶಸ್ಸು ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಗೆ ತಿರಗೇಟು ನೀಡಿರುವ ಬಿಜೆಪಿ ಅಣ್ಣಾ ಕುಮಾರಣ್ಣ ರವಿ ಪೂಜಾರಿಯನ್ನು ಬಂಧಿಸಿದ್ದು ಸಮ್ಮಿಶ್ರ ಸರ್ಕಾರದ ಸಾಧನೆ ಎಂದು ಕೀರ್ತಿ ಪಡೆಯುವ ಮೊದಲ ಕಂಪ್ಲಿ ಶಾಸಕ ಗಣೇಶರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ ಎಂದು ಸವಾಲು ಹಾಕಿದೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಕೂಡಾ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಈಗಾಗಲೇ ಶಾಸಕ ಗಣೇಶ್ ಬಂಧನಕ್ಕೆ ಸೂಚನೆ ನೀಡಿದ್ದೇನೆ. ಆದರೆ ಪಾತಕಿ ರವಿ ಪೂಜಾರಿ ತಲೆಮರೆಸಿಕೊಂಡು 15 ವರ್ಷ ಕಳೆದಿದೆ. ಈ ವೇಳೆ ಬಿಜೆಪಿಯವರು ಕೂಡಾ ಐದು ವರ್ಷ ಆಡಳಿತ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯವರು ಯಾಕೆ ರವಿ ಪೂಜಾರಿಯನ್ನು ಬಂಧಿಸಿಲ್ಲ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ಪ್ರಶ್ನಿಸಿದ್ದಾರೆ.
ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಆ ಬಗ್ಗೆ ಬಿಜೆಪಿಯವರಿಗೆ ಅನುಮಾನ ಬೇಡ. ನಾನು ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆ ಇಲ್ಲ. ಟ್ವೀಟ್ ನಲ್ಲಿ ಅಣ್ಣಾ ಎಂದು ಕರೆದಿರುವುದಕ್ಕೆ ಧನ್ಯವಾದ ಅರ್ಪಿಸಿದ ಕುಮಾರಸ್ವಾಮಿ, ಬಿಜೆಪಿಯವರಿಗೆ ಶೀಘ್ರದಲ್ಲಿಯೇ ಸಿಹಿ ಸುದ್ದಿ ಕೊಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ