Prajwal Revanna: ಶೀಘ್ರದಲ್ಲೇ ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ?


Team Udayavani, May 24, 2024, 6:50 AM IST

37

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋಗಳಿರುವ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಸಂಸದ ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಕೆಲವೇ ದಿನಗಳಲ್ಲಿ ಪ್ರಜ್ವಲ್‌ ವಿಶೇಷ ತನಿಖಾ ತಂಡದ (ಎಸ್‌ಐಟಿ) ಬಲೆಗೆ ಬೀಳುವ ಸಾಧ್ಯತೆಗಳಿವೆ.

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಅಶ್ಲೀಲ ಪೆನ್‌ಡ್ರೈವ್‌ ಕೇಸ್‌ನ ಆರೋಪ ಎದುರಿಸುತ್ತಿರುವ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿ ಹಗಲಿರುಳೆನ್ನದೆ ಪಣ ತೊಟ್ಟು ನಿಂತಿದೆ. ಪ್ರಜ್ವಲ್‌ ಜರ್ಮನಿಗೆ ತೆರಳಿರುವುದೇ ಎಸ್‌ಐಟಿ ಬಂಧನಕ್ಕೆ ಅಡ್ಡಿಯಾಗಿತ್ತು. ಕಾನೂನು ತಜ್ಞರ ಮೊರೆ ಹೋಗಿರುವ ಎಸ್‌ಐಟಿಯು ಪಾಸ್‌ಪೋರ್ಟ್‌ ರದ್ದುಮಾಡಿಸಿ ಪ್ರಜ್ವಲ್‌ ರೇವಣ್ಣರನ್ನು ಕಟ್ಟಿಹಾಕುವ ಮಾರ್ಗ ಕಂಡುಕೊಂಡಿದೆ. ಈಗ ದೇಶದ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್‌ ರದ್ದುಮಾಡುವ ಪ್ರಕ್ರಿಯೆ ಆರಂಭಿಸಿದೆ ಎನ್ನಲಾಗಿದೆ. ಇದರಿಂದ ಪ್ರಜ್ವಲ್‌ಗೆ ಸಂಕಷ್ಟ ಎದುರಾಗಲಿದ್ದು, ಶೀಘ್ರದಲ್ಲಿ ಅವರು ದೇಶಕ್ಕೆ ವಾಪಸಾಗುವ ಸಾಧ್ಯತೆಗಳಿವೆ.

ಪಾಸ್‌ಪೋರ್ಟ್‌ ರದ್ದು ಹೇಗೆ ?

ಭಾರತೀಯ ವಿದೇಶಾಂಗ ಇಲಾಖೆಯಡಿ ಬರುವ ಪಾಸ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾವು ಎಸ್‌ಐಟಿ ಕಳಿಸಿರುವ ದಾಖಲೆಗಳನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನಿಸಲಿದೆ. ಕೇಂದ್ರ ಗೃಹ ಇಲಾಖೆಯು ಇದನ್ನು ಪರಿಶೀಲಿಸಿ ಒಪ್ಪಿಗೆ ಕೊಟ್ಟ ಬಳಿಕ ಭಾರತೀಯ ವಿದೇಶಾಂಗ ಇಲಾಖೆಗೆ ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಅಧಿಕಾರವಿದೆ. ಪಾಸ್‌ಪೋರ್ಟ್‌ ರದ್ದಾದ ಕೂಡಲೇ ಎಲ್ಲ ದೇಶಗಳ ಇಮಿಗ್ರೇಷನ್‌ಗೆ ಈ ಮಾಹಿತಿ ರವಾನೆಯಾಗಲಿದೆ.

ದಾಖಲೆ ಸಮೇತ ಕೇಂದ್ರಕ್ಕೆ ಮನವಿ

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದತಿಗೆ ಎಸ್‌ಐಟಿಯು ರಾಜ್ಯ ಗೃಹ ಇಲಾಖೆ ಮೂಲಕ ಭಾರತೀಯ ವಿದೇಶಾಂಗ ಇಲಾಖೆಗೆ ಪತ್ರ ರವಾನಿಸಿತ್ತು. ಸಿಎಂ ಸಿದ್ದರಾಮಯ್ಯ ಈ ಹಿಂದೆ ಪತ್ರ ಬರೆದಾಗ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಇದರ ಬೆನ್ನಲ್ಲೇ ಎಸ್‌ಐಟಿಯು ನ್ಯಾಯಾಲಯದಿಂದ ಬಂಧನ ವಾರೆಂಟ್‌ ಪಡೆದು ಅದರ ದಾಖಲೆ ಸಮೇತ ಪಾಸ್‌ಪೋರ್ಟ್‌ ರದ್ದತಿಗೆ ಮತ್ತೂಮ್ಮೆ ಕೇಂದ್ರಕ್ಕೆ ಮನವಿ ಮಾಡಿದೆ.

ಏನಿದು ರಾಜತಾಂತ್ರಿಕ ಪಾಸ್‌ಪೋರ್ಟ್‌?:

ಭಾರತದಲ್ಲಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ಕೆಲವು ವ್ಯಕ್ತಿಗಳಿಗೆ ಮಾತ್ರ ನೀಡಲಾಗುತ್ತದೆ. ದಿಲ್ಲಿಯ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಂ ವಿಭಾಗದಲ್ಲಿ ಮಾತ್ರ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಲಾಗುತ್ತದೆ. ಈ ಪಾಸ್‌ಪೋರ್ಟ್‌ನಿಂದ  ಕೆಲವು ದೇಶಗಳು ವೀಸಾ ವಿಸ್ತರಿಸಿದರೆ,  ಕೆಲವು ದೇಶಗಳಲ್ಲಿ ವೀಸಾ ಮನ್ನಾಕ್ಕೂ ಅವಕಾಶವಿದೆ. ಭಾರತೀಯ ವಿದೇಶಾಂಗ ಸೇವೆಗಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಆಯ್ದ ಅಧಿಕಾರಿಗಳು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು, ಅಧಿಕೃತ ಉದ್ದೇಶಗಳಿಗಾಗಿ ವಿದೇಶಕ್ಕೆ ಭೇಟಿ ನೀಡುವ ವ್ಯಕ್ತಿಗಳು, ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಕೆಲಸ ಮಾಡುವ ಅಧಿಕಾರಿಗಳ ಮಕ್ಕಳು, ಪಾಲಕರು, ರಾಜತಾಂತ್ರಿಕ ಸ್ಥಾನಮಾನ ಹೊಂದಿರುವ ವ್ಯಕ್ತಿಗಳು, ವಿದೇಶಿ ಪ್ರವಾಸಗಳಿಗಾಗಿ ಭಾರತ ಸರಕಾರದಿಂದ ನೇಮಕಗೊಂಡ ಅಧಿಕಾರಿಗಳು, ಕೇಂದ್ರ ಸರಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗಳಿಗೆ ರಾಜತಾಂತ್ರಿಕ ಪಾಸ್‌ಪೋರ್ಟ್‌ ಪಡೆಯಲು ಅವಕಾಶಗಳಿವೆ. ಭಾರತ ಸರಕಾರದ ಪರ ಅಧಿಕೃತವಾಗಿ ವಿದೇಶಕ್ಕೆ ಪ್ರಯಾಣಿಸುವ ಸಂದರ್ಭಲ್ಲೂ ಇದನ್ನು ಬಳಸುತ್ತಾರೆ.

ಸಾಮಾನ್ಯ ಪಾಟ್‌ಪೋರ್ಟ್‌ಗಳಿಗಿಂತ ಭಿನ್ನವಾಗಿ ಕಾಣುವ 28 ಪುಟಗಳ ಟೈಪ್‌ ಡಿ ಪಾಸ್‌ಪೋರ್ಟ್‌ ಇದಾಗಿದ್ದು, ವಯಸ್ಕರಿಗೆ ಗರಿಷ್ಠ 10 ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಕೆಲವೊಮ್ಮೆ 5 ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಗೆ ನೀಡಲಾಗುತ್ತದೆ. ಈ ಪಾಸ್‌ಪೋರ್ಟ್‌ ಅಧಿಕೃತ ಸ್ಥಾನಮಾನ ಒದಗಿಸುತ್ತದೆ. ಅಧಿಕೃತ ಪ್ರವಾಸಗಳೂ ಇದರಿಂದ ಸುಗಮವಾಗಲಿದೆ.

ಪಾಸ್‌ಪೋರ್ಟ್‌ ರದ್ದಾದರೆ  ಪ್ರಜ್ವಲ್‌ ಬಂಧನ ಹೇಗೆ?:

ಪಾಸ್‌ಪೋರ್ಟ್‌ ರದ್ದಾದರೆ ಮೊದಲು ಆರೋಪಿ ಯಾವ ದೇಶದಲ್ಲಿದ್ದಾನೆ ಎಂಬುದರ ಮಾಹಿತಿ ಸಂಗ್ರಹಿಸಿ ಆ ದೇಶಕ್ಕೆ ಪ್ರಜ್ವಲ್‌ ವಿರುದ್ಧದ ಪ್ರಕರಣದ ಸಮೇತ ಮಾಹಿತಿ ನೀಡಬೇಕು. ಆ ದೇಶದ ಜತೆಗೆ ಭಾರತವು ಪರಸ್ಪರ ಕಾನೂನು ನೆರವು ಒಪ್ಪಂದ ಪಡೆದಿರಬೇಕು. ಅನಂತರ ಆರೋಪಿ ತಲೆಮರೆಸಿಕೊಂಡಿರುವ ದೇಶವು ಆತನನ್ನು ವಶಕ್ಕೆ ಪಡೆದು ಭಾರತದ ವಿದೇಶಾಂಗ ಇಲಾಖೆಗೆ ಮಾಹಿತಿ ಕೊಡುತ್ತದೆ. ಬಳಿಕ ಪ್ರಕರಣದ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆದು, ತನಿಖಾಧಿಕಾರಿಗಳ ತಂಡ ವಿದೇಶಿ ಅಧಿಕಾರಿಗಳಿಂದ ಪ್ರಜ್ವಲ್‌ ಅವರನ್ನು ತಮ್ಮ ವಶಕ್ಕೆ ಪಡೆದುಕೊಳ್ಳಬಹುದು. ಮತ್ತೂಂದೆಡೆ ಆ ದೇಶವೇ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿ ಪ್ರಜ್ವಲ್‌ ಅವರನ್ನು ವಿಮಾನದಲ್ಲಿ ಭಾರತಕ್ಕೆ ಕಳುಹಿಸಿಕೊಡಲೂ ಅವಕಾಶಗಳಿವೆ.

ಟಾಪ್ ನ್ಯೂಸ್

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.