ಗಣ್ಯರಿಂದ ಎಸ್‌ಒಪಿ ಉಲ್ಲಂಘನೆ: ತನಿಖಾ ವರದಿ ಕೇಳಿದ ಹೈಕೋರ್ಟ್‌


Team Udayavani, Jul 28, 2020, 7:55 AM IST

ಗಣ್ಯರಿಂದ ಎಸ್‌ಒಪಿ ಉಲ್ಲಂಘನೆ: ತನಿಖಾ ವರದಿ ಕೇಳಿದ ಹೈಕೋರ್ಟ್‌

ಬೆಂಗಳೂರು: ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಸಹಿತ ಕೋವಿಡ್‌-19 ಸುರಕ್ಷಾ ಮಾರ್ಗಸೂಚಿಗಳನ್ನು (ಎಸ್‌ಒಪಿ) ಉಲ್ಲಂ ಸುವ ರಾಜಕಾರಣಿಗಳು ಹಾಗೂ ಸಿನೆಮಾ ನಟರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಮೃದು ಧೋರಣೆ ತಾಳುತ್ತಿರುವ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಇಂತಹ ಪ್ರಕರಣಗಳ ತನಿಖಾ ವರದಿ ಸಲ್ಲಿಸುವಂತೆ ತಾಕೀತು ಮಾಡಿದೆ.

ಈ ಕುರಿತು ಲೆಟ್ಜ್ಕಿಡ್‌ ಫೌಂಡೇಷನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಮಧ್ಯಾಂತರ ಅರ್ಜಿಯನ್ನು ಮುಖ್ಯ ನ್ಯಾ| ಎ.ಎಸ್‌. ಓಕ್‌ ಹಾಗೂ ನ್ಯಾ| ಸಚಿನ್‌ ಶಂಕರ್‌ ಮಗದಮ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರಕಾರದ ಧೋರಣೆಯನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಎಸ್‌ಒಪಿ ಉಲ್ಲಂ ಸಿದ ನಟ ದರ್ಶನ್‌, ಸಚಿವ ನಾಗೇಶ್‌ ಮತ್ತು ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ.ಕೆ. ಸೋಮಶೇಖರ್‌ ಹಾಗೂ ನಾಡಪ್ರಭು ಕೆಂಪೇಗೌಡ ಪುತ್ಥಳಿ ಶಂಕುಸ್ಥಾಪನೆ, ಮಾಜಿ ಸಚಿವ ಪಿ.ಟಿ. ಪರಮೇಶ್ವರ್‌ ನಾಯಕ್‌ ಪುತ್ರನ ಮದುವೆ ಕಾರ್ಯಕ್ರಮ, ಕೆಪಿಸಿಸಿ ಪ್ರತಿಭಟನೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ, ವಿಧಾನಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ ಮಗಳ ಮದುವೆ ಸಮಾರಂಭ, ಸಚಿವ ಬಿ. ಶ್ರೀರಾಮಲು ಅವರಿಂದ ಬಾಗಿನ ಅರ್ಪಣೆ ಕಾರ್ಯಕ್ರಮಗಳಲ್ಲಿ ಎಸ್‌ಒಪಿ ಉಲ್ಲಂಘಿಸಿದ ಸಂಬಂಧ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು ಆ.11ಕ್ಕೆ ಮುಂದೂಡಿತು.
ಅರ್ಜಿದಾರರ ಪರವಾಗಿ ವಕೀಲರಾದ ಪುತ್ತಿಗೆ ರಮೇಶ್‌ ಮತ್ತು ಜಿ.ಆರ್‌. ಮೋಹನ್‌ ವಾದ ಮಂಡಿಸಿದರು.

ಸಿಇಟಿ ಪ್ರಶ್ನಿಸಿ ಅರ್ಜಿ ಸಲ್ಲಿಕೆ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಸಿಇಟಿ ಪರೀಕ್ಷೆ ಗಳನ್ನು ಮುಂದೂಡುವಂತೆ ಸರಕಾರಕ್ಕೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲರಾದ ಎಸ್‌.ಪಿ. ಪ್ರದೀಪ್‌ ಕುಮಾರ್‌ ಹಾಗೂ ಎಸ್‌. ಹನುಮಂತೇಗೌಡ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಸಿಇಟಿ ರದ್ದತಿಗೆ ಆಗ್ರಹ
ಕೋವಿಡ್ ಹಿನ್ನೆಲೆಯಲ್ಲಿ ತಾಂತ್ರಿಕ ಮತ್ತು ಇತರ ವೃತ್ತಿಪರ ಶಿಕ್ಷಣದ ಪ್ರವೇಶಕ್ಕೆ ಜು. 30 ಮತ್ತು 31ರಂದು ನಡೆಯಲಿರುವ ಸಿಇಟಿ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಆಗ್ರಹಿಸಿದೆ.

ವೆಂಟಿಲೇಟರ್‌ ಹಗರಣ: ಅರ್ಜಿ
ಬೆಂಗಳೂರು: ವೆಂಟಿಲೇಟರ್‌, ಪಿಪಿಇ ಕಿಟ್‌ ಹಾಗೂ ಔಷಧಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್‌ ಆರೀಫ್‌ ಜಮೀಲ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.