ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಸೋವಿ ಆಹಾರ
Team Udayavani, Apr 5, 2017, 3:45 AM IST
ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ರಿಯಾಯಿತಿ ದರದ ಕ್ಯಾಂಟೀನ್ ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ. 21 ಜಿಲ್ಲಾ ಆಸ್ಪತ್ರೆ ಹಾಗೂ 146 ತಾಲೂಕು ಆಸ್ಪತ್ರೆಗಳಲ್ಲಿ 4.50 ರೂ.ಗೆ ಇಡ್ಲಿ ಸಾಂಬಾರ್, 9 ರೂ.ಗೆ ರೈಸ್ಬಾತ್ ಅಥವಾ ಅನ್ನಧಿಸಾಂಬಾರ್, 8 ರೂ.ಗೆ 2 ಚಪಾಟಿ ಪಲ್ಯ ಒದಗಿಸಲಿದೆ.
ರಿಯಾಯಿತಿ ದರದ ಕ್ಯಾಂಟೀನ್ ತೆರೆಯಲು ಸ್ತ್ರೀ ಶಕ್ತಿ ಗುಂಪುಗಳು, ಸ್ವಸಹಾಯ ಸಂಘಗಳು, ವಿಧವೆಯರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಆಹಾರ ಸಿದ್ಧಪಡಿಸಲು ಅಗತ್ಯವಾದ ಆಹಾರ ಧಾನ್ಯ, ಬೇಳೆ-ಕಾಳು ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ಪೂರೈಕೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಎಲ್ಲ ಜಿಲ್ಲಾ, ತಾಲೂಕು ಆರೋಗ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕ್ಯಾಂಟೀನ್ ತೆರೆಯಲು ನಿಯಮಾನುಸಾರ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಸೂಚಿಸಲಾಗಿದೆ.
ಆಸ್ಪತೆಗಳಿಗೆ ಬರುವ ಬಡ ರೋಗಿಗಳು, ಅವರ ಸಹಾಯಕರು ಮತ್ತು ಆಸ್ಪತ್ರೆಗಳ ಡಿ ದರ್ಜೆಯ ಸಿಬ್ಬಂದಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಾಹಾರ ಒದಗಿಸಬೇಕು. ಕ್ಯಾಂಟೀನ್ ತೆರೆಯಲು ಸರ್ಕಾರವೇ ಮೂಲ ಸೌಕರ್ಯ ಒದಗಿಸಲಿದ್ದು, ಉಚಿತ ಸ್ಥಳಾವಕಾಶ, ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸಲಿದೆ. ಕ್ರೆಡೆಲ್ ಮೂಲಕ ಶುದ್ಧ ಕುಡಿಯುವ ನೀರಿನ ಘಟಕ, ಪಾತ್ರೆ ತೊಳೆಯುವ ಯಂತ್ರವನ್ನು ಸರ್ಕಾರವೇ ಹಾಕಿ ಕೊಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ