ಸಿದ್ದರಾಮಯ್ಯ ಸೋಲು ನನ್ನ ಸಾವಿಗಿಂತ ನೋವು: ಸ್ವೀಕರ್ ರಮೇಶ್ ಕುಮಾರ್
Team Udayavani, Dec 9, 2018, 5:20 PM IST
ಕೋಲಾರ: ಸ್ಪೀಕರ್ ರಮೇಶ್ ಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ನೆನೆದು ವೇದಿಕೆಯಲ್ಲೇ ಕಣ್ಣೀರು ಹಾಕಿದ ಘಟನೆ ಭಾನುವಾರ ನಡೆದಿದೆ.
ಕುರುಬ ಸಮುದಾಯದವರು ಆಯೋಜಿಸಿದ್ದ ಕನಕ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು ಕುರಿಕಾಯೋ ಸಮುದಾಯದಲ್ಲಿ ಹುಟ್ಟಿ 13 ಬಾರಿ ಬಜೆಟ್ ಮಂಡಿಸಿದ ಧೀಮಂತ ನಾಯಕ ಸಿದ್ದರಾಮಯ್ಯ ಅವರು ಎಂದು ಹಾಡಿ ಹೊಗಳಿದರು.
ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಮಾತನಾಡುವವರಿಗೆ ಪರೋಕ್ಷವಾಗಿ ನಾವು ಬೆಂಬಲ ಕೊಡುತ್ತೇವಾ ಎಂದು ವರ್ತೂರು ಪ್ರಕಾಶ್ ಅವರಿಗೆ ಟಾಂಗ್ ನೀಡಿದರು.
ನಾವು ಸಿದ್ದರಾಮಯ್ಯ ಅವರಿಗೆ ಕಾಲೊಂದು ಹಿಡಿಯಲಿಲ್ಲ. ಕೋಲಾರಕ್ಕೆ ಬನ್ನಿ ಅಂದು ಆದರೆ ಅವರು ಇಲ್ಲ ಕಣಯ್ಯ ನಾನು ಚಾಮುಂಡೇಶ್ವರಿಯಲ್ಲೇ ಸ್ಪರ್ಧಿಸುವುದು ಎಂದಿದ್ದರು. ಕೋಲಾರಕ್ಕೆ ಬಂದಿದ್ದರೆ ಅವರ ಸೋಲು ಆಗುತ್ತಿರಲಿಲ್ಲ. ಅವರ ಸೋಲು ನನಗೆ ನನ್ನ ಸಾವಿಗಿಂತಲೂ ಹೆಚ್ಚು ನೋವು ಎಂದು ವೇದಿಕೆಯಲ್ಲೇ ಕಣ್ಣೀರಿಟ್ಟರು.
ದಯಮಾಡಿ ಪ್ರತಿಜ್ಞೆ ಮಾಡಿ ಈ ಸಮಾಜದ ಜನ ಇಂತಹ ಅನರ್ಘ್ಯ ರತ್ನವನ್ನು ಯಾವ ಕಾರಣಕ್ಕೂ ಕೆಳಕ್ಕೆ ಬೀಳಲು ಬಿಡಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ