ಗೈರು ಶಾಸಕರ ವಿರುದ್ಧ ಕ್ರಮಕೈಗೊಳ್ಳಲು ನಾನ್ಯಾರು: ರಮೇಶ್ ಕುಮಾರ್
Team Udayavani, Feb 7, 2019, 6:23 AM IST
ಬೆಂಗಳೂರು : ‘ಬಜೆಟ್ ಕಲಾಪಕ್ಕೆ ಗೈರಾಗಿರುವ ಯಾವುದೇ ಶಾಸಕರು ನನ್ನ ಸಂಪರ್ಕಿಸಿಲ್ಲ. ಯಾವುದೇ ಶಾಸಕರು ರಾಜೀನಾಮೆ ನೀಡುವ ವಿಚಾರವೂ ನನಗೆ ಗೊತ್ತಿಲ್ಲ; ಗೈರಾಗಿರುವ ಶಾಸಕರ ವಿರುದ್ದ ಕ್ರಮ ತೆಗೆದುಕೊಳ್ಳಲು ನಾನ್ಯಾರು’ ಎಂದು ರಾಜ್ಯ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
‘ಸದನ ಕಲಾಪಕ್ಕೆ ಯಾವುದೇ ಶಾಸಕರು ಬಾರದಿದ್ದರೆ ನಾನೇನೂ ಮಾಡುವಂತಿಲ್ಲ; ನಲ್ವತ್ತು ಶಾಸಕರು ರಾಜೀನಾಮೆ ಕೊಟ್ಟರೂ ನಾನು ತೆಗೆದುಕೊಳ್ಳುತ್ತೇನೆ’ ಎಂದು ರಮೇಶ್ ಕುಮಾರ್ ನಿರ್ವಿಕಾರ ಚಿತ್ತರಾಗಿ ಹೇಳಿದರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜನ್ನಪ್ಪನಹಳ್ಳಿ ಗ್ರಾಮದಲ್ಲಿ ಗಣೇಶಮೂರ್ತಿ ಮತ್ತು ಪುಷ್ಕರಿಣಿಯನ್ನು ಅನಾವರಣಗೊಳಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಪ್ರಕೃತ ನಾಪತ್ತೆಯಾಗಿರುವ ವಿವಾದಿತ ಶಾಸಕ ಕಂಪ್ಲಿ ಗಣೇಶ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ರಮೇಶ್ ಕುಮಾರ್, “ಶಾಸಕ ಕಂಪ್ಲಿ ಗಣೇಶ್ ಅವರನ್ನು ಬಂಧಿಸುವಂತೆ ಸೂಚನೆ ನೀಡಲು ನಾನೇನು ಪೊಲೀಸ್ ಅಧಿಕಾರಿಯಾ? ಎಂದು ಪ್ರಶ್ನಿಸಿದರು.
‘ನಾನು ಇಲ್ಲಿಗೆ ಬಂದು ದೇವರಲ್ಲಿ ನಾಡಿಗೆ ಮಳೆ ಬೆಳೆ ಸಮೃದ್ದಿ ಉಂಟಾಗಲಿ ಎಂದು ಪ್ರಾರ್ಥಿಸಿದ್ದೇನೆಯೇ ವಿನಾ ರಾಜಕೀಯ ಬೆಳವಣಿಗೆ ಬಗ್ಗೆ ದೇವರಲ್ಲಿ ಅಹವಾಲು ಹೇಳಲು ಬಂದಿಲ್ಲ’ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ