ಚುನಾವಣೆ ಸುಧಾರಣೆ ಚರ್ಚೆ ಯಶಸ್ವಿ: ಸ್ಪೀಕರ್
Team Udayavani, Mar 31, 2022, 6:25 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಎರಡು ದಿನ ನಡೆದ ಚುನಾವಣ ಸುಧಾರಣೆಯ ಕುರಿತ ಚರ್ಚೆಯ ವರದಿಯನ್ನು ಸಂಬಂಧಪಟ್ಟ ಸಂಸ್ಥೆಗಳಿಗೆ ತಲುಪಿಸು ವುದಾಗಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಎರಡು ದಿನಗಳ ಕಾಲ ಎಲ್ಲ ಶಾಸಕರು ಅತ್ಯುತ್ತಮ ಸಲಹೆಗಳನ್ನು ನೀಡಿದ್ದು, ವಿಧಾನ ಸಭೆಯಲ್ಲಿ ಪ್ರತೀ ದಿನದ ಕಾರ್ಯಕಲಾಪದ ಹೊರತಾಗಿ ಸಮಾಜ ಸುಧಾರಿಸುವ ವಿಷಯಗಳ ಕುರಿತು ಮುಕ್ತವಾಗಿ ಚರ್ಚೆಯಾಗಬೇಕು. ಅದಕ್ಕೆ ಕರ್ನಾಟಕ ವಿಧಾನಸಭೆ ಮೇಲ್ಪಂಕ್ತಿಯಾಗಬೇಕು. ಜನರು ಚುನಾವಣೆಯಲ್ಲಿ ಆಯ್ಕೆ ಯಾದ ನಮ್ಮನ್ನು (ಜನಪ್ರತಿನಿಧಿಗಳು) ಮೇಲ್ಪಂಕ್ತಿಯಲ್ಲಿ ಇರಬೇಕು ಎಂದು ಬಯಸುತ್ತಾರೆ. ಅದಂರಂತೆ ನಾವು ನಡೆದುಕೊಳ್ಳುವ ಜವಾಬ್ದಾರಿ ವಹಿಸಿ ಕೊಳ್ಳಬೇಕು.
ಅಭಿಯಾನವಾಗಲಿ
ಸಮಾಜ ಜಾಗೃತವಾಗಬೇಕು. ಅದು ಜಾಗೃತ ಆಗಬೇಕೆಂದರೆ ಸಮಾಜದ ಎಲ್ಲ ರಂಗದಲ್ಲಿಯೂ ಚರ್ಚೆಯಾಗಬೇಕು. ಈ ಚರ್ಚೆ ಸಮಾಜದ ಭಾಗವಾಗಬೇಕು. ಇದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಮಠಾಧೀಶರಿಗೆ ಕಳುಹಿಸಿ ಎಲ್ಲಡೆಯೂ ಚರ್ಚೆಯಾಗುವಂತೆ ನೋಡಿಕೊಳ್ಳುತ್ತೇವೆ. ಇದೊಂದು ಅಭಿಯಾನದ ರೀತಿಯಲ್ಲಿ ಮುಂದು ವರಿಯಬೇಕು. ಸಾಮಾನ್ಯ ಜನರು ನನ್ನ ಮತ ಮಾರಾಟಕ್ಕಿಲ್ಲ ಎಂದು ಬಹಿರಂಗವಾಗಿ ಹೇಳುವ ವ್ಯವಸ್ಥೆ ಬರಬೇಕು. ಈ ಚರ್ಚೆಗಳನ್ನು ಸಂವಿಧಾನ ಬದ್ದ ಸಂಸ್ಥೆಗಳಿಗೆ ತಲುಪಿಸುವ ಕೆಲಸ ಮಾಡುತ್ತೇನೆ. ಚುನಾವಣ ಆಯೋಗ, ರಾಷ್ಟ್ರಪತಿ, ಪ್ರಧಾನಮಂತ್ರಿ, ಸುಪ್ರೀಂ ಕೋರ್ಟ್ ಎಲ್ಲರ ಬಗ್ಗೆಯೂ ಚರ್ಚೆಯಾಗಿದೆ.
ಶ್ರೇಷ್ಠ ಗೌರವ
ಎಲ್ಲರ ಸಕ್ರಿಯ ಪಾಲ್ಗೊಳ್ಳುವಿಕೆ ಯಿಂದ ಚರ್ಚೆ ಯಶಸ್ವಿಯಾಗಿದೆ. ಇದು ದೇಶದ ಇತಿಹಾಸದಲ್ಲಿ ಕರ್ನಾಟಕ ವಿಧಾನಸಭೆಗೆ ಸಲ್ಲುವ ಶ್ರೇಷ್ಠ ಗೌರವ. ಈ ರೀತಿ ಚರ್ಚೆಗಳು ನಿರಂತರವಾಗಿ ನಡೆಯುವಂತೆ ಮುಂದುವರೆಸುವ ಪ್ರಯತ್ನ ಮಾಡು ತ್ತೇನೆ ಎಂದು ಸ್ಪೀಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ