ಸ್ಪೀಡ್‌ ಗವರ್ನರ್‌ ವಿವಾದ ಗೊಂದಲ


Team Udayavani, Oct 24, 2017, 8:25 AM IST

24-12.jpg

ಬೆಂಗಳೂರು: ರಾಜ್ಯದ ವಾಣಿಜ್ಯ ವಾಹನಗಳಿಗೆ ಸ್ಪೀಡ್‌ ಗವರ್ನರ್‌ ಕಡ್ಡಾಯ ಅಳವಡಿಕೆ ವಿಚಾರ ಈಗ ಮತ್ತಷ್ಟು ಗೊಂದಲದ ಗೂಡಾಗಿದೆ. ಒಂದೆಡೆ ಹೊಸದಾಗಿ ಮಾತ್ರವಲ್ಲ; ಈಗಾಗಲೇ ಇರುವ ವಾಣಿಜ್ಯ ಉದ್ದೇಶದ ಹಳೆಯ ವಾಹನಗಳಿಗೂ ಸ್ಪೀಡ್‌ ಗವರ್ನರ್‌ ಅಳವಡಿಕೆ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಇದರ ಬೆನ್ನಲ್ಲೇ ವ್ಯತಿರಿಕ್ತ ಹೇಳಿಕೆ
ನೀಡಿರುವ ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ, “ಸದ್ಯಕ್ಕೆ ಈಗಿರುವ ವ್ಯವಸ್ಥೆಯೇ ಮುಂದುವರಿಯಲಿದೆ’ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು “ವಾಣಿಜ್ಯ ವಾಹನಗಳಿಗೆ ಅರ್ಹತಾ ಪ್ರಮಾಣಪತ್ರ ನೀಡುವಾಗ ಈಗಿರುವ ವ್ಯವಸ್ಥೆ ಏನಿದೆಯೋ ಸದ್ಯಕ್ಕೆ ಅದೇ ವ್ಯವಸ್ಥೆ ಮುಂದುವರಿಯಲಿದೆ. ಅರ್ಹತಾ ಪ್ರಮಾಣಪತ್ರ ನೀಡುವಾಗ ಸ್ಪೀಡ್‌ ಗವರ್ನರ್‌ ಅಳವಡಿಕೆ ಕಡ್ಡಾಯವಾಗಿರಬೇಕೆಂದು ಆದೇಶ ಹೊರಡಿಸಿಲ್ಲ. ಈ ಸಂಬಂಧದ ಕಡತ ನನ್ನ ಬಳಿಯೇ ಇದೆ. ಪರಿಶೀಲಿಸುವುದಾಗಿ ಹೇಳಿದ್ದೇನೆ ಅಷ್ಟೇ’ ಎಂದು ಸ್ಪಷ್ಟಪಡಿಸಿದರು.

ಕಡ್ಡಾಯಗೊಳಿಸಿ ಆದೇಶ; ಆರೋಪ: ಆದರೆ, ಇದನ್ನು ತಳ್ಳಿಹಾಕಿರುವ ಲಾರಿ ಮಾಲೀಕರ ಸಂಘ ಮತ್ತು ಬೆಂಗಳೂರು ಪ್ರವಾಸಿ ವಾಹನಗಳ ಮಾಲೀಕರ ಸಂಘ, “ಸ್ಪೀಡ್‌ ಗವರ್ನರ್‌ ಕಡ್ಡಾಯಗೊಳಿಸಿ ಸ್ವತಃ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಮಾತನಾಡಿದ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರುಗಳ ಅಸೋಸಿಯೇಷನ್‌ ಅಧ್ಯಕ್ಷ ಜಿ.ಆರ್‌. ಷಣ್ಮುಗಪ್ಪ, ” ಹತ್ತು ದಿನಗಳಲ್ಲಿ ವಾಣಿಜ್ಯ ಉದ್ದೇಶದ ವಾಹನಗಳಿಗೆ ಸ್ಪೀಡ್‌ ಗವರ್ನರ್‌ ಅಳವಡಿಕೆ ಕಡ್ಡಾಯಗೊಳಿಸಿರುವ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ, ಲಾರಿ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಬೆಂಗಳೂರು ಪ್ರವಾಸಿ ವಾಹನಗಳ ಮಾಲಿಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಮಾತನಾಡಿ, “ರಾಜ್ಯದಲ್ಲಿ 1.95 ಲಕ್ಷ ಟ್ಯಾಕ್ಸಿಗಳು, 80 ಸಾವಿರ ಮ್ಯಾಕ್ಸಿ ಕ್ಯಾಬ್‌ಗಳಿವೆ. ಅವೆಲ್ಲವುಗಳಿಗೂ ಇದರ ಬಿಸಿ ತಟ್ಟಲಿದೆ. ನೆರೆಯ ರಾಜ್ಯಗಳಲ್ಲಿ
ಸ್ಪೀಡ್‌ ಗವರ್ನರ್‌ ಬೆಲೆ 3ರಿಂದ 4 ಸಾವಿರ ರೂ. ಇದೆ. ಆದರೆ, ಕರ್ನಾಟಕದಲ್ಲಿ ನಾಲ್ಕೈದು ಪಟ್ಟು ಹೆಚ್ಚಿದೆ. ತಕ್ಷಣ ಸರ್ಕಾರ ಈ ನಿರ್ಧಾರ ಹಿಂಪಡೆಯಬೇಕು. ಇಲ್ಲದಿದ್ದರೆ ಮುಷ್ಕರಕ್ಕೆ ನಾವೂ ಕೈಜೋಡಿಸಲಿದ್ದೇವೆ’ ಎಂದು ಹೇಳಿದರು. 

ಗೊಂದಲಕ್ಕೆ ಕಾರಣವೇನು? 
ವಾಣಿಜ್ಯ ಉದ್ದೇಶದ ವಾಹನಗಳಿಗೆ ಸ್ಪೀಡ್‌ ಗವರ್ನರ್‌ ಅಳವಡಿಕೆ ಕಡ್ಡಾಯಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿದ್ದಾಗಲೇ ಆದೇಶವಾಗಿತ್ತು. ಅದು ಈಗ ಅಧಿಸೂಚನೆಯಾಗಿ ಹೊರ ಬಂದಿದೆ. ಇದು ಗೊಂದಲಕ್ಕೆ ಮೂಲ ಕಾರಣ.  ಕೇಂದ್ರ ಮೋಟಾರು ವಾಹನ ಕಾಯ್ದೆ-1989ರ ನಿಯಮ 118 (2)ರಡಿ ಸ್ಪೀಡ್‌ ಗವರ್ನರ್‌ ಅಳವಡಿಕೆ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದಕ್ಕೆ ಹಿಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಹಿ ಹಾಕಿದ್ದಾರೆ. ತದನಂತರ ಅಧಿಸೂಚನೆ ಹೊರಡಿಸಲಾಗಿದೆ. ಈಗಿನ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಅವರ ಗಮನಕ್ಕೆ ಇದು ಬಂದಿಲ್ಲ. ಹಾಗಾಗಿ, ತಾವು ಅಂತಹ ಯಾವುದೇ ಆದೇಶ ಹೊರಡಿಸಿಲ್ಲ ಎಂದು ತಿಳಿಸಿದ್ದಾರೆ. ಇದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.