ಅಮೂಲ್ಯ ಮನೆ ಮೇಲೆ ಕಲ್ಲು ತೂರಾಟ
Team Udayavani, Feb 22, 2020, 3:05 AM IST
ಕೊಪ್ಪ: ಅಮೂಲ್ಯ ಲಿಯೋನಾಳ ಗುಬ್ಬಗದ್ದೆಯಲ್ಲಿರುವ ಮನೆ ಮೇಲೆ ಕಲ್ಲು ತೂರಲಾಗಿದ್ದು, ಕಿಟಕಿಯ ಗಾಜುಗಳೆಲ್ಲ ಪುಡಿ,ಪುಡಿಯಾಗಿವೆ. ಈ ಬಗ್ಗೆ ಅಮೂಲ್ಯ ತಂದೆ ಓಸ್ವಲ್ಡ್ ನರೋನಾ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗುರುವಾರ ಸಂಜೆ 7.30ರ ಸುಮಾರಿಗೆ ಭಜರಂಗದಳ ತಾಲೂಕು ಸಂಚಾಲಕ ರಾಕೇಶ್ ಹಿರೇಕೊಡಿಗೆ, ಅಚ್ಚು ಶಿವಪುರ, ಬಿಜೆಪಿ ಮುಖಂಡರಾದ ನಾರ್ವೆ ಅನೂಪ್, ಕಿರಣ್ ಎಂಬುವರು ಅಮೂಲ್ಯ ಮನೆಗೆ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಆಕೆ ಇಲ್ಲಿಗೆ ಬಂದರೆ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.
ನಂತರ, ರಾತ್ರಿ 8.45ರ ಸುಮಾರಿಗೆ ರಾಕೇಶ್ ಹಿರೇಕೊಡಿಗೆ, ಸಂಪತ್, ಶರತ್ ಕಾರಂಗಿ ಎಂಬುವರು ಮತ್ತೆ ಮನೆಯ ಬಳಿ ಬಂದು ಕಲ್ಲು, ಇಟ್ಟಿಗೆ ತುಂಡುಗಳನ್ನೆಲ್ಲ ಎಸೆದು ಮನೆಯ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಒಟ್ಟು 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗುಬ್ಬಗದ್ದೆಯ ಅಮೂಲ್ಯ ಮನೆಯ ಬಳಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಎಸ್ಪಿ ಶೃತಿ ಶುಕ್ರವಾರ ಅವರ ಮನೆಗೆ ಭೇಟಿ ನೀಡಿ, ಮಾಹಿತಿ ಕಲೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?