ಗ್ರಾಮೀಣ ಮಟ್ಟದಿಂದಲೇ ಕ್ರೀಡೆ ಅಭಿವೃದ್ಧಿ, ಕ್ರೀಡಾ ಅಂಕಣ ಯೋಜನೆ ಜಾರಿ: ಸಚಿವ ಡಾ.ನಾರಾಯಣಗೌಡ


Team Udayavani, May 10, 2022, 7:02 PM IST

ಗ್ರಾಮೀಣ ಮಟ್ಟದಿಂದಲೇ ಕ್ರೀಡೆ ಅಭಿವೃದ್ಧಿ, ಕ್ರೀಡಾ ಅಂಕಣ ಯೋಜನೆ ಜಾರಿ: ಸಚಿವ ಡಾ.ನಾರಾಯಣಗೌಡ

ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳು ಬಜೆಟ್ ಭಾಷಣದಲ್ಲಿ ಘೋಷಿಸಿದ್ದಂತೆ ನರೇಗಾ ಯೋಜನೆಯಲ್ಲಿ ಗ್ರಾಮೀಣ ಭಾಗದಲ್ಲಿ ಕ್ರೀಡಾ ಅಂಕಣ ನಿರ್ಮಾಣಕ್ಕೆ ವೆಚ್ಚ ಹಾಗೂ ನಿಬಂಧನೆಗಳನ್ನು ಸೂಚಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಂಟಿ ಸುತ್ತೋಲೆ ಹೊರಡಿಸಲಾಗಿದೆ.

ಗ್ರಾಮೀಣ ಮತ್ತು ದೇಶಿಯ ಕ್ರೀಡೆಗಳನ್ನು ಉತ್ತೇಜಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜಡೆಯಡಿ ಸುಮಾರು 504 ಕೋಟಿ ವೆಚ್ಚದಲ್ಲಿ ಕ್ರೀಡಾ ಅಂಕಣ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಅದರಂತೆ ಸ್ಥಳೀಯ ಅವಶ್ಯಕತೆ ಅನುಗುಣವಾಗಿ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ಅಂದಾಜು ಪಟ್ಟಿ ಸಿದ್ದಪಡಿಸಿ ಸುತ್ತೋಲೆ ಹೊರಡಿಸಲಾಗಿದೆ.

ಗ್ರಾಮೀಣ ಭಾಗದಲ್ಲಿ ರನ್ನಿಂಗ್ ಟ್ರ್ಯಾಕ್, ಖೋಖೋ, ಕಬಡ್ಡಿ, ವಾಲಿಬಾಲ್, ಬ್ಯಾಸ್ಕೆಟ್ ಬಾಲ್ ಸೇರಿದಂತೆ ವಿವಿಧ ಕ್ರೀಡಾ ಅಂಕಣಗಳನ್ನು ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ಸೂಚಿಸಿದೆ.

ಇದನ್ನೂ ಓದಿ: ಧ್ವನಿವರ್ಧಕಗಳಿಗೆ ನಿಯಮ; ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ; ಆನಂದ್ ಸಿಂಗ್

ಕಬಡ್ಡಿ ಅಂಕಣ ನಿರ್ಮಾಣಕ್ಕೆ 2.60 ಲಕ್ಷ, ಖೋಖೋ ಅಂಕಣಕ್ಕೆ 3.30 ಲಕ್ಷ, ವಾಲಿಬಾಲ್ ಅಂಕಣಕ್ಕೆ 5.10 ಲಕ್ಷ, ಬ್ಯಾಸ್ಕೆಟ್ ಬಾಲ್ ಅಂಕಣಕ್ಕೆ 5.20 ಲಕ್ಷ , ರನ್ನಿಂಗ್ ಟ್ರ್ಯಾಕ್ ನಿರ್ಮಾಣಕ್ಕಾಗಿ 5 ಲಕ್ಷ ರೂಪಾಯಿ  ಮೀಸಲಿಟ್ಟಿದ್ದು, ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಜಾಗ ಅಥವಾ ಶಾಲೆ, ಕಾಲೇಜು ಮೈದಾನಗಳಲ್ಲಿ ಕ್ರೀಡಾಂಗಣಗಳನ್ನು ಅಭಿವೃದ್ಧಿ ಪಡಿಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಮಟ್ಟದಿಂದಲೇ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದ ಸಚಿವ ಡಾ.ನಾರಾಯಣಗೌಡ ಅವರು, 2022 ರ ಬಜೆಟ್‌ನಲ್ಲಿ ಘೋಷಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಮಾನ್ಯ ಮುಖ್ಯಮಂತ್ರಿಗಳು  ಬಜೆಟ್‌ನಲ್ಲಿ ಕ್ರೀಡಾ ಅಂಕಣ ಯೋಜನೆಯನ್ನು ಘೋಷಿಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ MNREGA ಯೋಜನೆಯಡಿ ಇಡೀ ಭಾರತ ದೇಶಕ್ಕೆ ಮಾದರಿಯಾದ ಕ್ರೀಡಾ ಅಂಕಣಗಳು ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸಿ ತರಬೇತಿ ನೀಡಬೇಕು ಎಂಬುದು ನಮ್ಮ ಸರ್ಕಾರದ ಕನಸು. ಆ ನಿಟ್ಟಿನಲ್ಲಿ ಗ್ರಾಮೀಣ ಪ್ರತಿಭೆಗಳ ಗುರುತಿಸಲು ಹಾಗೂ ಗ್ರಾಮೀಣ ಭಾಗದ ಪ್ರತಿಭೆಗಳು ಅಗತ್ಯ ತಯಾರಿ ಮಾಡಿಕೊಳ್ಳಲು ಕ್ರೀಡಾ ಅಂಕಣಗಳು ನೆರವಾಗಲಿವೆ. ಹಾಗಾಗಿ, ಕ್ರೀಡಾ ಅಂಕಣ ಯೋಜನೆಯನ್ನು ಪಂಚಾಯತ್ ಮಟ್ಟದಲ್ಲಿ ಸಮರ್ಥ ಜಾರಿಗೊಳಿಸಲಾಗುವುದು. ಈ ಮೂಲಕ ಗ್ರಾಮೀಣ ಭಾಗದ ಕ್ರೀಡೆಗಳು ಹಾಗೂ ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.