ಶ್ರೀಲಂಕಾ ಪ್ರಧಾನಿಯ ಇಂದಿನ ಕೊಲ್ಲೂರು ಭೇಟಿ ಮುಂದೂಡಿಕೆ
Team Udayavani, Aug 27, 2017, 1:00 PM IST
ಉಡುಪಿ : ಭಾರೀ ಮಳೆ ಮತ್ತು ಪ್ರತೀಕೂಲ ಹವಮಾನದ ಕಾರಣದಿಂದಾಗಿ ಇಂದು ಭಾನುವಾರ ನಡೆಯಬೇಕಾಗಿದ್ದ ಶ್ರೀಲಂಕಾ ಪ್ರಧಾನಮಂತ್ರಿ ರಣಿಲ್ ವಿಕ್ರಮ ಸಿಂಘೆ ಅವರ ಶ್ರೀ ಕ್ಷೇತ್ರ ಕೊಲ್ಲೂರು ಭೇಟಿಯನ್ನು ಮುಂದೂಡಲಾಗಿದೆ.
ಸಿಂಘೆ ಅವರು ಕುಟುಂಬ ಸಮೇತರಾಗಿ ಇಂದು ಕೊಲ್ಲೂರಿಗೆ ಆಗಮಿಸಬೇಕಾಗಿತ್ತು. ಉಡುಪಿ ಜಿಲ್ಲೆಯಲ್ಲಿ ದಟ್ಟ ಮೋಡ ಕವಿದ ವಾತಾವರಣ ಇರುವ ಕಾರಣದಿಂದ ಭೇಟಿಯನ್ನು ಇನ್ನೊಂದು ದಿನಕ್ಕೆ ನಿಗದಿ ಪಡಿಸಲಾಗುತ್ತಿದೆ ಎಂದು ವರದಿಯಾಗಿದೆ.
ದೇವಸ್ಥಾನದ ಆವರಣದಲ್ಲಿ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ದೇವಾಲಯದ ಸುತ್ತಲಿನ ಅಂಗಡಿಗಳ ಬಾಗಿಲು ತೆರೆಯದಂತೆ ಸೂಚನೆ ನೀಡಲಾಗಿತ್ತು. ಇದೀಗ ಭೇಟಿ ರದ್ದಾಗಿರುವ ಹಿನ್ನಲೆಯಲ್ಲಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ದೇವಾಲಯದಲ್ಲೂ ಎಂದಿನಂತೆ ಮೂಕಾಂಬಿಕೆಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅವರು ಅಲ್ಲಿಂದಲೇ ವಾಪಾಸಾಗಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್