ಶ್ರೀನಿವಾಸ ಪ್ರಸಾದ್‌, ವಿಶ್ವನಾಥ್‌ ಭೇಟಿ: ಕುತೂಹಲ ಮೂಡಿಸಿದ ನಡೆ


Team Udayavani, Jun 15, 2019, 3:06 AM IST

srinivas

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್‌.ವಿಶ್ವನಾಥ್‌ ಅವರು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಎಚ್‌.ವಿಶ್ವನಾಥ್‌ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾತುಗಳು ಕೇಳಿಬಂದಿದ್ದವಾದರೂ ಇಬ್ಬರು ಪಕ್ಷೇತರರು ಮಾತ್ರ ಸಂಪುಟ ಸೇರ್ಪಡೆಯಾದ ಬೆನ್ನಲ್ಲೇ ಭೇಟಿಯಾಗಿರುವುದರಿಂದ ಎಚ್‌.ವಿಶ್ವನಾಥ್‌ ಬಿಜೆಪಿ ಸೇರಲಿದ್ದಾರೆಂಬ ಗುಸು ಗುಸು ಕೇಳಿಬರುತ್ತಿದೆ.

ವಿಶ್ವನಾಥ್‌ ಹಾಗೂ ಶ್ರೀನಿವಾಸ ಪ್ರಸಾದ್‌ ಅವರ ಭೇಟಿ ಸಂದರ್ಭದಲ್ಲಿ ಮಾಜಿ ಸಚಿವ ಯೋಗೇಶ್ವರ್‌ ಉಪಸ್ಥಿತರಿದ್ದರು ಎಂದು ಹೇಳಲಾಗಿದೆ. ಈ ಕುರಿತು “ಉದಯವಾಣಿ’ಗೆ ಪ್ರತಿಕ್ರಿಯಿಸಿದ ವಿಶ್ವನಾಥ್‌, “ಶ್ರೀನಿವಾಸಪ್ರಸಾದ್‌ ಹಾಗೂ ನಾನು ದಶಕಗಳ ಸ್ನೇಹಿತರು.

ಆಗ್ಗಾಗೆ ಭೇಟಿ ಮಾಡುತ್ತಿರುತ್ತೇವೆ. ಅದರಲ್ಲಿ ವಿಶೇಷವೇನಿಲ್ಲ. ನಾನು ಬಿಜೆಪಿಗೆ ಹೋಗುವುದಾದರೆ ಹೇಳಿಯೇ ಹೋಗುತ್ತೇನೆ. ಆದರೆ, ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ. ನಾನು ಜೆಡಿಎಸ್‌ ಶಾಸಕ’ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ರಾಜೀನಾಮೆ ಮುಗಿದ ಅಧ್ಯಾಯ. ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ. ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ನನ್ನ ರಾಜೀನಾಮೆ ಅಂಗೀಕರಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಈಗಲೇ ಹೇಳಲಾಗದು: ವಿಶ್ವನಾಥ್‌ ಕಾಂಗ್ರೆಸ್‌ನಲ್ಲಿದ್ದವರು, ಸಿದ್ದರಾಮಯ್ಯರಿಂದ ಅವರಿಗೆ ತೊಂದರೆಯಾಯಿತು. ಹೀಗಾಗಿ, ಕಾಂಗ್ರೆಸ್‌ ಬಿಟ್ಟು ಜೆಡಿಎಸ್‌ಗೆ ಸೇರಿದ್ದರು. ನಾನೂ ಸೋಲಲು ಸಿದ್ದರಾಮಯ್ಯ ಕಾರಣರಾಗಿದ್ದರು. ವಿಶ್ವನಾಥ್‌ ಬಿಜೆಪಿಗೆ ಬರುತ್ತಾರೆಂದು ಈಗಲೇ ಏನೂ ಹೇಳಲಾಗದು ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್‌ ಹೇಳಿದರು.

ನಾವು ಆ ಬಗ್ಗೆ ಚರ್ಚೆ ಮಾಡಿಲ್ಲ. ಪಕ್ಷದಲ್ಲಿ ಸಾಕಷ್ಟು ಹಿರಿಯರಿದ್ದು ಅವರೆಲ್ಲಾ ಏನು ತೀರ್ಮಾನ ಕೈಗೊಳ್ಳುತ್ತಾರೋ ನೋಡಬೇಕು. ಮೈತ್ರಿ ಸರ್ಕಾರ ಇರುತ್ತೋ ಇಲ್ಲವೋ ಅಂತ ನಾನು ಊಹೆ ಮಾಡಿ ಹೇಳ್ಳೋಕಾಗಲ್ಲ, ಯೋಗೇಶ್ವರ್‌ ಕೂಡ ಮೈತ್ರಿ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಬರಲು ಪ್ರಯತ್ನ ಪಡುತ್ತಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಆಂತರಿಕ ಕಲಹದಿಂದ ಸರ್ಕಾರ ಬಿದ್ದರೆ ಬಿಜೆಪಿ ಕೈ ಕಟ್ಟಿ ಕೂರಲ್ಲ. ಸರ್ಕಾರವೇ ಅತಂತ್ರವಾಗಿರುವಾಗ ಮುಖ್ಯಮಂತ್ರಿ ಗ್ರಾಮವಾಸ್ತವ್ಯಕ್ಕೆ ಹೋದರೆ ಏನು ಪ್ರಯೋಜನ ಎಂದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.