SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!

6 ವಿಷಯಗಳಲ್ಲಿ 175 ಅಂಕ ಗಳಿಸಬೇಕೆಂಬ ನಿಯಮ 125 ಅಂಕಕ್ಕೆ ಇಳಿಕೆ 3 ವಿಷಯದಲ್ಲಿ ಪಾಸಾಗಿ ಉಳಿದವುಗಳ‌ಲ್ಲಿ ಫೇಲಾದವರಿಗೆ ಕೃಪಾಂಕ

Team Udayavani, May 10, 2024, 6:55 AM IST

Exam

ಬೆಂಗಳೂರು: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 1.70 ಲಕ್ಷ ವಿದ್ಯಾರ್ಥಿಗಳ ಪಾಲಿಗೆ ಕೃಪಾಂಕ ವರವಾಗಿದೆ.
ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಿದ ಹಿನ್ನೆಲೆಯಲ್ಲಿ ಫ‌ಲಿತಾಂಶದಲ್ಲಿ ಭಾರೀ ಪ್ರಮಾಣದ ಇಳಿಕೆ ದಾಖಲಾಗಿತ್ತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ ಪ್ರಕಾರ ಫ‌ಲಿತಾಂಶ ಶೇ. 54ಕ್ಕೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಫ‌ಲಿತಾಂಶವನ್ನು ಹೆಚ್ಚಿಸಲು ಶೇ. 20ರ ಕೃಪಾಂಕವನ್ನು ನೀಡಿ ಒಟ್ಟು ಫ‌ಲಿತಾಂಶವನ್ನು ಶೇ.73.40ಕ್ಕೆ ಏರಿಸಲಾಗಿದೆ. ಕೃಪಾಂಕ ದಿಂದ 1.70 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆೆ.

ಕೃಪಾಂಕ ಪಡೆಯಲು ಇದುವರೆಗೆ 6 ವಿಷಯಗಳ ಲಿಖೀತ ಪರೀಕ್ಷೆ ಯಲ್ಲಿ ಒಟ್ಟು ಶೇ.35ರಷ್ಟು (175 ಅಂಕ) ಅಂಕ ಗಳಿಸಬೇಕು ಎಂಬ ನಿಯಮವಿತ್ತು. ಇದನ್ನು ಶೇ.25ಕ್ಕೆ(125 ಅಂಕ) ಇಳಿಸಲಾಗಿದೆ. ಇದರಿಂದ 3 ವಿಷಯ ಗಳಲ್ಲಿ ಕಡ್ಡಾಯವಾಗಿ ಪಾಸಾಗಿದ್ದು, ಇನ್ನು 3 ವಿಷಯಗಳಲ್ಲಿ ಫೇಲಾಗಿದ್ದರೂ ಒಟ್ಟಾರೆ ಆರೂ ವಿಷಯಗಳಿಂದ 125 ಅಂಕಗಳನ್ನು(ಲಿಖೀತ ಪರೀಕ್ಷೆಯಲ್ಲಿ) ಪಡೆದಿರುವ ವಿದ್ಯಾರ್ಥಿಗಳು ಶೇ. 20ರಷ್ಟು ಗ್ರೇಸ್‌ ಅಂಕಗಳೊಂದಿಗೆ ಪಾಸಾಗಿದ್ದಾರೆ. ಶೇ. 20 ಅಂಕವನ್ನು ಅಗತ್ಯವಿದ್ದರೆ ಒಂದೇ ವಿಷಯಕ್ಕೆ ಅಥವಾ ಎರಡು ಅಥವಾ ಮೂರು ವಿಷಯಕ್ಕೆ ಹಂಚಿ ಉತ್ತೀರ್ಣಗೊಳಿಸಲಾಗಿದೆ.

ಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್‌ಕಾಸ್ಟಿಂಗ್‌ ಮಾಡುವ ಪದ್ಧತಿ ಯನ್ನು ಆರಂಭಿಸಿದ ಹಿನ್ನೆಲೆಯಲ್ಲಿ ಪರೀಕ್ಷೆಯ ಸಮಗ್ರತೆ ಮರು ಸ್ಥಾಪಿಸಲು ಸಹಾಯಕವಾಗಿದೆ. ಆದರೆ ಒಟ್ಟಾರೆ ಫ‌ಲಿತಾಂಶ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್‌ ವಿಧಾನ ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫ‌ಲಿತಾಂಶವನ್ನು ಉತ್ತಮ ಪಡಿಸಲು ಸರಕಾರ ತೀರ್ಮಾನಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂಬ ವಿಚಿತ್ರ ತರ್ಕವೊಂದನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಿಟ್ಟಿದೆ.
ಕೃಪಾಂಕಕ್ಕೆ ವಿರೋಧ

ಕಟ್ಟುನಿಟ್ಟಿನ ಪರೀಕ್ಷೆಯ ಪರಿಣಾಮ ದಿಂದ ಅನುತ್ತೀರ್ಣಗೊಂಡ ವಿದ್ಯಾರ್ಥಿ ಗಳಿಗೆ ಶೇ. 20 ಕೃಪಾಂಕ ನೀಡಿ ತೇರ್ಗಡೆ ಮಾಡುವ ಉದ್ದೇಶವೇನು? ಇದರಿಂದ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಿ ಏನು ಪ್ರಯೋಜನ ಎಂಬ ಪ್ರಶ್ನೆಯನ್ನು ಹಲವು ಶಿಕ್ಷಣ ತಜ್ಞರು ಎತ್ತಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳಿಗೆ ತಮ್ಮ ಫ‌ಲಿತಾಂಶವನ್ನು ಸುಧಾರಿಸಿಕೊಳ್ಳಲು ವಾರ್ಷಿಕ ಪರೀಕ್ಷೆ- 2 ಮತ್ತು 3 ಎಂಬ ಇನ್ನೆರಡು ಅವಕಾಶಗಳಿವೆ. ಆದ್ದರಿಂದ ಮಂಡಳಿಯ ಇತಿಹಾಸದಲ್ಲೇ ಗರಿಷ್ಠ ಶೇ. 20 ಕೃಪಾಂಕ ನೀಡುವ ಸರಕಾರದ ಈ ತೀರ್ಮಾನ ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ಶಿಕ್ಷಣ ತಜ್ಞರು ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಪೂರ್ವದಲ್ಲಿ ಶೇ. 5 ಕೃಪಾಂಕವನ್ನು ನೀಡಲಾಗುತ್ತಿತ್ತು. ಕೋವಿಡ್‌ ಕಾಲದಲ್ಲಿ ಕೃಪಾಂಕವನ್ನು ಶೇ. 10ಕ್ಕೆ ಏರಿಸಿತ್ತು. ಈ ಹಿನ್ನೆಲೆಯಲ್ಲಿ ದಾಖಲೆಯ ಫ‌ಲಿತಾಂಶ ಸಾಧ್ಯವಾ ಗಿತ್ತು. ಈ ಬಾರಿ ಶೇ. 20 ನೀಡಲಾಗಿದ್ದು, ಮುಂದಿನ ವರ್ಷಕ್ಕೆ ಇಷ್ಟೊಂದು ಕೃಪಾಂಕ ನೀಡುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
2024ರ ಎಲ್ಲ 3 ಎಸೆಸೆಲ್ಸಿ ಪರೀಕ್ಷೆಗಳಿಗೆ ನೀಡುವ ಕೃಪಾಂಕ ಪಡೆಯಲು ಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ. ಕೃಪಾಂ ಕದ ಪ್ರಮಾಣವನ್ನು ಶೇ. 10ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

ಶೇ.100 ಫ‌ಲಿತಾಂಶ ಪಡೆದ ಶಾಲೆಗಳಲ್ಲಿ ಇಳಿಕೆ
2023-24ರಲ್ಲಿ ಸರಕಾರಿ -785, ಅನುದಾನಿತ-206 ಮತ್ತು ಅನುದಾನ ರಹಿತ 1,287 ಶಾಲೆಗಳು ಸಹಿತ ಒಟ್ಟು 2,288 ಶಾಲೆಗಳು ಶೇ. 100 ಫ‌ಲಿ ತಾಂಶ ಪಡೆದಿವೆ. ಕಳೆದ ಬಾರಿ 3,823 ಶಾಲೆಗಳು ಈ ಸಾಧನೆ ಮಾಡಿದ್ದವು.

ಶೂನ್ಯ ಫ‌ಲಿತಾಂಶದ ಶಾಲೆಗಳು ಹೆಚ್ಚಳ
ಈ ಸಾಲಿನಲ್ಲಿ ಸರಕಾರಿ- 3, ಅನುದಾನಿತ-13, ಅನುದಾನ ರಹಿತ – 62 ಶಾಲೆಗಳು ಸಹಿತ ಒಟ್ಟು 78 ಶಾಲೆಗಳು ಶೂನ್ಯ ಫ‌ಲಿತಾಂಶ ಪಡೆದಿವೆ. ಕಳೆದ ಸಾಲಿನಲ್ಲಿ 34 ಶಾಲೆಗಳು ಮಾತ್ರ ಶೂನ್ಯ ಫ‌ಲಿತಾಂಶ ಪಡೆದಿದ್ದವು.

ಉತ್ತಮ ಶ್ರೇಣಿಯಲ್ಲಿಯೂ ಕುಸಿತ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಎ ಪ್ಲಸ್‌ನಿಂದ ಬಿ ತನಕದ ಶ್ರೇಣಿ (ಶೇ. 60ರಿಂದ ಶೇ.100) ಪಡೆದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕುಸಿತ ಕಂಡಿದೆ. ಇದೇ ವೇಳೆ ಸಿ ಪ್ಲಸ್‌ ಮತ್ತು ಸಿ ಶ್ರೇಣಿ (ಶೇ.35 ರಿಂದ ಶೇ.59) ಪಡೆದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆ ದಾಖಲಾಗಿದೆ. ಈ ವರ್ಷ ಎ ಪ್ಲಸ್‌ ಶ್ರೇಣಿ ಯನ್ನು 39,034, ಎ ಶ್ರೇಣಿ 86619, ಬಿ ಪ್ಲಸ್‌ 1,12472, ಬಿ 1,39178 ವಿದ್ಯಾರ್ಥಿಗಳು ಪಡೆದಿದ್ದಾರೆ. ಸಿ ಪ್ಲಸ್‌ ಶ್ರೇಣಿಯನ್ನು 1,56,487 ಮತ್ತು ಸಿ ಶ್ರೇಣಿಯನ್ನು 1,65,443 ವಿದ್ಯಾರ್ಥಿಗಳು ಪಡೆದಿದ್ದಾರೆ. ಕೃಪಾಂಕದಿಂದಾಗಿ ಸಿ ಮತ್ತು ಸಿ ಪ್ಲಸ್‌ ಶ್ರೇಣಿಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.