SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ ; ಯಾವ ದಿನ ಯಾವ ಸಬ್ಜೆಕ್ಟ್ ಇಲ್ಲಿದೆ ವಿವರ
Team Udayavani, May 19, 2020, 6:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕೋವಿಡ್ ಸಂಬಂಧಿತ ಲಾಕ್ ಡೌನ್ ಕಾರಣದಿಂದ ರಾಜ್ಯದಲ್ಲಿ ಅನಿರ್ಧಾಷ್ಟವಧಿಗೆ ಮುಂದೂಡಲ್ಪಟ್ಟಿದ್ದ SSLC ಪರೀಕ್ಷಾ ದಿನಾಂಕವನ್ನು ಮಂಡಳಿಯು ಪ್ರಕಟಿಸಿತ್ತು.
ಈ ಪ್ರಕಾರ ಜೂನ್ 25ರಿಂದ ಜುಲೈ 3ನೇ ತಾರೀಖಿನವರೆಗೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿವೆ. ಇದಕ್ಕೆ ಸಂಬಂಧಿಸಿದ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇದೀಗ ಪ್ರಕಟಿಸಿದ್ದು, ಪರೀಕ್ಷಾ ದಿನಾಂಕ ವಿವರಗಳು ಈ ಕೆಳಗಿನಂತಿವೆ.
ಎಲ್ಲಾ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರ ಅವಧಿಯಲ್ಲಿ ನಡೆಯಲಿವೆ.
SSLC ಪರೀಕ್ಷೆಯ ಪ್ರಾರಂಭದ ವಿಷಯವಾಗಿ ಜೂನ್ 25, ಗುರುವಾರದಂದು ದ್ವಿತೀಯ ಭಾಷಾ (ಇಂಗ್ಲಿಷ್/ಕನ್ನಡ) ಪರೀಕ್ಷೆಗಳು ನಡೆಯಲಿದೆ. ಜೂನ್ 27ರಂದು ಗಣಿತ, ಜೂನ್ 29ರಂದು ವಿಜ್ಞಾನ, ಜುಲೈ 01ಕ್ಕೆ ಸಮಾಜ ವಿಜ್ಞಾನ, ಜುಲೈ 2ರಂದು ಪ್ರಥಮ ಭಾಷಾ ಪರೀಕ್ಷೆಗಳು ನಡೆಯಲಿವೆ ಹಾಗೂ ಕೊನೆಯದಾಗಿ ಜುಲೈ 2ರಂದು ಪ್ರಥಮ ಭಾಷಾ ಪರೀಕ್ಷೆಗಳು ನಡೆಯಲಿದೆ.
ಪ್ರಥಮ ಭಾಷೆಗೆ ಗರಿಷ್ಠ 125 ಅಂಕಗಳಿರುತ್ತವೆ ಉಳಿದ ವಿಷಯಗಳಿಗೆ ಗರಿಷ್ಠ 100 ಅಂಕಗಳನ್ನು ನಿಗದಿ ಮಾಡಲಾಗಿದೆ. ಪ್ರಥಮ ಭಾಷೆ ಹಾಗೂ ಐಚ್ಛಿಕ ವಿಷಯಗಳಿಗೆ 3 ಗಂಟೆ ಬರೆಯಲು ಮತ್ತು 15 ನಿಮಿಷ ಪ್ರಶ್ನೆಪತ್ರಿಕೆ ಓದಲು ಹಾಗೂ ದ್ವಿತೀಯ ಮತ್ತು ತೃತೀಯ ಭಾಷೆಗೆ 2 ಗಂಟೆ 45 ನಿಮಿಷ ಬರೆಯಲು ಹಾಗೂ 15 ನಿಮಿಷ ಪ್ರಶ್ನೆ ಪತ್ರಿಕೆಯನ್ನು ಓದಲು ನಿಗದಿಪಡಿಸಲಾಗಿದೆ.
ಜೂನ್ 25 (ಗುರುವಾರ) ದ್ವಿತೀಯ ಭಾಷೆ
ಜೂನ್ 27 (ಶನಿವಾರ) ಗಣಿತ
ಜೂನ್ 29 (ಸೋಮವಾರ) ವಿಜ್ಞಾನ
ಜುಲೈ 01 (ಬುಧವಾರ) ಸಮಾಜ ವಿಜ್ಞಾನ
ಜುಲೈ 02 (ಗುರುವಾರ) ಪ್ರಥಮ ಭಾಷೆ
ಜುಲೈ 03 (ಶುಕ್ರವಾರ) ತೃತೀಯ ಭಾಷೆ
ಜೆ.ಟಿ.ಎಸ್. ವಿದ್ಯಾರ್ಥಿಗಳಿಗೆ ಕೋರ್ ಸಬ್ಜೆಕ್ಟ್ (ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ & ಎಲೆಕ್ಟ್ರಿಕ್ ಇಂಜಿನಿಯರಿಂಗ್ 2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್) ಪರೀಕ್ಷೆ ಜೂನ್ 26 ಶುಕ್ರವಾರದಂದು ನಡೆಯಲಿದೆ.
ಪ್ರಥಮ ಭಾಷೆ ಹಾಗೂ ಐಚ್ಛಿಕ ವಿಷಯಗಳ ಪರೀಕ್ಷೆಗಳು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ನಡೆದರೆ ದ್ವಿತೀಯ ಭಾಷೆ ಹಾಗೂ ತೃತೀಯ ಭಾಷಾ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು