ಎಸ್ಎಸ್ಎಲ್ಸಿ ಅಂಕಪಟ್ಟಿಯಲ್ಲಿ ದೋಷ
Team Udayavani, Sep 9, 2019, 3:05 AM IST
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ಪ್ರೌಢ ಶಾಲೆಗಳಿಗೆ ಕಳುಹಿಸಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಮುದ್ರಣ ದೋಷ, ವಿದ್ಯಾರ್ಥಿಗಳ ಫೋಟೋ ತಲೆಕೆಳಗಾಗಿರುವುದು ಸೇರಿ ಹಲವು ತಪ್ಪುಗಳು ಕಂಡು ಬಂದಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ಒಂದೇ ವಾರದಲ್ಲಿ ಫಲಿತಾಂಶ ನೀಡಿದ ಪರೀಕ್ಷಾ ಮಂಡಳಿಗೆ ಅಂಕಪಟ್ಟಿಯನ್ನು ಸರಿಯಾದ ಸಮಯಕ್ಕೆ ಪೂರೈಸಿಲ್ಲ. ಜತೆಗೆ ಅಂಕಪಟ್ಟಿಯಲ್ಲಿ ಸಾಕಷ್ಟು ದೋಷವಿದೆ ಎಂದು ವಿದ್ಯಾರ್ಥಿಗಳು ಮತ್ತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದರೆ, ಅಂಕಪಟ್ಟಿಯಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ದಂಡ ಕಟ್ಟು ವಂತೆ ಪ್ರೌಢ ಶಿಕ್ಷಣ ಮಂಡಳಿಯು ಶಾಲೆಗಳಿಗೆ ತಿಳಿಸಿದೆ. ಇದಕ್ಕೆ, ಶಾಲೆಗಳು ಮಕ್ಕಳಿಂದಲೇ ಹಣ ವಸೂಲಿ ಮಾಡಬೇಕಾಗಿದೆ. ಮಂಡಳಿಯ ಮುಖ್ಯಸ್ಥರು ಲೋಪ ದೋಷ ಗಮನಿಸದೆ ಮಕ್ಕಳಿಗೆ ಅಂಕಪಟ್ಟಿ ನೀಡಿದ್ದಾರೆ.
ಮಂಡಳಿಯ ಅಧಿಕಾರಿಗಳು ಮಾಡಿರುವ ತಪ್ಪಿಗೆ ಶಾಲೆಗಳು ದಂಡ ಕಟ್ಟಬೇಕೆಂದರೆ, ತಪ್ಪು ಮಾಡಿದ ಅಧಿಕಾರಿಗಳಿಗೆ ಶಿಕ್ಷೆ ಇಲ್ಲವೇ? ಎಂದು ಕರ್ನಾಟಕ ಖಾಸಗಿ ಪ್ರಾಥಮಿಕ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಪ್ರಶ್ನಿಸಿದ್ದಾರೆ. ದಂಡವಿಲ್ಲದೇ ಲೋಪ ಸರಿಪಡಿಸಿಕೊಡಲು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ