ಜನರಿಗೆ ವ್ಯವಸ್ಥೆಯ ಬಗ್ಗೆ ವಿಶ್ವಾಸ‌ ಮೂಡಿಸುವ ರೀತಿಯಲ್ಲಿ SSLC ಪರೀಕ್ಷೆ: ಸುರೇಶ್‌ ಕುಮಾರ್


Team Udayavani, Jun 10, 2020, 1:32 PM IST

ಜನರಿಗೆ ವ್ಯವಸ್ಥೆಯ ಬಗ್ಗೆ ವಿಶ್ವಾಸ‌ ಮೂಡಿಸುವ ರೀತಿಯಲ್ಲಿ SSLC ಪರೀಕ್ಷೆ: ಸುರೇಶ್‌ ಕುಮಾರ್

ಬೆಂಗಳೂರು: ರಾಜ್ಯದ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಇಡೀ ಸಮಾಜ ಎದುರು ನೋಡುತ್ತಿದ್ದು, ಯಾವುದೇ ಅಚಾತುರ್ಯಗಳಿಗೆ ಅವಕಾಶ ನೀಡದೇ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಸಚಿವ ಸುರೇಶ್‌ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್ಎಸ್ಎಲ್ ಸಿ ಪರೀಕ್ಷಾ ಪೂರ್ವ ಸಿದ್ಧತೆಯ‌ ಕುರಿತಂತೆ ರಾಜ್ಯಾದ್ಯಂತ 31 ಜಿಲ್ಲಾ ಕೇಂದ್ರಗಳಿಗೆ ಕಳೆದ ಹದಿನೈದು ದಿನಗಳಲ್ಲಿ ಸುಮಾರು ಐದು ಸಾವಿರ ಕಿಲೋ ಮೀಟರ್ ಗಳಷ್ಟು ಸಂಚಾರ ಕೈಗೊಂಡು, ಸಭೆ ನಡೆಸಿ ನಿರ್ದೇಶನ ನೀಡಿರುವ ಸಚಿವ ಸುರೇಶ್ ಕುಮಾರ್, ಇಂದು ತಮ್ಮ ಅಭಿಯಾನದ ಕಡೆಯ ಭಾಗವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿದರು.

ಉಚ್ಛ ನ್ಯಾಯಾಲಯದ ನಿರ್ದೇಶನದ ಅನುಸಾರ ನಡೆಯುತ್ತಿರುವ ಪರೀಕ್ಷೆಗಳು ಸಮಾಜಕ್ಕೆ ಭರವಸೆಯನ್ನು ಮೂಡಿಸುವ ರೀತಿಯಲ್ಲಿ‌ ಅಚ್ಚುಕಟ್ಟಾಗಿ‌ ನಿರ್ವಹಣೆಯಾಗಬೇಕು. ಪರೀಕ್ಷೆಗಳು ನಡೆಯುತ್ತಿರುವ ಇದೊಂದು ವಿಶಿಷ್ಟ ಸಾಮಾಜಿಕ ಸಂದರ್ಭವನ್ನು ಪ್ರತಿಷ್ಠೆಯಾಗಿ ಪರಿಗಣಿಸದೇ ನಮ್ಮ ಸಾಮಾಜಿಕ ಬದ್ಧತೆಗೆ ಸವಾಲಾಗಿ ಪರಿಗಣಿಸಿ ಎಲ್ಲ‌ ಅಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕೆಂದು ಸಚಿವರು ಸೂಚಿಸಿದರು.

ವಿದ್ಯಾರ್ಥಿ ಪೋಷಕರ ನಿರೀಕ್ಷೆಗೆ ಅನುಗುಣವಾಗಿ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆಯಬೇಕೆಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಪರೀಕ್ಷೆಗೆ ಮುಂಚೆಯೇ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಸಹಕಾರದಿಂದ ಸ್ಯಾನಿಟೈಜ್ ಮಾಡಬೇಕಲ್ಲದೇ, ಪ್ರತಿ‌ ದಿನದ ಪರೀಕ್ಷೆಯ ಬಳಿಕವೂ ಸ್ಯಾನಿಟೈಜ್ ಕ್ರಮಗಳನ್ನು ಅನುಸರಿಸಬೇಕೆಂದು ಅವರು ಸೂಚಿಸಿದರು.

ಜೂನ್ 12 ರಿಂದ 17 ರವರೆಗೆ ದೂರದರ್ಶನ ದ ಚಂದನದಲ್ಲಿ ವಿಶೇಷ ಪುನರ್ಮನನ

ಪ್ರಶ್ನೆ ಪತ್ರಿಕೆಯಾಧಾರಿತವಾದ ವಿಶೇಷ ಪುನರ್ಮನನ ತರಗತಿಗಳನ್ನು ಇದೇ ತಿಂಗಳ‌ 12 ರಿಂದ 17 ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ‌ ಪ್ರಸಾರ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಎಲ್ಲ ವಿದ್ಯಾರ್ಥಿಗಳು ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕೆಂದು ಹೇಳಿದರು.

ಆರೋಗ್ಯ ಇಲಾಖೆಯ ಸಹಕಾರವನ್ನು ಸರಿಯಾಗಿ ಬಳಸಿಕೊಳ್ಳಿ

ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದು, ಮಕ್ಕಳು ಹಾಗೂ ಪೋಷಕರಲ್ಲಿ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ನಿಟ್ಟಿನಲ್ಲಿ ಮಾಹಿತಿ ಕರಪತ್ರಗಳು, ವಿಡಿಯೋ ಸಂದೇಶಗಳನ್ನು ರಾಜ್ಯಾದ್ಯಂತ ಪ್ರತಿ ಪೋಷಕ, ವಿದ್ಯಾರ್ಥಿಗೆ ತಲುಪಿಸುವ ಕ್ರಮಕ್ಕೆ ಮುಂದಾಗಲಾಗುವುದೆಂದ ಸಚಿವರು, ಶಿಕ್ಷಣ ಇಲಾಖೆಯ ಸಿಬ್ಬಂದಿಯು ಇಲಾಖೆಯ ಈ ಸದಾಶಯವನ್ನು ವಿದ್ಯಾರ್ಥಿ-ಪೋಷಕರಿಗೆ ತಲುಪಿಸುವ ವಾಹಕರಾಗಿ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.

ಶಿಕ್ಷಣ ಇಲಾಖೆ ಆಯುಕ್ತ ಡಾ.ಜಗದೀಶ್, ಬೆಂಗಳೂರು ‌ನಗರ ಹಾಗೂ ಗ್ರಾಮಾಂತರ ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಈ ಜಿಲ್ಲೆಗಳ‌ ಶಿಕ್ಷಣ ಇಲಾಖೆಯ ಅಧಿಕಾರಿಗಳು‌ ಸಭೆಯಲ್ಲಿ‌ ಹಾಜರಿದ್ದರು.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.