170 ಪುಟದ ಉತ್ತರ ನೀಡಿದ್ದೇವೆ: ಬಿಜೆಪಿಗೆ ಎಸ್‌ಟಿಎಸ್‌, ಹೆಬ್ಬಾರ್‌ ಟಾಂಗ್‌


Team Udayavani, Mar 21, 2024, 8:55 PM IST

17

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ವಿಪ್‌ ಉಲ್ಲಂಘನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಬಂಡಾಯ ಶಾಸಕರಾದ ಎಸ್‌.ಟಿ. ಸೋಮಶೇಖರ್‌ ಹಾಗೂ ಶಿವರಾಮ ಹೆಬ್ಬಾರ್‌ ಪಕ್ಷ ನೀಡಿದ್ದ ಒಂದು ಪುಟದ ನೋಟಿಸ್‌ಗೆ 170 ಪುಟಗಳ ಉತ್ತರ ನೀಡುವ ಮೂಲಕ ಶಿಸ್ತು ಕ್ರಮದ ಎಚ್ಚರಿಕೆಗೂ ಸೆಡ್ಡು ಹೊಡೆದಿದ್ದಾರೆ.

ಅಡ್ಡ ಮತದಾನಕ್ಕಾಗಿ ನೋಟಿಸ್‌ ಕೊಟ್ಟರೂ ಕಾಂಗ್ರೆಸ್‌ ನಾಯಕರ ಮನೆಗೆ ಎಡತಾಕುವುದನ್ನು ನಿಲ್ಲಿಸದ ಈ ಇಬ್ಬರು ಗುರುವಾರ ಡಿಸಿಎಂ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಮತ್ತೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಸ್‌.ಟಿ.ಎಸ್‌., ಪಕ್ಷ ನೀಡಿದ್ದ ನೋಟಿಸ್‌ಗೆ ಉತ್ತರ ನೀಡಿದ್ದೇನೆ ಎಂದಿದ್ದಾರೆ. ಅವರು ಒಂದು ಪುಟದ ನೋಟಿಸ್‌ ಕೊಟ್ಟಿದ್ದರು. ನಾವು 170 ಪುಟಗಳ ವಿವರಣೆ ಕೊಟ್ಟಿದ್ದೇವೆ. ಅವರು ಏನು ಮಾಡುತ್ತಾರೆ ಎಂದು ಕಾಯುತ್ತಿದ್ದೇವೆ. ಹಿಮಾಚಲ, ಗುಜರಾತ್‌ ಎಲ್ಲ ಕಡೆ ಒಂದೊಂದು ರೀತಿಯ ಪ್ರಕರಣಗಳು ನಡೆದಿವೆ. ಅಲ್ಲೆಲ್ಲ ಬಿಜೆಪಿಯವರು ಕಾಂಗ್ರೆಸ್‌ಗೆ ನೋಟಿಸ್‌ ಕೊಟ್ಟಿದ್ದಾರೆ. ಹೇಗೆ ವಿಪ್‌ ಜಾರಿ ಮಾಡಿದ್ದೀರಿ ಎಂದು ಸ್ಪಷ್ಟನೆ ಕೊಡಿ ಎಂದು ಕೇಳಿದ್ದಾರೆ. ಇವೆಲ್ಲವನ್ನೂ ನಮ್ಮ ಸ್ಪಷ್ಟನೆಯಲ್ಲಿ ದಾಖಲಿಸಿದ್ದೇವೆ. ನಮಗೇನೂ ಅವರಿಂದ ಸ್ಪಷ್ಟನೆ ಬೇಕಿಲ್ಲ. ಅದನ್ನು ಕೇಳುವ ಪ್ರಯತ್ನವೂ ನಮ್ಮದಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಶೋಭಾ ಕಿಡಿ:

ಇದೇ ವೇಳೆ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಶಾಸಕ ಎಸ್‌.ಟಿ. ಸೋಮಶೇಖರ್‌ ಕಿಡಿಕಾರಿದ್ದಾರೆ. ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಬಳಿಕ ನನ್ನ ಕ್ಷೇತ್ರಕ್ಕೆ ಭೇಟಿ ಕೊಡುವುದಕ್ಕೆ ನಾನೇ ಭಯಪಡುವಂಥ ಸನ್ನಿವೇಶ ನಿರ್ಮಾಣವಾಗಿದೆ. ಯಾರು ಏನು ಮಾತನಾಡುತ್ತಾರೋ, ಯಾರನ್ನು ಎತ್ತಿ ಕಟ್ಟುತ್ತಾರೋ ಎಂಬ ಭಯ ಪ್ರಾರಂಭವಾಗಿದೆ. ಬೆಂಕಿ ಉಂಡೆಯಂಥ ಮಾತನಾಡುತ್ತಿದ್ದಾರೆ. ನನಗೆ ನನ್ನ ರಕ್ಷಣೆ ಮುಖ್ಯವಾಗಿದ್ದು, ಪೊಲೀಸ್‌ ಆಯುಕ್ತರಲ್ಲಿ ನೆರವು ಕೇಳಬೇಕೆಂದಿದ್ದೇನೆ. ಇವರು ಬೆಂಕಿ ಹಚ್ಚಲು ಬಂದಿದ್ದಾರೋ ಬಾಂಬ್‌ ಇಡಲು ಬಂದಿದ್ದಾರೋ ಗೊತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಪಕ್ಷ ಶುದ್ಧೀಕರಣದ ಬಗ್ಗೆ ಹಾಲಿ ಸಂಸದ ಡಿ.ವಿ. ಸದಾನಂದ ಗೌಡರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನ್ನದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ. ಈ ಹಿಂದೆ ಸಣ್ಣ ವ್ಯತ್ಯಾಸವೂ ಆಗಿರಲಿಲ್ಲ. ಡಿ.ಬಿ. ಚಂದ್ರೇಗೌಡರು ಸಂಸದರಾಗಿದ್ದಾಗ ಆಗಲೀ, ಸದಾನಂದ ಗೌಡರು 10 ವರ್ಷ ಸಂಸತ್‌ ಸದಸ್ಯರಾಗಿದ್ದಾಗ ಆಗಲಿ ಸಮಸ್ಯೆ ಆಗಿರಲಿಲ್ಲ ಎನ್ನುವ ಮೂಲಕ ಶೋಭಾ ಕರಂದ್ಲಾಜೆ ವಿರುದ್ಧ ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿದೆ. ಡಿ.ಕೆ. ಶಿವಕುಮಾರ್‌ ಅವರನ್ನು ಕಳೆದೊಂದು ವಾರದಿಂದ ಭೇಟಿ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಸಮಸ್ಯೆ ಬಗೆಹರಿಸುವಂತೆ ಜಲಮಂಡಳಿಗೆ ಸೂಚಿಸಿದ್ದಾರೆ ಎಂದರು.

Ad

ಟಾಪ್ ನ್ಯೂಸ್

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಪ್ರೇಮಶೇಖರ್‌, ವಿಕಾಸ ಹೊಸಮನಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ

ಪ್ರೇಮಶೇಖರ್‌, ವಿಕಾಸ ಹೊಸಮನಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.