ಕ್ರೀಡಾಂಗಣ ತಡೆಗೋಡೆ, ಸಜ್ಜಾ ಕುಸಿದು ಇಬ್ಬರ ಸಾವು
Team Udayavani, Aug 24, 2019, 3:00 AM IST
ಸಿರುಗುಪ್ಪ: ಬಳ್ಳಾರಿ ಜಿಲ್ಲೆ ಸಿರುಗುಪ್ಪದಲ್ಲಿ ಶುಕ್ರವಾರ ಕ್ರೀಡಾಕೂಟ ನಡೆಯುತ್ತಿದ್ದ ವೇಳೆ ವೀಕ್ಷಣಾ ಗ್ಯಾಲರಿಯ ತಡೆಗೋಡೆ ಹಾಗೂ ಸಜ್ಜಾ ಕುಸಿದು ಇಬ್ಬರು ಮೃತ ಪಟ್ಟಿದ್ದಾರೆ. 28ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಚ್ಚೊಳ್ಳಿ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ನಗರದ ನಿವಾಸಿ ಶಿವಕುಮಾರ್ (35) ಸ್ಥಳೀಯ ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಕೆ.ಬೆಳಗಲ್ಲು ಗ್ರಾಮದ ರಾಮು (18) ಮೃತಪಟ್ಟವರು. ಕ್ರೀಡಾಕೂಟದ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿದ್ದಾಗ ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕ ಮಕಿ ಆರಂಭಗೊಂಡಿತು. ಆಗ ನೂರಾರು ವಿದ್ಯಾರ್ಥಿ ಗಳು ಸ್ಟೇಡಿಯಂನ ವೀಕ್ಷಣಾ ಗ್ಯಾಲರಿಯ ಮೇಲ್ಭಾಗದಲ್ಲಿ ಜಮಾಯಿಸಿ, ಪರಸ್ಪರ ವಾಗ್ವಾದದಲ್ಲಿ ತೊಡಗಿದರು.
ಭಾರ ಹೆಚ್ಚಿದ್ದರಿಂದ ತಡೆಗೋಡೆ ಮತ್ತು ಸಜ್ಜಾ ಕುಸಿದು ಬಿದ್ದು, ವಿದ್ಯಾರ್ಥಿಗಳು ಕೆಳಗೆ ಬಿದ್ದರು. ಸ್ಟೇಡಿಯಂನ ಹಿಂದುಗಡೆ ದ್ವಿಚಕ್ರ ವಾಹನದಲ್ಲಿ ಕುಳಿ ತಿದ್ದ ಶಿವಕುಮಾರ್ ಮೇಲೆಯೇ ಸಜ್ಜಾ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟರು. ತಲೆಗೆ ಪೆಟ್ಟು ಬಿದ್ದಿದ್ದ ವಿದ್ಯಾರ್ಥಿ ರಾಮುವನ್ನು ಬಳ್ಳಾರಿ ವಿಮ್ಸ್ಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ತೀವ್ರವಾಗಿ ಗಾಯಗೊಂಡ 16 ವಿದ್ಯಾರ್ಥಿಗಳನ್ನು ಬಳ್ಳಾರಿ ವಿಮ್ಸ್ಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ