ಸ್ಟಾರ್ ವರ್ಗೀಕೃತ ಹೋಟೆಲ್ಗಳಿಗೆ ಕೈಗಾರಿಕಾ ಸ್ಥಾನಮಾನ: ರಾಜ್ಯ ಸರ್ಕಾರದ ಆದೇಶ
Team Udayavani, Mar 22, 2021, 3:13 PM IST
ಬೆಂಗಳೂರು: ಕೋವಿಡ್-19ಕ್ಕೆ ಸಂಕಷ್ಟಕ್ಕೆ ಸಿಲುಕಿ ಜರ್ಜರಿತಗೊಂಡಿರುವ ಹೋಟೆಲ್ ಕ್ಷೇತ್ರದ ಪುನಶ್ಚೇತನಕ್ಕೆ ಪೂರಕವಾಗುವಂತೆ ಸ್ಟಾರ್ ವರ್ಗೀಕೃತ ಹೋಟೆಲ್ಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೋಟೆಲ್ ಅಸೋಸಿಯೇಷನ್ ಆಫ್ ಇಂಡಿಯಾರವರು ಆತಿಥ್ಯ ವಲಯಕ್ಕೆ ಕೈಗಾರಿಕಾ ಸ್ಥಾನಮಾನ ನೀಡಬೇಕೆಂದು ಕೋರಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೋಟೆಲ್ ಉದ್ಯಮಕ್ಕೆ ಕೈಗಾರಿಕಾ ಸ್ಥಾನಮಾನ ನೀಡಿ, ವಿದ್ಯುಚ್ಛಕ್ತಿ ದರ ಹಾಗೂ ಆಸ್ತಿ ತೆರಿಗೆಯಲ್ಲಿ 5 ವರ್ಷಗಳ ಅವಧಿಗೆ ರಿಯಾಯಿತಿ ನೀಡಿ, ಆದೇಶ ಹೊರಡಿಸಿದೆ.
ಇದನ್ನೂ ಓದಿ:ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಜ್ವಾಲಾಮುಖಿ ಸ್ಪೋಟದ ವಿಡಿಯೋ!
ಕರ್ನಾಟಕ ರಾಜ್ಯದಲ್ಲಿ ನೊಂದಣಿಯಾಗಿರುವ 62 ಸ್ಟಾರ್ ವರ್ಗೀಕೃತ ಹೋಟೆಲ್ಗಳಿಗೆ ಹಾಗೂ ಮುಂದಿನ ದಿನಗಳಲ್ಲಿ ನೊಂದಣಿಯಾಗುವ ಸ್ಟಾರ್ ವರ್ಗೀಕೃತ ಹೋಟೆಲ್ಗಳಿಗೆ ಕೈಗಾರಿಕಾ ಸ್ಥಾನಮಾನ ದೊರೆಯಲಿದೆ.
ಈ ಕುರಿತು ಕೈಗಾರಿಕಾ ಅಭಿವೃದ್ಧಿ ಹಾಗೂ ವಾಣಿಜ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಮಾಲೋಚನೆ ಮಾಡಿ, ಮಾರ್ಗಸೂಚಿಗಳನ್ನು ಹೊರಡಿಸಲಿದೆ. ವಿದ್ಯುಚ್ಛಕ್ತಿ ದರ ಹಾಗೂ ಆಸ್ತಿ ತೆರಿಗೆಯಲ್ಲಿ ವಾಣಿಜ್ಯ ಬಳಕೆದಾರ ಮತ್ತು ಕೈಗಾರಿಕೆ ಬಳಕೆದಾರ ನಡುವಿನ ವ್ಯತ್ಯಾಸದ ದರ ಮಾತ್ರ ಇದಕ್ಕೆ ಅನ್ವಯಿಸುತ್ತದೆ.
ಇದನ್ನೂ ಓದಿ: ಕಾಮಗಾರಿ ಬ್ಲಾಸ್ಟ್ ಸದ್ದಿಗೆ ಮಗು ಸಾವು! ಗುಂಡಿಯಿಂದ ಮೃತದೇಹ ತೆಗೆದು ಅಮಾನವೀಯ ಕೃತ್ಯ
ಪ್ರವಾಸೋದ್ಯಮ ವಲಯ ರಾಜ್ಯದಲ್ಲಿ ಪ್ರಮುಖ ಕ್ಷೇತ್ರವಾಗಿದ್ದು, ದೇಶಿ ಪ್ರವಾಸಿಗರನ್ನು ಆಕರ್ಷಿಸುವಲ್ಲಿ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪಾರಂಪರಿಕ ನೈಸರ್ಗಿಕ ಕರಾವಳಿ ಆಧ್ಯಾತ್ಮಿಕ, ಅರಣ್ಯ ಹಾಗೂ ಸಾಹಸಿ ಪ್ರವಾಸ ಒಳಗೊಂಡಂತೆ 778 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರ ರಾಜ್ಯದ ಜಿಎಸ್ಡಿಪಿಗೆ ಶೇ.14.8 ರಷ್ಟು ಕೊಡುಗೆ ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ