ಸರಕಾರಿ ಶಾಲೆಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಿ: ಅರವಿಂದ ಬೆಲ್ಲದ


Team Udayavani, Mar 22, 2022, 6:55 AM IST

ಸರಕಾರಿ ಶಾಲೆಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಿ: ಅರವಿಂದ ಬೆಲ್ಲದ

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಇದರಿಂದ ಸಾಮಾನ್ಯ ಜನರಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ಸರಕಾರಿ ಶಾಲೆಗೆ ಮಕ್ಕಳನ್ನೂ ಕಳುಹಿಸುತ್ತಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸಲಹೆ ನೀಡಿದರು.

ವಿಧಾನ ಸಭೆಯಲ್ಲಿ ಇಲಾಖೆಗಳ ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಇಲ್ಲದಿರುವುದರಿಂದ ಪಾಲಕರು ವಿದ್ಯಾರ್ಥಿಗಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ರಾಜ್ಯ ಸರಕಾರ ಎಲ್‌ಕೆಜಿ ಯುಕೆಜಿ 1 ಸಾವಿರ ಶಾಲೆಗಳನ್ನು ತೆರೆಯುವುದಾಗಿ ಹೇಳಿತ್ತು. ಆದರೆ, ಇದುವರೆಗೂ ತೆರೆಯಲಾಗಿಲ್ಲ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಅಲ್ಲದೇ ಉರ್ದು ಶಾಲೆ ಮತ್ತು ಕನ್ನಡ ಶಾಲೆಗಳನ್ನು ಪ್ರತ್ಯೇಕ ನಿರ್ಮಾಣ ಮಾಡುವುದರಿಂದ ಮಕ್ಕಳಲ್ಲಿ ಭೇದಭಾವ ಮೂಡಿಸಿದಂತಾಗುತ್ತದೆ. ಅದರ ಬದಲು ಒಂದೇ ಶಾಲೆಯಲ್ಲಿ ಮಕ್ಕಳು ಕಲಿಯುವಂತಾಗಬೇಕು. ಉರ್ದು ವಿಷಯ ಕಲಿಯುವಾಗ ಆ ವಿಷಯ ಕಲಿಯುವ ಮಕ್ಕಳು ಹಾಜರಾಗಲು ಅವಕಾಶ ಕಲ್ಪಿಸಬೇಕು. ಇದರಿಂದ ಶಿಕ್ಷಕರು ಉಳಿಯುತ್ತಾರೆ. ಅವರನ್ನು ಖಾಲಿ ಇರುವ ಶಾಲೆಗಳಲ್ಲಿ ಬಳಸಿಕೊಳ್ಳಬಹುದು ಎಂದವರು ಹೇಳಿದರು.

ಇದನ್ನೂ ಓದಿ:ಆರ್‌ಆರ್‌ಆರ್‌ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್‌ ನಟ ಆಮಿರ್‌ ಖಾನ್‌

ಸರಕಾರಿ ಶಿಕ್ಷಕರು ಸರಕಾರಿ ಶಾಲೆಗಳನ್ನು ಸುಧಾರಿಸದಿದ್ದರೆ, ಪರಿಸ್ಥಿತಿ ಗಂಭೀರವಾಗಲಿದೆ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಸದಸ್ಯರ ಆಯ್ಕೆಗೆ ಆ ಶಾಲೆಗಳಲ್ಲಿ ಅಧ್ಯಯನ ಮಾಡುವ ಮಕ್ಕಳ ಪಾಲಕರು ಮತ ಹಾಕುವ ವ್ಯವಸ್ಥೆ ಜಾರಿಗೆ ಬರಬೇಕು. ಆಗ ಪಾಲಕರು ಶಾಲೆಗಳ ಬಗ್ಗೆ ಆಲೋಚನೆ ಮಾಡುತ್ತಾರೆ ಎಂದರು.

ಈ ಸಂದರ್ಭ ಮಧ್ಯ ಪ್ರವೇಶಿಸಿದ ಬಿಜೆಪಿ ಸದಸ್ಯ ಎ.ಎಸ್‌.ಪಾಟೀಲ್‌ ನಡಹಳ್ಳಿ, ಸಮಗ್ರ ಶಿಕ್ಷಣ ವ್ಯವಸ್ಥೆ ಸುಧಾರಿಸುವ ಬಗ್ಗೆ ಗಂಭೀರ ಚರ್ಚೆ ನಡೆಯಬೇಕಿದೆ ಎಂದರು.

ಮಾತು ಮುಂದುವರಿಸಿದ ಅರವಿಂದ ಬೆಲ್ಲದ, ನಮ್ಮ ರಾಜ್ಯದ ಸಂಪತ್ತು ಸೃಷ್ಟಿಸುವ ಶಿಕ್ಷಣ ಇಲಾಖೆಗೆ ಬಜೆಟ್‌ನಲ್ಲಿ ಕೇವಲ ಶೇ 12% ರಷ್ಟು ಅನುದಾನ ನೀಡಲಾಗುತ್ತಿದೆ. ಸರಕಾರಿ ಶಾಲೆಗಳ ಸ್ಥಿತಿ ಸುಧಾರಿಸಬೇಕಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ನೇಮಕವಾಗಬೇಕು. ಸರಕಾರಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ವಾರ್ಷಿಕ 40 ಸಾವಿರ ರೂ. ಖರ್ಚು ಮಾಡುತ್ತಿದ್ದೇವೆ. ಆದರೆ, ಅದರ ಫ‌ಲ ಎಷ್ಟು ಬರುತ್ತಿದೆ ಎನ್ನುವುದನ್ನು ಗಮನಿಸಬೇಕು ಎಂದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.