ಅಭಿಪ್ರಾಯ ಸಂಗ್ರಹ ಕಸರತ್ತು ಮುಕ್ತಾಯ; ಇಂದು ಪಕ್ಷದ ಸಂಸದೀಯ ಮಂಡಳಿಗೆ ರವಾನೆ

ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ, ಜಿಲ್ಲಾ ಕೋರ್‌ ಕಮಿಟಿಗಳ ಸಭೆ

Team Udayavani, Apr 3, 2023, 7:15 AM IST

ಅಭಿಪ್ರಾಯ ಸಂಗ್ರಹ ಕಸರತ್ತು ಮುಕ್ತಾಯ; ಇಂದು ಪಕ್ಷದ ಸಂಸದೀಯ ಮಂಡಳಿಗೆ ರವಾನೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಮತ್ತು ಜಿಲ್ಲಾ ಬಿಜೆಪಿ ಕೋರ್‌ ಕಮಿಟಿಗಳ ಸಭೆ ನಡೆದು, ಆಕಾಂಕ್ಷಿಗಳ ಕುರಿತ ಅಭಿಪ್ರಾಯ ಸಂಗ್ರಹ ಕಸರತ್ತು ರವಿವಾರ ಮುಕ್ತಾಯಗೊಂಡಿದೆ. ಸತತ ಎರಡನೇ ದಿನವಾದ ರವಿವಾರ ಇಡೀ ದಿನ ಕೋರ್‌ ಕಮಿಟಿ ಹಳೇ ಮೈಸೂರು ಭಾಗದ ಜಿಲ್ಲೆಗಳ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿತು.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೀದರ್‌, ಕಲಬುರಗಿ, ಯಾದಗಿರಿ, ಚಾಮರಾಜನಗರ, ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಬಿಜೆಪಿ ಸಂಘಟನಾ ಪ್ರಮುಖರು ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯಗಳನ್ನು ಮಂಡಿಸಿದರು.

ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ, ಕ್ಷೇತ್ರವನ್ನು ಅವಗಣಿಸಿರುವ, ಪಕ್ಷದ ಕಾರ್ಯಕರ್ತರೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲದ, 70 ವರ್ಷ ದಾಟಿರುವ ಶಾಸಕರು ಮತ್ತು ಆಕಾಂಕ್ಷಿಗಳ ಬಗ್ಗೆ ಜಿಲ್ಲಾ ಸಮಿತಿಯ ಸದಸ್ಯರು ಆಕ್ಷೇಪ ಎತ್ತಿದ್ದಾರೆ ಎಂದು ತಿಳಿದುಬಂದಿದೆ.

ಹಾಗೆಯೇ ಕ್ಷೇತ್ರದಲ್ಲಿ ಅಭ್ಯರ್ಥಿಗಳ ವರ್ಚಸ್ಸು, ಪಕ್ಷ ನಿಷ್ಠೆ, ಜಾತಿ ಸಮೀಕರಣ, ಒಬ್ಬ ಅಭ್ಯರ್ಥಿಗೆ ಟಿಕೆಟ್‌ ನೀಡಿದರೆ ಅದರ ಪ್ರಭಾವ ಜಿಲ್ಲೆಯ ಇತರ ಕ್ಷೇತ್ರಗಳ ಮೇಲೆ ಆಗಬಹುದೇ, ಯಾವ ಪಕ್ಷದಿಂದ ಯಾರು ಎದುರಾಳಿ ಆಗಿದ್ದರೆ ಬಿಜೆಪಿಯಿಂದ ಯಾರಿಗೆ ಟಿಕೆಟ್‌ ನೀಡಬಹುದು ಮುಂತಾದ ವಿಷಯಗಳ ಬಗ್ಗೆ ಜಿಲ್ಲಾ ಕೋರ್‌ ಕಮಿಟಿ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು. ಸೋಮವಾರ ರಾಜ್ಯ ಕೋರ್‌ ಕಮಿಟಿ ತನ್ನ ಅಭಿಪ್ರಾಯವನ್ನು ಪಕ್ಷದ ಸಂಸದೀಯ ಮಂಡಳಿಗೆ ಕಳುಹಿಸಿಕೊಡಲಿದೆ.

ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಚರ್ಚೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿರುವ ವರುಣಾ ಮತ್ತು ಕೋಲಾರ ಕ್ಷೇತ್ರದ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಎರಡೂ ಕಡೆ ಸಿದ್ದರಾಮಯ್ಯ ಸ್ಪರ್ಧಿಸಿದರೆ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂದು ಅಭಿಪ್ರಾಯ ವ್ಯಕ್ತವಾಯಿತು. ತಿಂಗಳ ಹಿಂದೆ ಬಿಜೆಪಿ ನಾಯಕರ ಜತೆ ಮುನಿಸಿಕೊಂಡಿದ್ದ ಸಚಿವ ವಿ. ಸೋಮಣ್ಣ ಅವರು ಚಾಮರಾಜನಗರದಿಂದ ಬಿಜೆಪಿ ಅಭ್ಯರ್ಥಿ ಆಗುವುದು ಬಹುತೇಕ ಖಚಿತವಾಗಿದೆ. ಕೋರ್‌ ಕಮಿಟಿ ಸಭೆಯಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಸೋಮಣ್ಣ ಹೆಸರನ್ನು ಉಲ್ಲೇಖಿಸಲಾಗಿದೆ ಅದೇ ರೀತಿ ಹಾಲಿ ಕ್ಷೇತ್ರ ಗೋವಿಂದರಾಜನಗರದಿಂದಲೂ ಅವರ ಒಂದೇ ಹೆಸರು ಪ್ರಸ್ತಾವವಾಗಿದೆ.

ಬೆಂಗಳೂರು ನಗರದಲ್ಲಿ ಚಿಕ್ಕಪೇಟೆಯ ಶಾಸಕ ಉದಯ ಗರುಡಾಚಾರ್‌, ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಜಿಲ್ಲಾ ಕೋರ್‌ ಕಮಿಟಿಯ ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಸವನಗುಡಿಗೆ ತೇಜಸ್ವಿನಿ ಅನಂತಕುಮಾರ್‌, ಚಿಕ್ಕಪೇಟೆಗೆ ಎನ್‌.ಆರ್‌.ರಮೇಶ್‌ ಹೆಸರು ಪ್ರಸ್ತಾವವಾಗಿದೆ.
ಮಡಿಕೇರಿಯ ಶಾಸಕ ಅಪ್ಪಚ್ಚು ರಂಜನ್‌ ಮತ್ತು ವೀರಾಜಪೇಟೆಯ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಟಿಕೆಟ್‌ ನೀಡಬೇಡಿ ಎಂಬ ಅಭಿಪ್ರಾಯವೂ ಕೇಳಿ ಬಂದಿದೆ. ಕೊಡಗಿನಲ್ಲಿ ಬಿಜೆಪಿ ಬಲಿಷ್ಠವಾಗಿದ್ದು ಅಪ್ಪಚ್ಚು ರಂಜನ್‌ ಮತ್ತು ಬೋಪಯ್ಯ ಅವರಿಗೆ ಟಿಕೆಟ್‌ ನಿರಾಕರಿಸಿ ಹೊಸಬರಿಗೆ ಟಿಕೆಟ್‌ ನೀಡುವಂತೆ ಸಲಹೆಗಳು ಬಂದಿವೆ.

ಅಭ್ಯರ್ಥಿಗಳ ಆಯ್ಕೆ
ಅಂತಿಮ ಘಟ್ಟಕ್ಕೆ
ರವಿವಾರದ ಕೋರ್‌ ಕಮಿಟಿ ಸಭೆಯೊಂದಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಈಗಾಗಲೇ ಪ್ರತಿ ಕ್ಷೇತ್ರದಿಂದ ಚುನಾವಣೆಯ ಮೂಲಕ ಸೂಕ್ತ ಅಭ್ಯರ್ಥಿ ಆಯ್ಕೆಗೆ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿರುವ ಬಿಜೆಪಿ, ಇದೀಗ ರಾಜ್ಯ ಕೋರ್‌ ಕಮಿಟಿಯ ಸಭೆಯ ಮೂಲಕ ಕೂಡ ಅಭಿಪ್ರಾಯ ಸಂಗ್ರಹಿಸಿದೆ. ಈ ಎಲ್ಲ ಅಭಿಪ್ರಾಯಗಳ ಜತೆಗೆ ಸರ್ವೆ ವರದಿಗಳು ಕೂಡ ಈಗಾಗಲೇ ಪಕ್ಷದ ವರಿಷ್ಠರನ್ನು ತಲುಪಿದೆ. ಈ ಮೂರು ಮೂಲಗಳಿಂದ ಸಂಗ್ರಹಿಸಿರುವ ಅಭಿಪ್ರಾಯವನ್ನು ವಿಶ್ಲೇಷಿಸಿ ಪಕ್ಷದ ಸಂಸದೀಯ ಮಂಡಳಿ ಅಂತಿಮ ತೀರ್ಮಾನಕ್ಕೆ ಬರಲಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.