ರಾಜ್ಯಕ್ಕೆ ಡಬಲ್ ಎಂಜಿನ್ ಸರ್ಕಾರದಿಂದ ದ್ರೋಹ: ಸುರ್ಜೇವಾಲ
ವಿಶ್ವಾಸ ಕಳೆದುಕೊಂಡ ಬಸವರಾಜ ಬೊಮ್ಮಾಯಿ
Team Udayavani, Apr 5, 2023, 6:55 AM IST
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಯ 8-10 ಶಾಸಕರು, ವಿಧಾನ ಪರಿಷತ್ ಸದಸ್ಯರು ಪಕ್ಷ ತೊರೆಯುತ್ತಿರುವುದನ್ನು ನೋಡಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಿಶ್ವಾಸವಿಲ್ಲವೆಂಬುದು ಸಾಬೀತಾಗುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.
ಮಂಗಳವಾರ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಡಬಲ್ ಎಂಜಿನ್ ಸರ್ಕಾರ ರಾಜ್ಯಕ್ಕೆ ದ್ರೋಹ ಬಗೆದಿದೆ. ಬೊಮ್ಮಾಯಿ ಸರ್ಕಾರ ವಿಫಲವಾಗಿದೆ. ಈ ಸರ್ಕಾರದಲ್ಲಿ ವಿಶ್ವಾಸವಿಲ್ಲವೆಂಬ ಕಾರಣಕ್ಕೆ ಅವರದೇ ಪಕ್ಷದ ಶಾಸಕರು ರಾಜೀನಾಮೆ ಕೊಡುತ್ತಿದ್ದಾರೆ ಎಂದರು.
ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಆ ಪಕ್ಷದ ವಿಧಾನ ಪರಿಷತ್ತಿನ ಸದಸ್ಯರೊಬ್ಬರು ಪ್ರಾಯಶ್ಚಿತ ಸತ್ಯಾಗ್ರಹ ನಡೆಸಿದ್ದಾರೆ, ಮತ್ತೊಂದೆಡೆ ಹಲವರು ಬಿಜೆಪಿ ತೊರೆಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಇವೆಲ್ಲಾ ಪಾಸಿಟಿವ್ ಅಂಶಗಳಾಗುತ್ತಿವೆ. ಜತೆಗೆ ಬಿಪಿಎಲ್ ಕುಟುಂಬ ಸದಸ್ಯರಿಗೆ 10 ಕೆ.ಜಿ. ಅಕ್ಕಿ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಗೌರವಧನ ಹಾಗೂ ಯುವ ನಿಧಿಯಂತಹ ಗ್ಯಾರೆಂಟಿ ಯೋಜನೆಗಳು ಜನರಲ್ಲಿ ವಿಶ್ವಾಸ ಮೂಡಿಸಿವೆ ಎಂದು ಸುರ್ಜೇವಾಲ ತಿಳಿಸಿದರು.
ನಮ್ಮಲ್ಲಿ ಒಗ್ಗಟ್ಟಿದೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅಭ್ಯರ್ಥಿಗಳನ್ನು ಅವಿರೋಧವಾಗಿ ಒಮ್ಮತದಿಂದ ಆಯ್ಕೆ ಮಾಡಿದ್ದೇವೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ 124 ಕ್ಷೇತ್ರಗಳಿಗೆ ಮೊಟ್ಟ ಮೊದಲಿಗೆ ನಾವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. 150 ಮಿಷನ್ನೊಂದಿಗೆ ನಾವು ಕೆಲಸ ಮಾಡುತ್ತಿದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?