ರಾಜ್ಯ ಬಿಜೆಪಿಯಲ್ಲಿ ಸಂಕ್ರಾಂತಿ?
ಶಾ, ನಡ್ಡಾ ಜತೆ ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚೆ
Team Udayavani, Jan 11, 2021, 6:00 AM IST
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಂಕ್ರಾಂತಿ ಬಳಿಕ ಮಹತ್ವದ ಬದಲಾವಣೆಯಾಗುವ ಲಕ್ಷಣಗಳು ಕಾಣಿಸುತ್ತಿವೆ. ಸಿಎಂ ಯಡಿಯೂರಪ್ಪ ಅವರನ್ನು ಏಕಾಏಕಿ ದಿಲ್ಲಿಗೆ ಕರೆಯಿಸಿಕೊಂಡ ವರಿಷ್ಠರು “ಸಂಕ್ರಾಂತಿ ಸೂಚನೆ’ ನೀಡಿ ಕುತೂಹಲ ಕೆರಳಿಸಿದ್ದಾರೆ.
ಬಿಎಸ್ವೈ ಅವರು ರವಿವಾರ ದಿಲ್ಲಿಯಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆಗೆ ಒಂದು ತಾಸು ಚರ್ಚಿಸಿದ್ದಾರೆ. ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ, ಉಪ ಚುನಾವಣೆಗಳ ಸಿದ್ಧತೆ ಸಂಬಂಧ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.
ಭವಿಷ್ಯದಲ್ಲಿ ಯಡಿಯೂರಪ್ಪ ಬಳಿಕದ ನಾಯಕತ್ವದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಅಥವಾ ಪುನರಾರಚನೆ ಯಾ ಯಾವುದೇ ಬದಲಾವಣೆ, ಬೆಳವಣಿಗೆಗಳ ಬಗ್ಗೆ ಎಚ್ಚರದ ಹೆಜ್ಜೆ ಇರಿಸಲು ವರಿಷ್ಠರು ಮುಂದಾಗಿದ್ದಾರೆ. ಏನೇ ಇದ್ದರೂ ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ತೀರ್ಮಾನಿಸಲು ಚಿಂತಿಸಿದ್ದಾರೆ ಎನ್ನಲಾಗಿದೆ.
ಸಭೆ ಬಳಿಕ ಸುದ್ದಿಗಾರರ ಜತೆ ನಗುನಗುತ್ತಲೇ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶೀಘ್ರ ಶುಭ ಸುದ್ದಿ ಸಿಗಲಿದೆ. ಇಂದಿನ ಸಭೆ ಅತ್ಯಂತ ಖುಷಿ, ಸಮಾಧಾನ ತಂದಿದೆ ಎಂದರು.
ರಾಘವೇಂದ್ರರಿಗೆ ಸಚಿವ ಪಟ್ಟ? :
ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಮುಂದೆ ರಾಜ್ಯದಲ್ಲಿ ಯಾವ ರೀತಿ ಪಕ್ಷ ಸಂಘಟಿಸ ಬೇಕು ಮತ್ತು ಅವರಿಗೆ ಯಾವ ಸ್ಥಾನಮಾನ ನೀಡ ಲಾಗುತ್ತದೆ ಎನ್ನುವ ಕುರಿತು ವರಿಷ್ಠರು ಯಡಿಯೂರಪ್ಪ ಅವರೊಂದಿಗೆ ಮುಕ್ತ ಚರ್ಚೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ಯಡಿಯೂರಪ್ಪ ಅವರಿಗೆ ದಕ್ಷಿಣ ಭಾರತದ ಯಾವುದಾದರೂ ರಾಜ್ಯದ ರಾಜ್ಯಪಾಲ ಹುದ್ದೆ ನೀಡುವುದು, ಜತೆಗೆ ಸಿಎಂ ಪುತ್ರ, ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರು ಆಲೋಚನೆ ಹೊಂದಿದ್ದಾರೆ ಎನ್ನಲಾಗಿದೆ. ಇದನ್ನು ಬಿಎಸ್ವೈ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
7 ಮಂದಿಗೆ ಸ್ಥಾನ? :
ದಿಲ್ಲಿ ಭೇಟಿಯ ಬಳಿಕ ರವಿವಾರ ರಾತ್ರಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಪಕ್ಷದ ವರಿಷ್ಠರು ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಅಂತಿಮ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಜನವರಿ 13ರ ಮಧ್ಯಾಹ್ನ 7 ಮಂದಿಯನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ವರಿಷ್ಠರು ಅನುಮತಿ ನೀಡಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ. ಇದು ಸೋಮವಾರ ಪ್ರಕಟವಾಗುವ ನಿರೀಕ್ಷೆ ಇದೆ.
ಇದೇ ಸಂಕ್ರಾಂತಿ ಸೂಚನೆ!
ಈ ನಡುವೆ ಶಾಸಕ ಯತ್ನಾಳ್, “ಮುಖ್ಯಮಂತ್ರಿಗಳನ್ನು ದಿಲ್ಲಿಗೆ ಕರೆಯಿಸಿರುವುದೇ ಸಂಕ್ರಾಂತಿ ಸೂಚನೆ’ ಎಂದಿದ್ದಾರೆ. “ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗಬಹುದು, ಪುನಾರಚನೆ ಯಾಗಬಹುದು’ ಎಂದಿದ್ದಾರೆ.
ಮುಖ್ಯಮಂತ್ರಿ ಒಲವು :
- ತತ್ಕ್ಷಣ ಸಂಪುಟ ವಿಸ್ತರಣೆ, ಬಿಜೆಪಿ ಸರಕಾರ ರಚನೆಗೆ ಕಾರಣ ವಾಗಿರುವವರ ಸೇರ್ಪಡೆ.
- ಆರ್. ಶಂಕರ್, ಎಂ.ಟಿ.ಬಿ. ನಾಗರಾಜ್ ಮತ್ತು ಮುನಿರತ್ನ ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಿ ಮಾತು ಉಳಿಸಿಕೊಳ್ಳುವ ಪ್ರಯತ್ನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ