ಫೆಬ್ರವರಿ ಎರಡನೇ ವಾರದಲ್ಲಿ ರಾಜ್ಯ ಬಜೆಟ್
Team Udayavani, Dec 13, 2017, 9:10 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ ಎರಡನೇ ವಾರದಲ್ಲಿ 2017-18 ನೇ ಸಾಲಿನ ಬಜೆಟ್ ಮಂಡಿಸಲು ತೀರ್ಮಾನಿಸಿದ್ದು, ಬಜೆಟ್ ಗಾತ್ರ 2 ಲಕ್ಷ ಕೋಟಿ ರೂ. ಮುಟ್ಟಲಿದೆ.
ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ಆರಂಭಿಸಿರುವ ಒಂದು ತಿಂಗಳ ಯಾತ್ರೆ ಬಳಿಕ ಸಂಕ್ರಾಂತಿ ನಂತರ ಇಲಾಖಾವಾರು ಹಾಗೂ ಸಂಘ-ಸಂಸ್ಥೆಗಳ ಜತೆ ಬಜೆಟ್ ಪೂರ್ವಭಾವಿ ಸಮಾಲೋಚನೆ ಆರಂಭಿಸಲಿರುವ ಸಿದ್ದರಾಮಯ್ಯ ಅವರು, ಫೆಬ್ರವರಿ 2ನೇ
ವಾರದಲ್ಲಿ ಬಜೆಟ್ ಮಂಡಿಸಲಿದ್ದಾರೆ. ವರ್ಷದ ಮೊದಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ಒಂದೇ ತಿಂಗಳಲ್ಲಿ ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.
ಬಜೆಟ್ ನಂತರ ಮಾರ್ಚ್ 1 ರಿಂದ ಪಕ್ಷದ ನಾಯಕರ ಸಮೇತ ವಿಶೇಷ ಬಸ್ನಲ್ಲಿ ಜನಾಶೀರ್ವಾದ ಯಾತ್ರೆ ನಡೆಸಲು
ತೀರ್ಮಾನಿಸಿದ್ದಾರೆ. ಮೊದಲ ಹಂತದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಯಾತ್ರೆ, ಪಕ್ಷದ ವತಿಯಿಂದ
ಸಂಘಟನಾ ಯಾತ್ರೆ ನಡೆಸಿ ಎರಡನೇ ಹಂತದಲ್ಲಿ ಜನಾಶೀರ್ವಾದ ಯಾತ್ರೆ ನಡೆಸಿದರೆ ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಸಕ್ರಿಯವಾಗಿ ಚಟುವಟಿಕೆಗಳಿಂದ ಇರಿಸಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!