ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ
Team Udayavani, Jun 13, 2019, 3:00 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟದ ವಿಸ್ತರಣೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ. ಸಚಿವ ಸಂಪುಟಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕೋಟಾದಡಿ ತಲಾ ಒಬ್ಬರಂತೆ ಪಕ್ಷೇತರ ಶಾಸಕರಾದ ಆರ್.ಶಂಕರ್ ಹಾಗೂ ನಾಗೇಶ್ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಜೆಡಿಎಸ್ನ ಮತ್ತೂಂದು ಸ್ಥಾನಕ್ಕೆ ಬಿ.ಎಂ.ಫರೂಕ್ ಹೆಸರು ಕೇಳಿ ಬರುತ್ತಿದೆ.
ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮಂತ್ರಿಮಂಡಲದ ಸದಸ್ಯರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧಿಕಾರದ ಹಾಗೂ ಗೋಪ್ಯತಾ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ. ಸಚಿವ ಸಂಪುಟ ಪುನಾರಚನೆಯಾಗಬೇಕು.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಈಗಿನ ಸರ್ಕಾರದಲ್ಲೂ ಸಚಿವರಾಗಿರುವವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಕಾಂಗ್ರೆಸ್ನಲ್ಲಿ ಇತ್ತಾದರೂ ಸದ್ಯಕ್ಕೆ ಸಂಪುಟ ಪುನಾರಚನೆ ಬದಲು ವಿಸ್ತರಣೆಗಷ್ಟೇ ಸೀಮಿತ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ, ಸಂಪುಟದಲ್ಲಿ ಖಾಲಿ ಇರುವ ಮೂರು ಅಥವಾ ಎರಡು ಸ್ಥಾನವನ್ನು ಮಾತ್ರ ಭರ್ತಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಕೆಸಿವಿ ಆಗಮನ: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಗುರುವಾರ ನಗರಕ್ಕೆ ಆಗಮಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು