ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರಕಾರ
Team Udayavani, May 20, 2022, 6:13 PM IST
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರಕಾರ ಶುಕ್ರವಾರ ಆದೇಶ ನೀಡಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ತನಿಖೆಗೆ ಆದೇಶ ಹೊರಡಿಸಿದ್ದು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ಮತ್ತು ಹಿರಿಯ ಅಧಿಕಾರಿ ಎನ್. ಜಯರಾಮ್ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ.30 ದಿನಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಜೆಡಿಎಸ್ ಶಾಸಕ ಸಾ ರಾ ಮಹೇಶ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಸರಣಿ ಆರೋಪ ಮಾಡಿದ್ದರು. ವಿದ್ಯಾರ್ಥಿಗಳಿಗೆ ಬಟ್ಟೆ ಬ್ಯಾಗ್ ಖರೀದಿ, ಪಾರಂಪರಿಕ ಕಟ್ಟಡವಾಗಿದ್ದ ಅವರ ಅಧಿಕೃತ ನಿವಾಸದ ನವೀಕರಣ, ಈಜುಕೊಳ, ಜಿಮ್ ನಿರ್ಮಾಣ ಹಾಗೂ ಆಕೆಗೆ ಸಂಬಂಧಿಸಿದಂತೆ ಕೋವಿಡ್ ಸಂಬಂಧಿತ ಸಾವುಗಳ ಸುಳ್ಳು ಅಂಕಿ ಅಂಶಗಳನ್ನು ಒದಗಿಸಿದ ಆರೋಪವನ್ನೂ ಮಾಡಲಾಗಿದೆ.
ಖರೀದಿಯಲ್ಲಿ ಕಿಕ್ ಬ್ಯಾಕ್ ಪಡೆದಿದ್ದು 6.18 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. 50 ಲಕ್ಷ ರೂ ಖರ್ಚು ಮಾಡಿ ಅನಧಿಕೃತವಾಗಿ ಈಜುಕೊಳ ಮತ್ತು ಜಿಮ್ ನಿರ್ಮಿಸಿದ ಆರೋಪ ಹೊರಿಸಲಾಗಿತ್ತು. ಚಾಮರಾಜನಗರದಲ್ಲಿ ಸಂಭವಿಸಿದ ವೆಂಟಿಲೇಟರ್ ಕೊರತೆಯಿಂದ ಸಾವು ನೋವಿಗೂ ಸಿಂಧೂರಿ ಅವರೇ ಕಾರಣ ಎಂದು ಆರೋಪಿಸಲಾಗಿತ್ತು. ಬಿಜೆಪಿ ಸಂಸದ ಪ್ರತಾಪ್ ಸಿಂಹ ಕೂಡ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು.
ಈ ಕ್ರಮವು ತಮ್ಮ ನೇರವಾದ ವರ್ತನೆಗೆ ಹೆಸರುವಾಸಿಯಾದ ರೋಹಿಣಿ ಸಿಂಧೂರಿ ಅವರಿಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ