ಕೃಷಿ ಚಟುವಟಿಕೆಗಳಿಗೆ ಲಾಕ್ ಡೌನ್ ನಿಂದ ರಿಲೀಫ್ ನೀಡಿದ ರಾಜ್ಯ ಸರಕಾರ – ಏನೇನಿರುತ್ತೆ?
ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೂ ಲಾಕ್ ಡೌನ್ ನಿಂದ ವಿನಾಯಿತಿಯನ್ನು ನೀಡಲಾಗಿದೆ
Team Udayavani, Apr 22, 2020, 5:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯ ಸರಕಾರ ಇಂದು ಮಧ್ಯರಾತ್ರಿಯಿಂದ ಅನ್ವಯಗೊಳ್ಳುವಂತೆ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹೊಸ ಮಾರ್ಗಸೂಚಿ ಪ್ರಕಾರ ಸದ್ಯಕ್ಕಿರುವ ಲಾಕ್ ಡೌನ್ ನಿಂದ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಸೂಕ್ತ ಸುರಕ್ಷತಾ ವಿಧಾನಗಳನ್ನು ಅಳವಡಿಸಿಕೊಂಡು ಕೃಷಿ ಸಂಬಂಧಿತ ಕಾರ್ಯಚಟುವಟಿಕೆಗಳನ್ನು ನಡೆಸುವಂತೆ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
– ಕೃಷಿ ಭೂಮಿಯಲ್ಲಿ ಕೃಷಿಕರು ಹಾಗೂ ಕೃಷಿ ಕಾರ್ಮಿಕರ ಕೆಲಸಕ್ಕೆ ಅನುಮತಿ
– ಎಪಿಎಂಸಿಗಳ ಮೂಲಕ ಕಾರ್ಯನಿರ್ವಹಿಸುವ ಮಂಡಿಗಳಿಗೆ ಅವಕಾಶ.
– ಕೃಷಿ ಉಪಕರಣಗಳು ಹಾಗೂ ಬಿಡಿ ಭಾಗಗಳ ಅಂಗಡಿಗಳನ್ನು ತೆರೆಯಲು ಅನುಮತಿ.
– ರಸಗೊಬ್ಬರ, ಕ್ರಿಮಿನಾಶಕ, ಬೀಜ ಉತ್ಪಾದನೆ, ವಿತರಣೆ ಹಾಗೂ ಮಾರಾಟಕ್ಕೆ ಅವಕಾಶ.
– ಕಂಬೈನ್ ಹಾರ್ವೆಸ್ಟರ್ ಮಾದರಿಯಲ್ಲಿ ಕೃಷಿ ತೋಟಗಾರಿಕೆ ಯಂತ್ರಗಳ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲೆ ಸಾಗಾಟಕ್ಕೆ ಅನುಮತಿ.
– ಹಾಲು ಸಂಗ್ರಹ, ಸಂಸ್ಕರಣೆ, ವಿತರಣೆ ಹಾಗೂ ಮಾರಾಟಕ್ಕೆ ಅವಕಾಶ.
– ಹಾಲು, ಹಾಲಿನ ಉತ್ಪನ್ನಗಳ ಸಂಸ್ಕರಣೆ ಹಾಗೂ ಸಾಗಾಟಕ್ಕೆ ಅವಕಾಶ.
– ಕೋಳಿ, ಕುರಿ ಸಾಕಾಣಿಕೆ ಸೇರಿ ಫಾರ್ಮ್ ಗಳ ಕಾರ್ಯನಿರ್ವಹಣೆಗೆ ಅನುಮತಿ.
– ಪಶು ಆಹಾರ ಉತ್ಪಾದನೆ ಹಾಗೂ ಕಚ್ಚಾವಸ್ತುಗಳ ಸಾಗಾಟಕ್ಕೆ ಅವಕಾಶ.
– ಗೋ ಶಾಲೆ ಸಹಿತ ಪಶು ಆಶ್ರಯ ಕೇಂದ್ರಗಳ ಕಾರ್ಯನಿರ್ವಹಣೆಗೆ ಅವಕಾಶ.
– ಟೀ, ಕಾಫಿ ಮತ್ತು ರಬ್ಬರ್ ಪ್ಲಾಂಟೇಶನ್ ಗಳಿಗೆ ಗರಿಷ್ಠ ಶೇ.50ರಷ್ಟು ಕೆಲಸಗಾರರಿಗೆ ಅವಕಾಶ.
– ಟೀ, ಕಾಫಿ, ರಬ್ಬರ್ ಮತ್ತು ಗೋಡಂಬಿ ಪ್ಯಾಕೇಜ್, ಮಾರಾಟ ಹಾಗೂ ಮಾರ್ಕೆಟಿಂಗ್ ಗೆ ಅವಕಾಶ.
ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೂ ಲಾಕ್ ಡೌನ್ ನಿಂದ ವಿನಾಯಿತಿಯನ್ನು ನೀಡಲಾಗಿದೆ.
– ಮೀನುಗಾರಿಕೆ, ಪ್ಯಾಕೇಜಿಂಗ್, ಮೀನು ಮಾರಾಟ ಮತ್ತು ಮಾರ್ಕೆಟಿಂಗ್ ಗೆ ಅವಕಾಶ.
– ಮೀನು ಉತ್ಪನ್ನಗಳ ಮಾರಾಟ ಹಾಗೂ ನೌಕರರ ಓಡಾಟಕ್ಕೆ ಅವಕಾಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ