ಖಜಾನೆ ಭರ್ತಿಗೆ ಮದ್ಯದಂಗಡಿ ತೆರೆಯಲು ತೀರ್ಮಾನ! ; ಆನ್‌ಲೈನ್‌ ಮದ್ಯ ಮಾರಾಟಕ್ಕೂ ಸಿದ್ಧತೆ


Team Udayavani, Aug 8, 2020, 7:05 AM IST

ಖಜಾನೆ ಭರ್ತಿಗೆ ಮದ್ಯದಂಗಡಿ ತೆರೆಯಲು ತೀರ್ಮಾನ! ; ಆನ್‌ಲೈನ್‌ ಮದ್ಯ ಮಾರಾಟಕ್ಕೂ ಸಿದ್ಧತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಲಾಕ್‌ಡೌನ್‌ನಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಹೊರ ಬರಲು ಸರಕಾರವು ಹಳ್ಳಿಗಳಲ್ಲಿ ಹೊಸದಾಗಿ ಎಂಎಸ್‌ಐಎಲ್‌ ಮದ್ಯದಂಗಡಿಗಳನ್ನು ತೆರೆಯಲು ತೀರ್ಮಾನಿಸಿದೆ.

ರಾಜ್ಯ ಸರಕಾರ ಎಂಎಸ್‌ಐಎಲ್‌ ಮೂಲಕ ಮದ್ಯ ಮಾರಾಟ ಮಾಡಲು 2011ರಲ್ಲಿ 463 ಹಾಗೂ 2016ರಲ್ಲಿ 900 ಸಹಿತ ಒಟ್ಟು 1,363 ಮದ್ಯದಂಗಡಿಗಳನ್ನು ತೆರೆಯಲು ನಿರ್ಧರಿಸಿತ್ತು.

ಮಾರ್ಚ್‌ 31ಕ್ಕೂ ಮೊದಲು 759 ಎಂಎಸ್‌ಐಎಲ್‌ ಮದ್ಯದಂಗಡಿಗಳನ್ನು ಸರಕಾರ ತೆರೆದಿತ್ತು.

ಇನ್ನು ಡಿಸೆಂಬರ್‌ ಅಂತ್ಯಕ್ಕೆ 513 ಎಂಎಸ್‌ಐಎಲ್‌ ಮದ್ಯದಂಗಡಿಗಳನ್ನು ಗ್ರಾಮೀಣ ಪ್ರದೇಶದಲ್ಲಿ ತೆರೆಯುವಂತೆ ಎಂಎಸ್‌ಐಎಲ್‌ಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್ 19 ನಷ್ಟ ಭರ್ತಿಗೆ ತೀರ್ಮಾನ
ಹಾಲಿ ಆರ್ಥಿಕ ವರ್ಷ ಆರಂಭವಾಗುತ್ತಿದ್ದಂತೆ ದೇಶಾದ್ಯಂತ ಲಾಕ್‌ಡೌನ್‌ ಘೋಷಣೆಯಾಗಿದ್ದರಿಂದ ರಾಜ್ಯ ಸರಕಾರದ ಆದಾಯಕ್ಕೆ ಹೊಡೆತ ಬಿದ್ದಿದೆ.

ಲಾಕ್‌ಡೌನ್‌ನಿಂದ ವ್ಯಾಪಾರ ವಹಿವಾಟಿಗೆ ಹೊಡೆತ ಬಿದ್ದಿರುವುದರಿಂದ ಸರಕಾರದ ಸಂಪನ್ಮೂಲ ಸಂಗ್ರಹಕ್ಕೆ ಈ ಮಾರ್ಗ ಅನುಸರಿಸುತ್ತಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬೇಡಿಕೆ ಹೆಚ್ಚಿರುವ ಕಡೆಗಳಲ್ಲಿ ತೆರೆಯಲು ನಿರ್ಧರಿಸಲಾಗಿದೆ.

ಶಾಸಕರ ಅಭಿಪ್ರಾಯ ಅಗತ್ಯವಿಲ್ಲ
ಈ ಹಿಂದೆ ಎಂಎಸ್‌ಐಎಲ್‌ನಿಂದ ಸಿಎಲ್‌ 2 ಶಾಪ್‌ಗ್ಳನ್ನು ತೆರೆಯಲು ಸ್ಥಳೀಯ ಶಾಸಕರು ಹಾಗೂ ಜನ ಪ್ರತಿನಿಧಿಗಳ ಅಭಿಪ್ರಾಯ ಪಡೆಯುವುದುಕಡ್ಡಾಯವಾಗಿತ್ತು. ಸ್ಥಳೀಯರ ವಿರೋಧದ ಹಿನ್ನೆಲೆಯಲ್ಲಿ ಕೆಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಮದ್ಯದಂಗಡಿ ತೆರೆಯಲು ನಿರಾಕರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ 2020ರ ಮಾರ್ಚ್‌ನಲ್ಲಿ ನಡೆದ ಅಬಕಾರಿ ಇಲಾಖೆ ಸಭೆಯಲ್ಲಿ ಶಾಸಕರ ಅಭಿಪ್ರಾಯ ಪಡೆಯುವ ನಿಯಮವನ್ನು ರದ್ದುಪಡಿಸಲಾಗಿದೆ.

ಮದ್ಯ ಮಾರಾಟಗಾರರ ವಿರೋಧ
ರಾಜ್ಯ ಸರಕಾರ ಹೊಸದಾಗಿ ಮತ್ತಷ್ಟು ಎಂಎಸ್‌ಐಎಲ್‌ ಮದ್ಯದ ಅಂಗಡಿಗಳನ್ನು ತೆರೆಯುವುದಕ್ಕೆ ಮದ್ಯ ಮಾರಾಟಗಾರರ ಒಕ್ಕೂಟದವರು ವಿರೋಧ ವ್ಯಕ್ತಪಡಿಸಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಜ್ಯ ಹೈಕೋರ್ಟ್‌ ಈ ಬಗ್ಗೆ ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದು, ಕೋರ್ಟ್‌ ನಿರ್ದೇಶನದಂತೆ ಬಾರ್‌ ಆನರ್ಸ್‌ ಅಸೋಸಿಯೇಶನ್‌ನವರು ಅಬಕಾರಿ ಆಯುಕ್ತರಿಗೆ ಹೊಸದಾಗಿ ಮದ್ಯದಂಗಡಿ ತೆರೆಯದಂತೆ ಮನವಿ ಮಾಡಿದ್ದಾರೆ. ಆದರೆ, ಈ ಕುರಿತು ಅಬಕಾರಿ ಆಯುಕ್ತರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದು ಬಂದಿದೆ.

ಆನ್‌ಲೈನ್‌ ಮದ್ಯ ಮಾರಾಟಕ್ಕೂ ಸಿದ್ಧತೆ
ರಾಜ್ಯ ಸರಕಾರ ಆನ್‌ಲೈನ್‌ ಮೂಲಕ ಮದ್ಯ ಮರಾಟ ಮಾಡುವ ಕುರಿತು ಚಿಂತನೆ ನಡೆಸಿದ್ದು, ಈಗಾಗಲೇ ಖಾಸಗಿ ಕಂಪೆನಿಯೊಂದಿಗೆ ಈ ಕುರಿತು ಮೇ 27ರಂದು ಸಭೆ ನಡೆಸಿ ರಾಜ್ಯಾದ್ಯಂತ ಆನ್‌ಲೈನ್‌ ಮೂಲಕ ಮದ್ಯ ಸರಬರಾಜು ಮಾಡಲು ಅವಕಾಶ ಕಲ್ಪಿಸಲು ಅಬಕಾರಿ ಇಲಾಖೆ ಮಟ್ಟದಲ್ಲಿ ಚರ್ಚೆಯಾಗಿದೆ. ಈ ಕುರಿತು ಸರಕಾರದ ಹಂತದಲ್ಲಿ ಚರ್ಚೆ ಮಾಡಿ ಶೀಘ್ರವೇ ಈ ಬಗ್ಗೆಯೂ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.