ಶಿಕ್ಷಕರು, ಕೌಶಲ ತರಬೇತಿಗೆ ಪೆನ್ಸಿಲ್ವೇನಿಯಾ ಸಹಭಾಗಿತ್ವ: ಡಿಸಿಎಂ ಅಶ್ವತ್ಥನಾರಾಯಣ ಘೋಷಣೆ


Team Udayavani, Aug 14, 2020, 11:05 PM IST

ಶಿಕ್ಷಕರು, ಕೌಶಲ ತರಬೇತಿಗೆ ಪೆನ್ಸಿಲ್ವೇನಿಯಾ ಸಹಭಾಗಿತ್ವ: ಡಿಸಿಎಂ ಅಶ್ವತ್ಥನಾರಾಯಣ ಘೋಷಣೆ

ಬೆಂಗಳೂರು: ಶಿಕ್ಷಕರ ತರಬೇತಿ, ಕೌಶಲ ಶಿಕ್ಷಣ ತರಬೇತಿ, ವೈದ್ಯಕೀಯ ಶಿಕ್ಷಣ, ಪೊಲೀಸ್ ತರಬೇತಿ ಸೇರಿದಂತೆ ಇನ್ನೂ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಮೆರಿಕದ ಪೆನ್ಸಿಲ್ವೇನಿಯಾದೊಂದಿಗೆ ಶೀಘ್ರವೇ ಸಹಭಾಗಿತ್ವ ಮಾಡಿಕೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಉನ್ನತ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಸಹಭಾಗಿತ್ವ ಸಾಧಿಸುವ ಅವಕಾಶಗಳನ್ನು ಗುರುತಿಸುವ ಕುರಿತು ಕಾಮನ್ ವೆಲ್ತ್ ಆಫ್ ಪೆನ್ಸಿಲ್ವೇನಿಯಾದ ವಿಶೇಷ ರಾಯಭಾರಿಯಾದ ಕನ್ನಿಕಾ ಚೌಧರಿ ಅವರೊಂದಿಗೆ ಶುಕ್ರವಾರ ಚರ್ಚಿಸಿದ ನಂತರ ಅವರು ಹೀಗೆ ಹೇಳಿದರು.

ಶಿಕ್ಷಣದ ಮಟ್ಟವನ್ನು ಹೆಚ್ಚಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಕೌಶಲ ಮೈಗೂಡುವಂತೆ ಮಾಡುವುದು ಇಂದಿನ ಅಗತ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಗಮದಲ್ಲಿರಿಸಿಕೊಂಡು ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಮುನ್ನಡೆಸಲು ಪೆನ್ಸಿಲ್ವೇನಿಯಾದೊಂದಿಗಿನ ಸಹಭಾಗಿತ್ವ ಪೂರಕವಾಗಲಿದೆ ಎಂದು ಉಪಮುಖ್ಯಮಂತ್ರಿ ವಿವರಿಸಿದರು.

ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಶಿಕ್ಷಕರ ತರಬೇತಿ ಅಕಾಡೆಮಿ ನಿರ್ದೇಶಕ ಡಾ.ಶಿವಪ್ರಸಾದ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್‌ಗೌಡ, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ, ಜೀವನೋಪಾಯ ಮಿಷನ್‌ ನಿರ್ದೇಶಕ ಡಾ.ರೇಜು ಮತ್ತಿತರರು ಸಭೆಯಲ್ಲಿದ್ದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ ಅವರು ವಿಡಿಯೊ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.