ಪ್ರಧಾನಿ ಮೋದಿ ಪ್ರವಾಸಕ್ಕೆ 34 ಕೋಟಿ ರೂ. ಖರ್ಚು ಮಾಡಿದ ರಾಜ್ಯ ಸರ್ಕಾರ
Team Udayavani, Jun 21, 2022, 1:27 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಹಾಗೂ ಮೈಸೂರು ಪ್ರವಾಸಕ್ಕಾಗಿ ರಾಜ್ಯ ಸರಕಾರ ಒಟ್ಟು 34 ಕೋಟಿ ರೂ. ಖರ್ಚು ಮಾಡಿದ್ದು, ರಸ್ತೆ ಹಾಗೂ ಮೂಲಸೌಕರ್ಯ ಯೋಜನೆಗೆ ಈ ಹಣ ವಿನಿಯೋಗಿಸಲಾಗಿದೆ.
ಮೋದಿಯವರು ಬೆಂಗಳೂರಿನಲ್ಲಿ ಕೇವಲ ನಾಲ್ಕು ಗಂಟೆ ಮಾತ್ರ ಇದ್ದರು. ಇದಕ್ಕಾಗಿ ಬಿಬಿಎಂಪಿ ಭರ್ಜರಿ ಸಿದ್ದತೆ ನಡೆಸಿತ್ತು. ನಗರದಲ್ಲಿ ಪ್ರಧಾನಿ ಸಂಚರಿಸಿದ ಪ್ರತಿ ರಸ್ತೆ ರಸ್ತೆಗಳನ್ನು ರಿಪೇರಿ ಮಾಡಿ ಹೊಳೆಯುವಂತೆ ಮಾಡಲಾಗಿದೆ. ಇದಕ್ಕಾಗಿ 14 ಕೋಟಿ ರೂ. ಖರ್ಚಾಗಿದೆ.
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಈ ಬಗ್ಗೆ ಮಾಹಿತಿ ನೀಡಿ ಪ್ರಧಾನಿ ರಾಜ್ಯಕ್ಕೆ ಬರುತ್ತಿರುವುದೇ ನಮಗೆಲ್ಲ ಸಂತೋಷದ ವಿಚಾರವಾಗಿದೆ. ಆ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ಅನುದಾನ ಬಳಸಬಹುದಾದ ʻವಿವೇಚನ ಅನುದಾನದಡಿʼ ಫುಟ್ಪಾತ್ ರಸ್ತೆ, ಕಾಮಗಾರಿ, ಡಾಂಬರೀಕರಣ, ಚರಂಡಿ, ಊಟ, ವಸತಿ ಕಲ್ಪಿಸಲು ನಿಟ್ಟಿನಲ್ಲಿ ಬರೊಬ್ಬರಿ 14 ಕೋಟಿ ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂಓದಿ:ಠಾಕ್ರೆ ಸರ್ಕಾರಕ್ಕೆ “ಬಂಡಾಯ”ದ ಬಿಸಿ: ಶಿವಸೇನೆಯ 22 ಶಾಸಕರು ಸೂರತ್ ಹೋಟೆಲ್ ನಲ್ಲಿ ವಾಸ್ತವ್ಯ
ಮೈಸೂರಿನಲ್ಲೂ ರಸ್ತೆಗಳಿಗೆ ಹೊಸ ರೂಪವನ್ನೇ ನೀಡಲಾಗಿತ್ತು. ವಸತಿ, ಯೋಗ ಕಾರ್ಯಕ್ರಮಗಳ ಸಿದ್ಧತೆ ಉಪಹಾರ ಸೇರಿದಂತೆ ಬರೊಬ್ಬರಿ 20 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ